AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!

ಮಂಗಳೂರಿನ ಕಾವೂರಿನಲ್ಲಿ ಜಾರ್ಖಂಡ್ ಮೂಲದ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. 'ಬಾಂಗ್ಲಾದೇಶದ ಪ್ರಜೆ' ಎಂದು ಆರೋಪಿಸಿ, ದಾಖಲೆ ಕೇಳಿ ತಕ್ಷಣ ನೀಡದ ಕಾರಣ ನಾಲ್ವರು ಯುವಕರು ದಾಳಿ ನಡೆಸಿದ್ದಾರೆ. ಆತನ ತಲೆಗೆ ಗಂಭೀರ ಗಾಯಗಳಾಗಿದ್ದು, ನಾಲ್ವರ ವಿರುದ್ಧ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದು, ಕಾನೂನು ಕೈಗೆತ್ತಿಕೊಂಡವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಆಯುಕ್ತರು ತಿಳಿಸಿದ್ದಾರೆ.

ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!
ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ಮಾರಣಾಂತಿಕ ಹಲ್ಲೆ!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 12, 2026 | 12:28 PM

Share

ಮಂಗಳೂರು, ಜನವರಿ 12: ನಗರದ ಕಾವೂರು ಪ್ರದೇಶದಲ್ಲಿ ಬಾಂಗ್ಲಾದೇಶದ ಪ್ರಜೆ ಎಂದು ಆರೋಪಿಸಿ ಕಾರ್ಮಿಕನ ಮೇಲೆ ನಾಲ್ವರು ಯುವಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಿನ್ನೆ (ಜ.11) ಸಂಜೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕ ದಿಲ್ಶಾನ್ ಅನ್ಸಾರಿಯನ್ನು ತಡೆದು ಥಳಿಸಿರುವ ಆರೋಪಿಗಳ ಮೇಲೆ FIR ಆಗಿದೆ.

ದಾಖಲೆ ತೋರಿಸುವಂತೆ ಒತ್ತಾಯ

ದಿಲ್ಶಾನ್ ಅನ್ಸಾರಿ ಕಳೆದ 10–15 ವರ್ಷಗಳಿಂದ ವರ್ಷಕ್ಕೆ 4–5 ತಿಂಗಳುಗಳ ಕಾಲ ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ನಿನ್ನೆ ಸಂಜೆ ಕಾವೂರಿನ ಬಳಿ ಸ್ಥಳೀಯರಾದ ಸಾಗರ್, ಧನುಷ್, ಲಾಲು ಅಲಿಯಾಸ್ ರತೀಶ್ ಹಾಗೂ ಮೋಹನ್ ಎಂಬ ನಾಲ್ವರು ಯುವಕರು ದಿಲ್ಶಾನ್​ನನ್ನು ತಡೆದು ನಿಲ್ಲಿಸಿ, ತಾನು ಭಾರತೀಯ ಪ್ರಜೆ ಎಂಬುದಕ್ಕೆ ದಾಖಲೆ ತೋರಿಸುವಂತೆ ಒತ್ತಾಯಿಸಿದ್ದಾರೆ. ದಿಲ್ಶಾನ್ ತಕ್ಷಣ ದಾಖಲೆ ತೋರಿಸದ ಹಿನ್ನೆಲೆಯಲ್ಲಿ ಆರೋಪಿಗಳು ಆತನ ಮೇಲೆ ತಲೆಗೆ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. ಪರಿಣಾಮವಾಗಿ ದಿಲ್ಶಾನ್ ಅವರ ತಲೆಗೆ ತೀವ್ರ ಗಾಯಗಳಾಗಿದ್ದು, ರಕ್ತಸ್ರಾವ ಉಂಟಾಗಿದೆ.

ನಾಲ್ವರ ವಿರುದ್ಧ FIR

ಹಲ್ಲೆಯ ವೇಳೆ ಸ್ಥಳದಲ್ಲಿದ್ದ ಒಬ್ಬ ಹಿಂದು ಮಹಿಳೆ ಮಧ್ಯ ಪ್ರವೇಶಿಸಿ ದಿಲ್ಶಾನ್ ಅವರನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಹಲ್ಲೆಯ ಬಳಿಕ ದಿಲ್ಶಾನ್ ಮನೆಗೆ ತೆರಳಿದ್ದು, ನಂತರ ಕಾವೂರು ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ನಾಪತ್ತೆಯಾಗಿರುವ ನಾಲ್ವರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಘಟನೆ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ರೆಡ್ಡಿ ಸ್ಪಷ್ಟನೆ ನೀಡಿದ್ದು, ಕಾನೂನು ಕೈಗೆತ್ತಿಕೊಳ್ಳುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಅಪ್ಪು ಅಭಿಮಾನಿಗಳ ಪುಣ್ಯದ ಕೆಲಸ: ಮನಸಾರೆ ಹೊಗಳಿದ ನಟ ಪ್ರಥಮ್
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಮಂಗಳೂರಿನಲ್ಲಿ ಕಾರಿನಿಂದ ಗುದ್ದಿ ಕೊಲೆಗೆ ಯತ್ನ: ಭಯಾನಕ ವಿಡಿಯೋ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಐಪಿಎಲ್​ಗಾಗಿ ಭಾರತಕ್ಕೆ ಬಂದಿಳಿದ ವಿರಾಟ್ ಕೊಹ್ಲಿ
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
ಆರೋಗ್ಯ ಇಲಾಖೆ ಕಾರ್ಯಕ್ಕೆ ಸ್ವಪಕ್ಷೀಯ ಶಾಸಕರ ಅಸಮಾಧಾನ, ಆಗಿದ್ದೇನು?
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
‘ಕೆಡಿ’ ಚಿತ್ರತಂಡದ ವಿರುದ್ಧ ಕ್ರಮ ತೆಗೆದುಕೊಳ್ಳಲು ಮಹಿಳಾ ಆಯೋಗ ಪತ್ರ
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಇನ್ಸ್​​ಪೆಕ್ಟರ್ ಸಂದೇಶ್ ಮತ್ತಷ್ಟು ಲೀಲೆಗಳು ಬಯಲು: ಹೊಸ ಆಡಿಯೋ ವೈರಲ್​​
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಬೆಳಗಾವಿಯಲ್ಲಿ ದಿಢೀರ್ ಆಲಿಕಲ್ಲು ಸಹಿತ ಮಳೆ ಅಬ್ಬರ: ವಾಹನ ಸವಾರರು ಪರದಾಟ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಅಪ್ಪು ಸಮಾಧಿಗೆ ಪೂಜೆ ಮಾಡಿದ ಶಿವರಾಜ್ ಕುಮಾರ್: ವಿಡಿಯೋ ನೋಡಿ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಎಸ್​​ಎಸ್​​ಎಲ್​​ಸಿ ಪರೀಕ್ಷೆ ಬರೆಯುವ ಮಕ್ಕಳಿಗೆ ಮಿಡಿದ ಕಂಡಕ್ಟರ್​​ ಮನ
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್
ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯನ್ನು ಕಾಪಾಡಿದ ಹೆಡ್ ಕಾನ್ಸ್‌ಟೇಬಲ್