AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ

ಮಂಗಳೂರಿನ ಅಡ್ಯಾರ್​​ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿ, ಬೊಂಡ ಫ್ಯಾಕ್ಟರಿ ಬಂದ್ ಮಾಡುವಂತೆ ಆದೇಶಿಸಲಾಗಿದೆ.

ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ
ಬೊಂಡ ಫ್ಯಾಕ್ಟರಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Apr 12, 2024 | 2:30 PM

ಮಂಗಳೂರು, (ಏಪ್ರಿಲ್ 12): ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.  ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ.ತಿಮ್ಮಯ್ಯ, ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಏಪ್ರಿಲ್ 8ರಂದು ಬೊಂಡ ಫ್ಯಾಕ್ಟರಿಯಿಂದ ಎಳನೀರು ಖರೀದಿ ಮಾಡಿ ಸೇವಿಸಿದ್ದರು. ಬಳಿಕ ಏಪ್ರಿಲ್ 9ರಿಂದ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿದ್ದರು. ಅಡ್ಯಾರ್​​ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಸುತ್ತಮುತ್ತಲಿನ ನಿವಾಸಿಗಳು ಲೀಟರ್ ಲೆಕ್ಕದಲ್ಲಿ ಎಳನೀರು ಖರೀದಿಸಿದ್ದರು. ಬಳಿಕ ಅದನ್ನು ಸೇವಿಸಿದ ಬಳಿಕ ವಾಂತಿ. ಬೇಧಿ, ಜ್ವರ ಮತ್ತು ತಲೆನೋವಿನಿಂದ ಬಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
ದೃಷ್ಟಿಹೀನ ಮಕ್ಕಳು ಹುಟ್ಟುಹಬ್ಬದ ಶುಭಾಶಯ ಕೋರಿದಾಗ ಕಣ್ಣೀರಿಟ್ಟ ರಾಷ್ಟ್ರಪತಿ
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
‘ಪಪ್ಪಿ’ ಸಿನಿಮಾಗೆ 50 ದಿನದ ಸಂಭ್ರಮ; ವೇದಿಕೆಯಲ್ಲಿ ಬಾಲ ನಟರ ಡೈಲಾಗ್
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಸಿಎಂ ಮತ್ತು ಡಿಸಿಎಂ ಜೊತೆ ಹಲವಾರು ಸಚಿವರು ನಾಳೆ ತುಮಕೂರು ಆಗಮನ
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಬೆನ್ನು ನೋವಿಗೆ ಕಾರಣವೇನು? ಯೋಗದ ಮೂಲಕ ಪರಿಹರಿಸಿಕೊಳ್ಳುವುದು ಹೇಗೆ?
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ಐದು ದಿನಗಳ ಕಾಲ ಸುಟ್ಟ ಗಾಯಗಳೊಂದಿಗೆ ಜೀವನ್ಮರಣ ಹೋರಾಟ ನಡೆಸಿದ ಬಾಲಕ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ವಿದ್ಯುತ್ ಚಿತಾಗಾರದ ಕರೆಂಟ್ ಬಿಲ್ ಬಾಕಿ: ಬಡವಾಯ್ತೇ ಬಿಟಿಡಿಎ
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್