AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರಬ್ಬೀ ಸಮುದ್ರದಲ್ಲಿ 24 ಗಂಟೆಗಳಿಂದ ಸಿಲುಕಿದ್ದ 11 ಮೀನುಗಾರರ ರಕ್ಷಣೆ

ಮೀನುಗಾರರನ್ನು ರಕ್ಷಿಸಿ ಉಡುಪಿ ಜಿಲ್ಲೆಯ ಮಲ್ಪೆಗೆ ಕರೆ ತರಲಾಗಿದೆ.

ಅರಬ್ಬೀ ಸಮುದ್ರದಲ್ಲಿ 24 ಗಂಟೆಗಳಿಂದ ಸಿಲುಕಿದ್ದ 11 ಮೀನುಗಾರರ ರಕ್ಷಣೆ
ರಕ್ಷಣೆಯ ದೃಶ್ಯ
TV9 Web
| Edited By: |

Updated on:Sep 15, 2021 | 10:57 PM

Share

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ಕಳೆದ 24 ಗಂಟೆಗಳಿಂದ ಸಿಲುಕಿದ್ದ 11 ಮೀನುಗಾರರನ್ನು ರಕ್ಷಿಸಲಾಗಿದೆ. ಹವಾಮಾನ ವೈಪರೀತ್ಯದಿಂದ ಅರಬ್ಬೀ ಸಮುದ್ರದ 35 ನಾಟಿಕಲ್ ಮೈಲಿ ದೂರದಲ್ಲಿ IND-KA 02 MM 4294 ‘ಸಾಗರ್ ಸಾಮ್ರಾಟ್’ ಮೀನುಗಾರರ ದೋಣಿ ಕೆಟ್ಟು ನಿಂತಿತ್ತು. ಮೀನುಗಾರರನ್ನು ರಕ್ಷಿಸಿ ಉಡುಪಿ ಜಿಲ್ಲೆಯ ಮಲ್ಪೆಗೆ ಕರೆ ತರಲಾಗಿದೆ. ರೋಪ್ ಹಾಕಿ ಎಳೆದು ಮೀನುಗಾರರ ದೋಣಿಯನ್ನು ಸಹ ಎಳೆದುತರಲಾಗಿದೆ.

ಪ್ರವಾಸಿಗನೋರ್ವ ಸಮುದ್ರ ಪಾಲು ಕಾರವಾರ: ಕಡಲ ತೀರದ ಬಂಡೆ ಮೇಲೆ ಕುಳಿತು ಫೋಟೋಗೆ ಪೋಸ್​ ಕೊಡಲು ಹೋಗಿ ಪ್ರವಾಸಿಗನೋರ್ವ ಸಮುದ್ರದ ಪಾಲಾದ ದುರ್ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ವನ್ನಳ್ಳಿ ಕಡಲ ತೀರದಲ್ಲಿ ನಡೆದಿದೆ. ಸುಬ್ಬುಗೌಡ(42) ಎಂಬುವವರೇ ಅಲೆ ಅಪ್ಪಳಿಸಿ ಸಮುದ್ರಕ್ಕೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಸುಬ್ಬುಗೌಡ ಅವರು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ನಿವಾಸಿಯಾಗಿದ್ದರು. ಸ್ನೇಹಿತರ ಜತೆಗೆ ಪ್ರವಾಸಕ್ಕೆಂದು ಕುಮಟಾದ ವನ್ನಳ್ಳಿ ಸಮುದ್ರ ತೀರಕ್ಕೆ ಬಂದಿದ್ದರು. ಆದರೆ ದುರದೃಷ್ಟವಷಾತ್ ಅವರು ಸಮುದ್ರ ಪಾಲಾಗಿದ್ದಾರೆ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಣೇಶ ವಿಸರ್ಜನೆ ವೇಳೆ ನೀರುಪಾಲು ಗಣೇಶ ವಿಸರ್ಜನೆ ವೇಳೆ ಯುವಕನೋರ್ವ ಭೀಮಾ ನದಿ ಪಾಲಾದ ದುರ್ಘಟನೆ ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಅಂಕಲಗಾ ಗ್ರಾಮದಲ್ಲಿ ನಡೆದಿದೆ. ಅಂಕಲಗಾ ಬಳಿ ಗಿರೀಶ್​ ಚೌಹಾಣ್(25) ನದಿಪಾಲಾದ ದುರ್ದೈವಿ. ಗಣೇಶ ಮೂರ್ತಿ ವಿಸರ್ಜಿಸಲು ನದಿ ಒಳಗೆ ಇಳಿದ್ದ ಗಿರೀಶ್ ಸೆಳೆತ ಹೆಚ್ಚಾಗಿದ್ದರಿಂದ ನದಿಪಾಲಾಗಿದ್ದಾರೆ. ಸ್ಥಳೀಯರು, ಅಗ್ನಿಶಾಮಕ ಸಿಬ್ಬಂದಿಯಿಂದ ಹುಡುಕಾಟ ನಡೆದಿದ್ದು ನೆಲೋಗಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: 

ಬಾಲಿವುಡ್​ನ ಖ್ಯಾತ ತಾರೆಯರ ನೈಜ ಹೆಸರೇನು? ಇಲ್ಲಿದೆ ಅಪರೂಪದ ಮಾಹಿತಿ

Zee Entertainment: ಈ ಮೀಡಿಯಾ ಕಂಪೆನಿ​ ಷೇರು ಒಂದೇ ದಿನದಲ್ಲಿ ಶೇ 40ರಷ್ಟು ಏರಿಕೆ; ಏಕೆ, ಏನು ಇಲ್ಲಿದೆ ಮಾಹಿತಿ

(Mangaluru 11 fisherman’s are rescued in Arabian Sea)

Published On - 10:03 pm, Wed, 15 September 21

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು