AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ 1,725 ಕೆಜಿಗೂ ಹೆಚ್ಚು ಅನಧಿಕೃತ ಸ್ಫೋಟಕ ವಶಕ್ಕೆ; ಆರೋಪಿ ಬಂಧನ

ವಶಪಡಿಸಿಕೊಳ್ಳಲಾದ ಸ್ಪೋಟಕ‌ಗಳ ಮೌಲ್ಯ ಒಟ್ಟು 1ಲಕ್ಷ 11 ಸಾವಿರ ಎಂದು ಅಂದಾಜಿಸಲಾಗಿದೆ.

ಮಂಗಳೂರಿನಲ್ಲಿ 1,725 ಕೆಜಿಗೂ ಹೆಚ್ಚು ಅನಧಿಕೃತ ಸ್ಫೋಟಕ ವಶಕ್ಕೆ; ಆರೋಪಿ ಬಂಧನ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Aug 16, 2021 | 5:56 PM

Share

ಮಂಗಳೂರು: ಪರವಾನಿಗೆ ಇಲ್ಲದೇ ಅನಧಿಕೃತವಾಗಿ ದಾಸ್ತಾನು ಇಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಮಂಗಳೂರು ನಗರದ ಬಂದರು ಠಾಣಾ ಪೋಲಿಸರ ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ. 1,725 ಕೆಜಿಗೂ ಹೆಚ್ಚು ಸ್ಫೋಟಕ ವಶಕ್ಕೆ ಪಡೆಯಲಾಗಿದ್ದು, ಒಟ್ಟು 1ಲಕ್ಷ 11 ಸಾವಿರ ಮೌಲ್ಯದ ಸ್ಪೋಟಕ‌ಗಳೆಂದು ಅಂದಾಜಿಸಲಾಗಿದೆ. ಸ್ಫೋಟಕವನ್ನು ಮಂಗಳೂರು ಬಂದರಿನ ಅಜೀಜುದ್ದೀನ್ ರಸ್ತೆಯ ಗಾಂಧಿ ಸನ್ಸ್ ಕಟ್ಟಡದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿತ್ತು. ಪರವಾನಿಗೆ ಇಲ್ಲದೇ ಅನಧಿಕೃತವಾಗಿ ದಾಸ್ತಾನು ಇಟ್ಟಿದ್ದ ಆರೋಪಿ ಆನಂದ ಗಟ್ಟಿ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸಲ್ಫರ್ ಪೌಡರ್ 400 ಕೆಜಿ, ಪೊಟ್ಯಾಸಿಯಮ್‌ ನೈಟ್ರೇಟ್ 350 ಕೆಜಿ, ಬೇರಿಯಂ ನೈಟ್ರೇಟ್ 50 ಕೆಜಿ, ಪೊಟ್ಯಾಸಿಯಮ್‌ ಕ್ಲೋರೈಟ್ 395 ಕೆಜಿ, ಅಲ್ಯೂಮಿನಿಯಂ ಪೌಡರ್- 260 ಕೆಜಿ, ಚಾರ್ ಕೋಲ್- 240 ಕೆಜಿ, ಲೀಡ್ ಬಾಲ್ಸ್ 30 ಕೆಜಿ, ಆ್ಯರ್ ಪಿಸ್ತೂಲ್ ಪೆಲೆಟ್ಸ್ ವಶಪಡಿಸಿಕೊಂಡ ಸ್ಫೋಟಕಗಳಾಗಿವೆ. ನಗರದ ಬಂದರು ಏರಿಯಾದಲ್ಲೇ ಗನ್ ಶಾಪ್ ಹೊಂದಿರುವ ಆರೋಪಿ ಆನಂದ ಗಟ್ಟಿಯ ವಿಚಾರಣೆಯನ್ನು ಪೊಲೀಸರು ನಡೆಸುತ್ತಿದ್ದಾರೆ.

ರಾಮನಗರ: ಏಕಾಏಕಿ ಸ್ಫೋಟಗೊಂಡ ಕಾರು; ವ್ಯಕ್ತಿ ಸಜೀವ ದಹನ ಏಕಾಏಕಿ ಕಾರು ಸ್ಫೋಟಗೊಂಡು ವ್ಯಕ್ತಿ ಸಜೀವ ದಹನವಾದ ದಾರುಣ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮರಳೆ ಗ್ರಾಮದ ಬಳಿ ನಡೆದಿದೆ. ಮರಳೆ ಗ್ರಾಮದ ಬಳಿ ಕಾರು ಸ್ಫೋಟಗೊಂಡು ದುರಂತ ಸಂಭವಿಸಿದೆ. ಕೆಎ 51, ಪಿ 3384 ನೋಂದಣಿ ಕಾರು ಏಕಾಏಕಿ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ವಸ್ತುಗಳು ಸುಮಾರು 50 ಮೀಟರ್ ದೂರಕ್ಕೆ ಬಿದ್ದಿದೆ. ಸಾತನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಫೋಟದ ತೀವ್ರತೆಗೆ ಕಾರಿನಲ್ಲಿದ್ದ ವಸ್ತುಗಳು ಸಹಿತ ಕಾರಿನ ಭಾಗಗಳು ಚೆಲ್ಲಾಪಿಲ್ಲಿಯಾಗಿ ಹರಡಿಕೊಂಡಿದೆ. ಕಾರ್ ಸ್ಫೋಟದಿಂದ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕಾರ್ ಏಕಾಏಕಿ ಹೇಗೆ ಸ್ಫೋಟವಾಯಿತು, ಅದು ಯಾವ ಕಾರ್ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಕಾರ್​ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿರುವುದು ತಿಳಿದುಬಂದಿದೆ. ಆದರೆ, ವ್ಯಕ್ತಿಯ ಪರಿಚಯದ ಬಗ್ಗೆಯೂ ಮಾಹಿತಿ ಲಭಿಸಿಲ್ಲ. ಪ್ರಕರಣವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ: 

ಧಾರವಾಡದಲ್ಲಿ ಅಪ್ಘಾನಿಸ್ತಾನದ ವಿದ್ಯಾರ್ಥಿಗಳು; ತಾಯ್ನಾಡಿನ ದುಸ್ಥಿತಿ, ಕುಟುಂಬದವರನ್ನು ನೆನೆದು ಕಣ್ಣೀರು

ಪ್ರಾಣ ಉಳಿಸಿಕೊಳ್ಳಲು ಅಫ್ಘಾನಿಸ್ತಾನದ ರಸ್ತೆಗಳಲ್ಲಿ ಭಯದಿಂದ ಓಡಿದ ನಿರ್ದೇಶಕಿ; ವಿಡಿಯೋ ವೈರಲ್​  

(Mangaluru More than 1725 ​​kg of illegal explosives seized police arrest the accused)

Published On - 4:26 pm, Mon, 16 August 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್