ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ

ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ವಿದ್ಯಾರ್ಥಿ ಗಲಾಟೆಯಲ್ಲಿ ಇಬ್ಬರು ಸಹಪಾಠಿಗಳಿಗೆ ಚೂರಿಯಿಂದ ಇರಿದಿರುವಂತಹ ಘಟನೆ ನಡೆದಿದೆ. ಸದ್ಯ ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಾಳುಗಳು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗಿದೆ.

ಕಾಲೇಜಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಸಹಪಾಠಿಗಳ ಗಲಾಟೆ: ಮಂಗಳೂರಿನಲ್ಲಿ ಮತ್ತೆ ರಕ್ತಪಾತ
ಆಸ್ಪತ್ರೆ‌ಗೆ ಭೇಟಿ ನೀಡಿದ ಪೊಲೀಸರು
Image Credit source: tv9 kannada
Edited By:

Updated on: Feb 11, 2026 | 6:36 PM

ಮಂಗಳೂರು, ಫೆಬ್ರವರಿ 11: ವಿದ್ಯಾರ್ಥಿಗಳ (Students) ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ (clash) ಕೊನೆಗೆ ಹಲ್ಲೆಯಲ್ಲಿ ಅಂತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಖಾಸಗಿ ಕಾಲೇಜಿನಲ್ಲಿ ಘಟನೆ ನಡೆದಿದ್ದು, ಹೇಮಂತ್ ಎಂಬ ವಿದ್ಯಾರ್ಥಿಯಿಂದ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಲಾಗಿದೆ. ಈ ವೇಳೆ ಗಲಾಟೆ ಬಿಡಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿಗೂ ಗಾಯವಾಗಿದೆ. ಸದ್ಯ ಹೇಮಂತ್​​ನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಕಾಲೇಜ್​ ವಿಚಾರವಾಗಿ ವಿದ್ಯಾರ್ಥಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಹೇಮಂತ್​​ ಅಪ್ರಾಪ್ತ ವಿದ್ಯಾರ್ಥಿಗೆ ಚೂರಿಯಿಂದ ಹಲ್ಲೆ ಮಾಡಿದ್ದಾರೆ. ಇನ್ನು ಗಲಾಟೆ ತಪ್ಪಿಸಲು ಬಂದ ಮತ್ತೊಬ್ಬ ವಿದ್ಯಾರ್ಥಿ ಮೇಲೂ ಹಲ್ಲೆ ಮಾಡಲಾಗಿದ್ದು ಗಾಯವಾಗಿದೆ.

ಇದನ್ನೂ ಓದಿ: ಶಾಸಕ ಸೇರಿ ಐವರಿಂದ ಕಿರುಕುಳ ಆರೋಪ: ಡೆತ್​​ನೋಟ್​​ ಬರೆದಿಟ್ಟು ನಾಪತ್ತೆಯಾಗಿದ್ದ ಅಧಿಕಾರಿ ಪತ್ತೆ

ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಬೆನ್ನಿಗೆ ಗಾಯವಾಗಿದ್ದು, ಮತ್ತೋರ್ವನಿಗೆ ತೊಡೆ ಭಾಗದಲ್ಲಿ ಗಾಯವಾಗಿದೆ. ಸದ್ಯ ಗಾಯಗೊಂಡ ಇಬ್ಬರು ವಿದ್ಯಾರ್ಥಿಗಳಿಗೂ ವಿಟ್ಲ ಸಮುದಾಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇನ್ನು ಆಸ್ಪತ್ರೆಗೆ ಬಂಟ್ವಾಳ ಡಿವೈಎಸ್​​ಪಿ ಭೇಟಿ ನೀಡಿದ್ದಾರೆ. ಘಟನೆ ತಿಳಿದು‌ ಸಮುದಾಯ ಆಸ್ಪತ್ರೆ‌ ಬಳಿ‌‌‌ ಸೇರಿದ ಜನರನ್ನು ಪೊಲೀಸರು ಚದುರಿಸಿದ್ದಾರೆ.

ಸೈಡ್ ಕೊಡಲಿಲ್ಲ ಎಂದು ಬಸ್​​ ಚಾಲಕನಿಗೆ ಬೈಕ್​ ಸವಾರನಿಂದ ಥಳಿತ 

ಸೈಡ್ ಕೊಡಲಿಲ್ಲ ಎಂಬ ಕಾರಣಕ್ಕೆ ಕೆಕೆಆರ್‌ಟಿಸಿ ಬಸ್ ಚಾಲಕನಿಗೆ ಬೈಕ್ ಸವಾರ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಇತ್ತೀಚೆಗೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ ತಾಂಡಾಬಳಿ ನಡೆದಿತ್ತು. ಭಾಲ್ಕಿ ಬಸ್ ಡಿಪೋಗೆ ಸೇರಿದ ಬಸ್ ಚಾಲಕ ಚಂದ್ರಶೇಖರ್​​ ಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದ್ದು, ಹಲ್ಲೆಗೊಳಗಾಗಿದ್ದ ಚಾಲಕನನ್ನು ಭಾಲ್ಕಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಬಳಿ ಬೀದರ್ ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿತ್ತು.

ಇದನ್ನೂ ಓದಿ: ಹುಬ್ಬಳ್ಳಿ ಆಟೋ ಚಾಲಕನ ಖಾತೆಯಿಂದ ಕೋಟ್ಯಂತರ ರೂ ವಹಿವಾಟು​: ತನಿಖೆಯಲ್ಲಿ ಹಣದ ರಹಸ್ಯ ಬಯಲು

ಚಂದ್ರಶೇಖರ್ ಸ್ವಾಮಿಗೆ ಎದೆ, ತಲೆ ಭಾಗಕ್ಕೆ ಗಾಯವಾಗಿದ್ದು, ಸದ್ಯ ಚೇತರಿಕೆ ಕಾಣುತ್ತಿದ್ದಾರೆ. ಹಲ್ಲೆ ನಡೆಸಿ ಬೈಕ್ ಸವಾರ ಸ್ಥಳದಿಂದ ಪರಾರಿಯಾಗಿದ್ದು, ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದರು. ಭಾಲ್ಕಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us