ಮಂಗಳೂರು: ರಸ್ತೆ ದಾಟುತ್ತಿದ್ದ ನಾಲ್ಕು ಕಾಡು ಹಂದಿಗಳಿಗೆ ಲಾರಿ ಡಿಕ್ಕಿ: ವಾಹನದಲ್ಲಿ ಕೊಂಡೊಯ್ದ ಸಾರ್ವಜನಿಕರು

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ರಸ್ತೆ ದಾಟುತ್ತಿದ್ದ ಕಾಡು ಹಂದಿಗಳಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಕಾಡು ಹಂದಿಗಳಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಗಾಯಗೊಂಡ ಹಂದಿಗಳಿಗೆ ಚಿಕಿತ್ಸೆ ನೀಡುವ ಬದಲು ಹಗ್ಗದಿಂದ ಕೈ-ಕಾಲು ಕಟ್ಟಿ ತಮ್ಮ ತಮ್ಮ ವಾಹನಗಳಲ್ಲಿ ಸಾರ್ವಜನಿಕರು ತುಂಬಿಕೊಂಡು ಹೋಗಿದ್ದಾರೆ.

ಮಂಗಳೂರು: ರಸ್ತೆ ದಾಟುತ್ತಿದ್ದ ನಾಲ್ಕು ಕಾಡು ಹಂದಿಗಳಿಗೆ ಲಾರಿ ಡಿಕ್ಕಿ: ವಾಹನದಲ್ಲಿ ಕೊಂಡೊಯ್ದ ಸಾರ್ವಜನಿಕರು
ಗಾಯಗೊಂಡ ಕಾಡು ಹಂದಿ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Feb 12, 2024 | 9:44 PM

ಮಂಗಳೂರು, ಫೆಬ್ರವರಿ 12: ರಸ್ತೆ ದಾಟುತ್ತಿದ್ದ ಕಾಡು ಹಂದಿಗಳಿಗೆ (wild pig) ಲಾರಿ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಕಾಡು ಹಂದಿಗಳಿಗೆ ಗಾಯಗಳಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಗಾಯಗೊಂಡ ಹಂದಿಗಳಿಗೆ ಚಿಕಿತ್ಸೆ ನೀಡುವ ಬದಲು ಹಗ್ಗದಿಂದ ಕೈ-ಕಾಲು ಕಟ್ಟಿ ತಮ್ಮ ತಮ್ಮ ವಾಹನಗಳಲ್ಲಿ ಸಾರ್ವಜನಿಕರು ತುಂಬಿಕೊಂಡು ಹೋಗಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಮೈಸೂರು-ನಂಜನಗೂಡು ರಸ್ತೆಯ ಮಂಡಕಳ್ಳಿ ವಿಮಾನ ನಿಲ್ದಾಣದ ಬಳಿ ಇತ್ತೀಚೆಗೆ ತಡರಾತ್ರಿ ರಸ್ತೆ ದಾಟುವ ವೇಳೆ ಕಾರು ಡಿಕ್ಕಿ ಹೊಡೆದ ಪರಿಣಾಮ‌ 18 ತಿಂಗಳ ಗಂಡು ಹುಲಿಯೊಂದು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿತ್ತು. ಕೆಲವು ತಿಂಗಳ ಹಿಂದೆ ತನ್ನ ತಾಯಿಯೊಂದಿಗೆ ಕಾಣಿಸಿಕೊಂಡ ನಾಲ್ಕು ಮರಿಗಳಲ್ಲಿ ಇದೂ ಒಂದಾಗಿದೆ ಎಂದು ತಿಳಿದು ಬಂದಿತ್ತು.

ಬೀಳುವ ಹಂತಕ್ಕೆ ತಲುಪಿದ ಪಶು ಆಸ್ಪತ್ರೆ ಕಟ್ಟಡ: ರೈತರು ಆಕ್ರೋಶ

ಬೀದರ್: ಜಿಲ್ಲೆಯ ಭಾಲ್ಕಿ ತಾಲೂಕಿನ ಕಣಜಿ, ಜ್ಯಾಂತಿ ಗ್ರಾಮದಲ್ಲಿರುವ ಪಶು ಆಸ್ಪತ್ರೆಯ ಕಟ್ಟಡ ಇಗಲೋ ಆಗಲೋ ಬೀಳುವ ಸ್ಥಿತಿಯಲ್ಲಿದೆ. ಇಂಥಹ ಶಿಥಿಲಾವಸ್ಥೆಯಲ್ಲಿರುವ ಕಟ್ಟಡದಲ್ಲಿಯೇ ಪಶು ವೈದ್ಯರು ಸಿಬ್ಬಂದಿಗಳು ಕುಳಿತುಕೊಳ್ಳುವಂತ ಸ್ಥಿತಿ ನಿರ್ಮಾಣವಾಗಿದೆ. ಈ ಕಟ್ಟಡವನ್ನ ನೋಡಿದರು ಒಳಗಡೆಗೆ ಹೋಗದಂತ ಸ್ಥಿತಿ ನಿರ್ಮಾಣವಾಗಿದೆ. ಆದರೆ ಇಂತಹ ಕಟ್ಟಡವನ್ನ ನೆಲಸಮ ಮಾಡಿ ಹೊಸ ಕಟ್ಟಡ ಕಟ್ಟಿಕೊಡುವ ಕೆಲಸವನ್ನ ಪಶು ಇಲಾಕೆ ಮುಂದಾಗಿಲ್ಲ.

ಇದು ಸಹಜವಾಗಿಯೇ ಪಶು ಆಸ್ಪತ್ರೆಗೆ ಚಿಕಿತ್ಸೆಗೆಂದು ಜಾನುವಾರುಗಳನ್ನ ತೆಗೆದುಕೊಂಡು ಬರುವ ರೈತರ ಆಕ್ರೋಶ ಹೆಚ್ಚಿಸುಂತೆ ಮಾಡಿದೆ. ಇದರ ಜೊತೆಗೆ ಈ ಪಶು ಆಸ್ಪತ್ರೆಯೂ ಗಲೀಜು ತುಂಬಿದ ಸ್ಥಳದಲ್ಲಿದ್ದು ಇಲ್ಲಿಗೆ ರೈತರು ತಮ್ಮ ಜಾನುವಾರು, ಕುರಿ, ಕೋಳಿ, ಸಾಕು ನಾಯಿಗಳನ್ನ ತೆಗೆದುಕೊಂಡು ಬಂದರೆ ಅವರು ಮುಗು ಮುಚ್ಚಿಕೊಂಡೆ ತಾವು ತಂದಿರುವ ಪ್ರಾಣಿಗಳಿಗೆ ಚಿಕಿತ್ಸೆಕೊಡಿಸಿಕೊಂಡು ಹೋಗುವಂತ ಸ್ಥಿತಿ ಇಲ್ಲಿದೆ ಎಂದು ರೈತರು ಅಸಮಾಧಾನ ವ್ಯಕ್ತ ಪಡಿಸುತ್ತಿದ್ದು ಈ ಕಟ್ಟಡ ನೆಲಸಮ ಮಾಡಿ ಒಳ್ಳೆಯ ಕಡ್ಡ ಕಟ್ಟಿಕೊಡಿ ಎಂದು ರೈತರು ಮನವಿ ಮಾಡಿದ್ದಾರೆ.

ವನ್ಯಜೀವಿಗಳ ಅಂಗಾಂಗ ಪತ್ತೆ: ಮಾಜಿ ಗೃಹ ಸಚಿವರ ಎಂಟ್ರಿ, ತಪ್ಪಿದ ಬಂಧನ

ವನ್ಯಜೀವಿಗಳ ಅಂಗಾಂಗಗಳನ್ನು ಮನೆಯಲ್ಲಿ ಇಟ್ಟುಕೊಳ್ಳೂವುದು ಎಷ್ಟೊಂದು ಅಪರಾಧ ಎನ್ನುವುದು ಸದ್ಯ ಎಲ್ಲರಿಗೂ ಮನವರಿಕೆ ಆಗಿದೆ. ಶೋಕಿಗಾಗಿ ವನ್ಯಜೀವಿಗಳ ಅಂಗಾಂಗ ಮನೆಯಲ್ಲಿ ಇಟ್ಟುಕೊಳ್ಳುವುದು ಸಾಮಾನ್ಯವಾಗಿತ್ತು. ಈಗ ಇಂತಹ ವನ್ಯಜೀವಿಗಳ ವಸ್ತುಗಳನ್ನು ಇಟ್ಟುಕೊಂಡು ಮಾಜಿ ಗೃಹ ಸಚಿವರ ಕ್ಷೇತ್ರದ ವ್ಯಕ್ತಿಯು ಇಕ್ಕಟ್ಟಿಗೆ ಸಿಲುಕಿದ್ದರು. ಮಾಜಿ ಗೃಹ ಸಚಿವರ ಎಂಟ್ರಿಯಿಂದ ಆ ವ್ಯಕ್ತಿಗೆ ಬಂಧನದಿಂದ ಬಿಗ್ ರಿಲೀಫ್ ಸಿಕ್ಕಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Devotional: ಸನಾತನ ಧರ್ಮದಲ್ಲಿ 108ರ ಮಹತ್ವ ತಿಳಿದುಕೊಳ್ಳಿ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
Daily Horoscope: ವೈವಾಹಿಕ ಜೀವನವು ಸುಖಮಯವಾಗಿ ಸಾಗಲಿದೆ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
‘ದರ್ಶನ್ ರಿಲೀಸ್​ ಆಗ್ತಾರಾ?’: ದೇವರಿಗೆ ಪ್ರಶ್ನೆ ಕೇಳಿ ಉತ್ತರ ಪಡೆದ ಪೂಜಾರಿ
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಭಾರೀ ಮಳೆಯಿಂದ ಟ್ರಾಫಿಕ್ ಮಧ್ಯೆ 8 ಅಡಿ ಉದ್ದದ ಮೊಸಳೆ ಪ್ರತ್ಯಕ್ಷ!
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಅಪ್ಪ ಕೊಚ್ಚಿ ಹೋಗುವ ವಿಡಿಯೋ ಮಗಳ ಮೊಬೈಲ್​ನಲ್ಲಿ ಸೆರೆ
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಪಿಕ್ನಿಕ್ ಹೋದ ಐವರು ಜಲಪಾತದಲ್ಲಿ ಕೊಚ್ಚಿ ಹೋದ ಭಯಾನಕ ವಿಡಿಯೋ ವೈರಲ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಸಿದ್ದರಾಮಯ್ಯ ಮೇಲಿನ ವೈರತ್ವ ಮಗನ ಮೇಲೆ ಸಾಧಿಸುವುದು ಸರಿಯಲ್ಲ:ಭೈರತಿ ಸುರೇಶ್
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ