AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್

ಕಳ್ಳತನವಾಗಿದ್ದ 124 ಮೊಬೈಲ್​ ಫೋನ್​ಗಳ ಪೈಕಿ 39 ಮೊಬೈಲ್​ಗಳನ್ನು ಸಿಇಐಆರ್​ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದೆ. ಗುರುವಾರದಂದು ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್​ ವಾರಸುದಾರರಿಗೆ ಹಸ್ತಾಂತರಿಸಿದರು.

Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್
ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್Image Credit source: newskannada.com
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 8:16 PM

Share

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳ್ಳತನವಾದ (Mobile Theft) ಅಥವಾ ಸುಲಿಗೆಯಾದ ಮೊಬೈಲ್​ ಫೋನ್​ಗಳ  ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ಸಿಇಐಆರ್​ ಪೋರ್ಟಲ್ (Central Equipment Identity Register -CEIR)  ಎಂಬ ನೂತನ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಯಿಂದ ಜಾರಿಗೆ ತರಲಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಕಳ್ಳತನವಾದ 124 ಮೊಬೈಲ್​ ಫೋನ್​ಗಳ ಪೈಕಿ 39 ಮೊಬೈಲ್​ಗಳನ್ನು ಗುರುವಾರದಂದು ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್​ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ​ ಮಾತನಾಡಿದ ಅವರು, ಕಳೆದ 5 ತಿಂಗಳಲ್ಲಿ ನಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ 402 ಜನರು ಮೊಬೈಲ್​ ಕಳೆದುಕೊಂಡಿರುವ ಬಗ್ಗೆ ದೂರು ನಿಡಿದ್ದಾರೆ. ಆ ಪೈಕಿ ಕಳ್ಳತನವಾದ 124 ಮೊಬೈಲ್​ ಫೋನ್​ಗಳನ್ನು ಪತ್ತೆ ಹಚ್ಚಿ 39 ಮೊಬೈಲ್​ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದೇವೆ. ಪತ್ತೆ ಹಚ್ಚಿರುವ ಒಟ್ಟು ಮೊಬೈಲ್ ಫೋನ್​ಗಳ ಬೆಲೆ ಸುಮಾರು 7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಉಳಿದ ಮೊಬೈಳ್​ಗನ್ನು ಕೂಡ ಶೀಘ್ರದಲ್ಲಿ ಜಪ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ​

ಸಿಇಐಆರ್​ ಪೋರ್ಟಲ್​​ನ್ನು ಪೊಲೀಸರು ಮತ್ತು ಮೊಬೈಲ್ ಕಳೆದುಕೊಂಡವರು ಇದನ್ನು ಬಳಕೆ ಮಾಡಬಹುದಾಗಿದೆ. ಇದರಿಂದ ಮೊಬೈಲ್ ಫೋನ್ ಪತ್ತೆಗೆ ಮತ್ತು ಅದರ ಮಾಲೀಕರಿಗೆ ಮರಳಿಸಲು ಸಹಾಯವಾಗುತ್ತದೆ ಎಂದರು.

ಇದನ್ನೂ ಓದಿ: Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್​ ಕಳೆದುಕೊಂಡರೆ ಅದನ್ನು ಬ್ಲಾಕ್​ ಮಾಡಲು ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್​ ಪೋರ್ಟಲ್. ಮೊಬೈಲ್ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸ್​ ಠಾಣೆಯಲ್ಲಿ ಅಥವಾ ಕೆಎಸ್​ಪಿ ಆ್ಯಪ್​ನಲ್ಲಿ ದೂರ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳಬೇಕು. IMEI ಸಂಖ್ಯೆ ಸೇರಿದಂತೆ ವಿವರಗಳನ್ನು CEIR ಪೋರ್ಟಲ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮತ್ತು ಪೊಲೀಸರಿಗೆ ದೂರು ನೀಡಿದಾಗ ಫೋನ್ ಬ್ಲಾಕ್ ಆಗುತ್ತದೆ.

ಇದನ್ನೂ ಓದಿ: ಇದೊಂದು ಹೊಸ ಟ್ರೆಂಡ್​ ಶುರುವಾಗಿದೆ! ಮೊಬೈಲ್ ಕಳೆದುಕೊಂಡವರು ಸೀದಾ ಈ ವೆಬ್​ಸೈಟ್​​ಗೆ ಭೇಟಿ ನೀಡ್ತಿದಾರೆ! ತಡವೇಕೆ? ಮೊಬೈಲ್ ಕಳೆದಿದ್ದರೆ ನೀವೂ ಹೀಗೆ ಮಾಡಿ!

ಯಾರಾದರೂ ಮತ್ತೊಂದು ಸಿಮ್ ಕಾರ್ಡ್‌ನೊಂದಿಗೆ ಫೋನ್​ನ್ನು ಬಳಸಲು ಪ್ರಯತ್ನಿಸಿದಾಗ, ಅಧಿಕಾರಿಗಳಿಗೆ ತಕ್ಷಣವೇ ಸೂಚನೆ ಹೋಗುತ್ತದೆ. ಆ ಮೂಲಕ ಮೊಬೈಲ್​ನ್ನು ಟ್ರ್ಯಾಕ್ ಮಾಡಬಹುದಾಗಿದೆ. ಪತ್ತೆಯಾದ ಯಾವುದೇ ಫೋನ್‌ಗಳನ್ನು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಲು ಮತ್ತು ಮರುಪಡೆಯಲು ಪೋರ್ಟಲ್​ನ್ನು ವ್ಯಾಪಕವಾಗಿ ಬಳಸುವಂತೆ ಕುಲದೀಪ್​ ಕುಮಾರ್​ ಆರ್​ ಜೈನ್​ ಜನರಲ್ಲಿ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:49 pm, Fri, 17 March 23

ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಪತ್ನಿ ಕುಟುಂಬಸ್ಥರ ಸುಳ್ಳು ಆರೋಪಕ್ಕೆ ಹೋಯ್ತು ಜೀವ: ಕಣ್ಣೀರಿಟ್ಟ ಕೆಲಸಗಾರ
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಹೊಸ ವರ್ಷಕ್ಕೆ ಬೆಂಗಳೂರು ಸಜ್ಜು; ನಗರಾದ್ಯಂತ ಪೊಲೀಸ್ ಕಣ್ಗಾವಲು
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮಹಾರಾಷ್ಟ್ರ ಪೊಲೀಸರ ಹೇಳಿಕೆ ಸತ್ಯಕ್ಕೆ ದೂರವಾಗಿದೆ; ಜಿ ಪರಮೇಶ್ವರ್
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಮತ್ತೊಂದು ಬಿಗ್ ಎಲಿಮಿನೇಷನ್: ಸ್ಪಂದನಾ-ಮಾಳು ನಡುವೆ ಯಾರು ಹೊರಗೆ?
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!
ಹಾಲು ಕುಡಿಯಬೇಕಿದ್ದ 5 ವರ್ಷದ ಮೊಮ್ಮಗನಿಗೆ ಮದ್ಯ ಕುಡಿಸಿದ ಅಜ್ಜ!