AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್

ಕಳ್ಳತನವಾಗಿದ್ದ 124 ಮೊಬೈಲ್​ ಫೋನ್​ಗಳ ಪೈಕಿ 39 ಮೊಬೈಲ್​ಗಳನ್ನು ಸಿಇಐಆರ್​ ಪೋರ್ಟಲ್ ಮೂಲಕ ಪತ್ತೆ ಹಚ್ಚಲಾಗಿದೆ. ಗುರುವಾರದಂದು ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್​ ವಾರಸುದಾರರಿಗೆ ಹಸ್ತಾಂತರಿಸಿದರು.

Mangaluru News: ಕಳ್ಳತನವಾಗಿದ್ದ 124 ಪೈಕಿ 39 ಮೊಬೈಲ್​ಗಳು CEIR ಪೋರ್ಟಲ್​ ಮೂಲಕ ಪತ್ತೆ, ಮಾಲೀಕರಿಗೆ ವಾಪಸ್
ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್Image Credit source: newskannada.com
ಗಂಗಾಧರ​ ಬ. ಸಾಬೋಜಿ
|

Updated on:Mar 17, 2023 | 8:16 PM

Share

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳ್ಳತನವಾದ (Mobile Theft) ಅಥವಾ ಸುಲಿಗೆಯಾದ ಮೊಬೈಲ್​ ಫೋನ್​ಗಳ  ದುರ್ಬಳಕೆ ತಡೆಗಟ್ಟುವ ನಿಟ್ಟಿನಲ್ಲಿ ಸಿಇಐಆರ್​ ಪೋರ್ಟಲ್ (Central Equipment Identity Register -CEIR)  ಎಂಬ ನೂತನ ವ್ಯವಸ್ಥೆಯನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಯಿಂದ ಜಾರಿಗೆ ತರಲಾಗಿದೆ. ಈ ಹಿನ್ನೆಲೆ ಜಿಲ್ಲೆಯಲ್ಲಿ ಕಳ್ಳತನವಾದ 124 ಮೊಬೈಲ್​ ಫೋನ್​ಗಳ ಪೈಕಿ 39 ಮೊಬೈಲ್​ಗಳನ್ನು ಗುರುವಾರದಂದು ಪೊಲೀಸ್​ ಆಯುಕ್ತ ಕುಲದೀಪ್​ ಕುಮಾರ್​ ಆರ್​ ಜೈನ್​ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಬಳಿಕ ಮಾಧ್ಯಮದವರೊಂದಿಗೆ​ ಮಾತನಾಡಿದ ಅವರು, ಕಳೆದ 5 ತಿಂಗಳಲ್ಲಿ ನಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಿಗೆ 402 ಜನರು ಮೊಬೈಲ್​ ಕಳೆದುಕೊಂಡಿರುವ ಬಗ್ಗೆ ದೂರು ನಿಡಿದ್ದಾರೆ. ಆ ಪೈಕಿ ಕಳ್ಳತನವಾದ 124 ಮೊಬೈಲ್​ ಫೋನ್​ಗಳನ್ನು ಪತ್ತೆ ಹಚ್ಚಿ 39 ಮೊಬೈಲ್​ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದೇವೆ. ಪತ್ತೆ ಹಚ್ಚಿರುವ ಒಟ್ಟು ಮೊಬೈಲ್ ಫೋನ್​ಗಳ ಬೆಲೆ ಸುಮಾರು 7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಉಳಿದ ಮೊಬೈಳ್​ಗನ್ನು ಕೂಡ ಶೀಘ್ರದಲ್ಲಿ ಜಪ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದರು. ​

ಸಿಇಐಆರ್​ ಪೋರ್ಟಲ್​​ನ್ನು ಪೊಲೀಸರು ಮತ್ತು ಮೊಬೈಲ್ ಕಳೆದುಕೊಂಡವರು ಇದನ್ನು ಬಳಕೆ ಮಾಡಬಹುದಾಗಿದೆ. ಇದರಿಂದ ಮೊಬೈಲ್ ಫೋನ್ ಪತ್ತೆಗೆ ಮತ್ತು ಅದರ ಮಾಲೀಕರಿಗೆ ಮರಳಿಸಲು ಸಹಾಯವಾಗುತ್ತದೆ ಎಂದರು.

ಇದನ್ನೂ ಓದಿ: Mangaluru University: 4 ವರ್ಷಗಳ ಬಿಕಾಂ ಕೋರ್ಸ್‌ಗೆ ಅನುಮೋದನೆ ನೀಡಿದ ಮಂಗಳೂರು ವಿಶ್ವವಿದ್ಯಾನಿಲಯ

ಕಳ್ಳತನ ಅಥವಾ ಬೇರೆ ಯಾವುದೇ ರೀತಿಯಲ್ಲಿ ಮೊಬೈಲ್​ ಕಳೆದುಕೊಂಡರೆ ಅದನ್ನು ಬ್ಲಾಕ್​ ಮಾಡಲು ಕೇಂದ್ರ ಸರ್ಕಾರದ ದೂರಸಂಪರ್ಕ ಇಲಾಖೆ ಜಾರಿಗೆ ತಂದಿರುವ ಹೊಸ ವಿಧಾನವೇ ಸಿಇಐಆರ್​ ಪೋರ್ಟಲ್. ಮೊಬೈಲ್ ಕಳೆದುಹೋದ ಕೂಡಲೇ ಹತ್ತಿರದ ಪೊಲೀಸ್​ ಠಾಣೆಯಲ್ಲಿ ಅಥವಾ ಕೆಎಸ್​ಪಿ ಆ್ಯಪ್​ನಲ್ಲಿ ದೂರ ಸಲ್ಲಿಸಿ ಸ್ವೀಕೃತಿ ಪಡೆದುಕೊಳ್ಳಬೇಕು. IMEI ಸಂಖ್ಯೆ ಸೇರಿದಂತೆ ವಿವರಗಳನ್ನು CEIR ಪೋರ್ಟಲ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಮತ್ತು ಪೊಲೀಸರಿಗೆ ದೂರು ನೀಡಿದಾಗ ಫೋನ್ ಬ್ಲಾಕ್ ಆಗುತ್ತದೆ.

ಇದನ್ನೂ ಓದಿ: ಇದೊಂದು ಹೊಸ ಟ್ರೆಂಡ್​ ಶುರುವಾಗಿದೆ! ಮೊಬೈಲ್ ಕಳೆದುಕೊಂಡವರು ಸೀದಾ ಈ ವೆಬ್​ಸೈಟ್​​ಗೆ ಭೇಟಿ ನೀಡ್ತಿದಾರೆ! ತಡವೇಕೆ? ಮೊಬೈಲ್ ಕಳೆದಿದ್ದರೆ ನೀವೂ ಹೀಗೆ ಮಾಡಿ!

ಯಾರಾದರೂ ಮತ್ತೊಂದು ಸಿಮ್ ಕಾರ್ಡ್‌ನೊಂದಿಗೆ ಫೋನ್​ನ್ನು ಬಳಸಲು ಪ್ರಯತ್ನಿಸಿದಾಗ, ಅಧಿಕಾರಿಗಳಿಗೆ ತಕ್ಷಣವೇ ಸೂಚನೆ ಹೋಗುತ್ತದೆ. ಆ ಮೂಲಕ ಮೊಬೈಲ್​ನ್ನು ಟ್ರ್ಯಾಕ್ ಮಾಡಬಹುದಾಗಿದೆ. ಪತ್ತೆಯಾದ ಯಾವುದೇ ಫೋನ್‌ಗಳನ್ನು ಕಾನೂನುಬಾಹಿರ ಚಟುವಟಿಕೆಗಳಿಗೆ ಬಳಸಲಾಗಿಲ್ಲ ಎಂಬುದು ಗಮನಿಸಬೇಕಾದ ಸಂಗತಿ. ಕಳೆದುಹೋದ ಅಥವಾ ಕದ್ದ ಮೊಬೈಲ್ ಫೋನ್‌ಗಳನ್ನು ಪತ್ತೆಹಚ್ಚಲು ಮತ್ತು ಮರುಪಡೆಯಲು ಪೋರ್ಟಲ್​ನ್ನು ವ್ಯಾಪಕವಾಗಿ ಬಳಸುವಂತೆ ಕುಲದೀಪ್​ ಕುಮಾರ್​ ಆರ್​ ಜೈನ್​ ಜನರಲ್ಲಿ ಮನವಿ ಮಾಡಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:49 pm, Fri, 17 March 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ