AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಕಾಡಿನಲ್ಲಿ ಮಹಿಳೆಯ ತಲೆಬುರುಡೆ ಮತ್ತು ಎಲುಬುಗಳು ಪತ್ತೆಯಾಗಿವೆ. ಮೃತ ಮಹಿಳೆ ನಳಿನಿ ಎಂದು ಗುರುತಿಸಲಾಗಿದೆ. ನಳಿನಿ ಒಂದು ತಿಂಗಳಿಂದ ನಾಪತ್ತೆಯಾಗಿದ್ದರು. ಇದೀಗ, ನೇಣು ಬಿಗಿದ ಸ್ಥೀತಿಯಲ್ಲಿ ನಳಿನ ದೇಹದ ಅವೇಶಗಳು ಪತ್ತೆಯಾಗಿವೆ.

ಮಂಗಳೂರು: ಕಾಡಿನಲ್ಲಿ ಮಹಿಳೆಯ ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆ
ನಳಿನಿ
TV9 Web
| Edited By: ವಿವೇಕ ಬಿರಾದಾರ|

Updated on: Nov 04, 2024 | 11:43 AM

Share

ಮಂಗಳೂರು, ನವೆಂಬರ್​ 04: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು (Puttur) ತಾಲೂಕಿನ ಕುಂಬ್ರದ ಒಳಮೊಗ್ರು ಗ್ರಾಮದ ಕಾಡಿನಲ್ಲಿ ಮಹಿಳೆಯ (Woman) ತಲೆ ಬುರುಡೆ ಹಾಗೂ ಎಲುಬುಗಳು ಪತ್ತೆಯಾಗಿವೆ. ಮಹಿಳೆಯ ತಲೆಗೂದಲು ನೇಣುಕುಣಿಕೆಯಲ್ಲಿ ಜೋತಾಡುತ್ತಿದ್ದು, ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ. ನಳಿನಿ ಮೃತ ಮಹಿಳೆ ಎಂದು ತಿಳಿದುಬಂದಿದೆ. ನಳಿನಿಯವರು ಉರ್ವ ನಿವಾಸಿ ಸಂಜೀವ ಎಂಬವರನ್ನು ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದರು. ನಳಿನಿ ಅವರು ಆಗಾಗ ತನ್ನ ತಾಯಿ ಮನೆಗೆ ಹೋಗಿ ಬರುತ್ತಿದ್ದರು.

ನಳಿನಿ ಕಳೆದ ಒಂದು ತಿಂಗಳಿಂದ ಮನೆಯಿಂದ ನಾಪತ್ತೆಯಾಗಿದ್ದರು. ಪತ್ನಿ ನಾಪತ್ತೆ ಕುರಿತು ಸಂಜೀವ ಅಕ್ಟೋಬರ್ 8ರಂದು ಸಂಪ್ಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ನಾಪತ್ತೆ ವಿಷಯ ತಿಳಿದ ನಳಿನಿ ತವರು ಮನೆಯವರೂ ಹುಡುಕಾಟ ನಡೆಸಿದ್ದಾರೆ. ಉರ್ವದ ಸಂಜೀವರವರ ಮನೆಯ ಸುತ್ತಮುತ್ತ ಹುಡುಕಾಡಿದ್ದಾರೆ.

ಇದನ್ನೂ ಓದಿ: ಅಮೆಜಾನ್ ಕಂಪನಿಗೆ 30 ಕೋಟಿ ರೂ. ವಂಚನೆ: ಮಂಗಳೂರಿನಲ್ಲಿ ಇಬ್ಬರ ಬಂಧನ

ಈ ವೇಳೆ ಮನೆಯ ಎದುರಿನ ಗುಡ್ಡದ ತುದಿಯಲ್ಲಿ ನಳಿನಿ ಮೃತದೇಹದ ಅವಶೇಷಯಾಗಿವೆ. ಮರವೊಂದಕ್ಕೆ ನೇಣಿನ ಹಗ್ಗದಲ್ಲಿ ತಲೆ ಕೂದಲು ಜೋತಾಡುತ್ತಿತ್ತು. ಹಗ್ಗದ ಕೆಳಗೆ ತಲೆ ಬುರುಡೆ ಹಾಗೂ ಕೈ ಮತ್ತು ಕಾಲಿನ ಎಲುಬುಗಳು ಪತ್ತೆಯಾಗಿವೆ.

ಸಾಲಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ

ಮಂಡ್ಯ: ಸಾಲಬಾಧೆ ತಾಳಲಾರದೆ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ತಾಲೂಕಿನ ಹಳೇಬೂದನೂರು ಗ್ರಾಮದ ಬಳಿ ನಡೆದಿದೆ. ತ್ಯಾಗರಾಜು (30) ಆತ್ಮಹತ್ಯೆ ಮಾಡಿಕೊಂಡ ಯುವಕ. ತ್ಯಾಗರಾಜು ಕ್ರಿಕೆಟ್ ಬೆಟ್ಟಿಂಗ್ ಹಾಗೂ ಜೂಜು ಚಟಕ್ಕೆ ದಾಸನಾಗಿದ್ದನು. ಇದರಿಂದ ಕೋಟ್ಯಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದನು. ಕೋಟ್ಯಾಂತರ ರೂಪಾಯಿ ಸಾಲದ‌ ಸುಳಿಗೆ ಸಿಲುಕಿ ಸಂಕಷ್ಟ ಅನುಭವಿಸುತ್ತಿದ್ದನು. ಸಾಲ ವಾಪಸ್ ಮಾಡಲಾಗದೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡಿಸೇಲ್ ಲಾರಿ ಡಿಕ್ಕಿಯಾಗಿ ಅಪರಿಚಿತ ಮಹಿಳೆ ಸಾವು

ಕಲಬುರಗಿ: ನಗರದ ಖರ್ಗೆ ವೃತ್ತದ ಬಳಿ ಡೀಸೆಲ್ ಟ್ಯಾಂಕರ್​​ ಡಿಕ್ಕಿಯಾಗಿ ಅಪರಿಚಿತ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮಹಿಳೆ ಡಿವೈಡರ್ ಬಳಿ ನಿಂತಿದ್ದಾಗ ಡೀಸೆಲ್​​​​​ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಕಲಬುರಗಿ ಸಂಚಾರಿ ಠಾಣೆ-2ರಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್