AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ

ಮಂಗಳೂರಿನ ಅಡ್ಯಾರ್​​ನಲ್ಲಿರುವ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ಬೊಂಡ ಫ್ಯಾಕ್ಟರಿಯ ಎಳನೀರು ಸೇವಿಸಿ ಇದುವರೆಗೆ 137 ಮಂದಿ ಅಸ್ವಸ್ಥರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಎಳನೀರು ಮತ್ತು ಇತರ ಆಹಾರೋತ್ಪನ್ನಗಳನ್ನು ಮಾರಾಟ ಮಾಡದಂತೆ ನೋಟಿಸ್ ಜಾರಿಗೊಳಿಸಿ, ಬೊಂಡ ಫ್ಯಾಕ್ಟರಿ ಬಂದ್ ಮಾಡುವಂತೆ ಆದೇಶಿಸಲಾಗಿದೆ.

ನ್ಯಾಚುರಲ್ ಐಸ್ ಕ್ರೀಂ ಮಾರಾಟ ಮಾಡುವ ಮಂಗಳೂರಿನ ಬೊಂಡ ಫ್ಯಾಕ್ಟರಿ ಬಂದ್​ಗೆ ಆದೇಶ
ಬೊಂಡ ಫ್ಯಾಕ್ಟರಿ
TV9 Web
| Edited By: |

Updated on: Apr 12, 2024 | 2:30 PM

Share

ಮಂಗಳೂರು, (ಏಪ್ರಿಲ್ 12): ನಗರ ಹೊರವಲಯದ ಅಡ್ಯಾರ್‌ನಲ್ಲಿರುವ ‘ಬೊಂಡ ಫ್ಯಾಕ್ಟರಿ’ಯಲ್ಲಿ ಎಳನೀರು ಕುಡಿದು ಹಲವು ಮಂದಿ ಅಸ್ವಸ್ಥರಾಗಿದ್ದಾರೆ. ಇದುವರೆಗೆ ಒಟ್ಟು 137 ಜನರು ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಂ ಮಾರಾಟ ಸಂಸ್ಥೆಯಾದ ‘ಬೊಂಡ ಫ್ಯಾಕ್ಟರಿ’ಯನ್ನು ಬಂದ್ ಮಾಡುವಂತೆ ದಕ್ಷಿಣಕನ್ನಡ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ತಿಮ್ಮಯ್ಯ ಆದೇಶಿಸಿದ್ದಾರೆ.  ದ.ಕ.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಜಿಲ್ಲಾ ಅಂಕಿತ ಅಧಿಕಾರಿ ಆಹಾರ ಸುರಕ್ಷತೆ, ಜಿಲ್ಲಾ ಸರ್ವೇಕ್ಷಣಾಧಿಕಾರಿ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಅವರನ್ನು ಒಳಗೊಂಡ ತಂಡ ಗುರುವಾರ ಅಡ್ಯಾರ್‌ನ ಬೊಂಡ ಫ್ಯಾಕ್ಟರಿಗೆ ಭೇಟಿ ನೀಡಿ ಸಂಸ್ಥೆಯ ಮುಖ್ಯಸ್ಥರೊಂದಿಗೆ ಚರ್ಚಿಸಿ ತಾತ್ಕಾಲಿಕವಾಗಿ ಮತ್ತು ಮತ್ತು ಮುಂದಿನ ಆದೇಶದವರೆಗೆ ಬೊಂಡ ನೀರು ಮತ್ತು ಇತರೆ ಆಹಾರ ಪದಾರ್ಥಗಳನ್ನು ಮಾರಾಟ ಮಾಡದಂತೆ ನೋಟೀಸ್ ನೀಡಿ ಬಂದ್ ಮಾಡಿಸಿದ್ದಾರೆ.

ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಡಾ.ತಿಮ್ಮಯ್ಯ, ಬೊಂಡ ಫ್ಯಾಕ್ಟರಿಯ ಎಳನೀರು ಕುಡಿದು ಇದುವರೆಗೆ 137 ಮಂದಿ ಅಸ್ವಸ್ಥರಾಗಿರುವುದು ಬೆಳಕಿಗೆ ಬಂದಿದ್ದು, ಹೊರರೋಗಿಗಳಾಗಿ 84 ಮಂದಿ ಒಳರೋಗಿಗಳಾಗಿ 53 ಮಂದಿಗೆ ಚಿಕಿತ್ಸೆ ಪಡೆದಿದ್ದಾರೆ. ಸದ್ಯ ಮಂಗಳೂರು, ಬಂಟ್ವಾಳದ ಸರ್ಕಾರಿ, ಖಾಸಗಿ ಆಸ್ಪತ್ರೆಯಲ್ಲಿ 30 ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು, ಎಲ್ಲರ ಆರೋಗ್ಯ ಸ್ಥಿರವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಅಡ್ಯಾರ್ ಬಳಿ ಐಸ್‌ಕ್ರೀಂ ಘಟಕದ ಎಳನೀರು ಸೇವಿಸಿದ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಏಪ್ರಿಲ್ 8ರಂದು ಬೊಂಡ ಫ್ಯಾಕ್ಟರಿಯಿಂದ ಎಳನೀರು ಖರೀದಿ ಮಾಡಿ ಸೇವಿಸಿದ್ದರು. ಬಳಿಕ ಏಪ್ರಿಲ್ 9ರಿಂದ ವಾಂತಿ, ಬೇಧಿಯಾಗಿ ಅಸ್ವಸ್ಥರಾಗಿದ್ದರು. ಅಡ್ಯಾರ್​​ನಲ್ಲಿರುವ ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿ ಎಂಬ ಎಳನೀರು ಮತ್ತು ನ್ಯಾಚುರಲ್ ಐಸ್ ಕ್ರೀಮ್ ಮಾರಾಟ ಮಾಡುವ ಸಂಸ್ಥೆಯಿಂದ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಸುತ್ತಮುತ್ತಲಿನ ನಿವಾಸಿಗಳು ಲೀಟರ್ ಲೆಕ್ಕದಲ್ಲಿ ಎಳನೀರು ಖರೀದಿಸಿದ್ದರು. ಬಳಿಕ ಅದನ್ನು ಸೇವಿಸಿದ ಬಳಿಕ ವಾಂತಿ. ಬೇಧಿ, ಜ್ವರ ಮತ್ತು ತಲೆನೋವಿನಿಂದ ಬಳಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!