Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ

ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ.

Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
|

Updated on: Apr 17, 2023 | 3:48 PM

ಮಂಗಳೂರು: ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru international airport) ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ. ಆದರೆ, ಶುಲ್ಕ ತೆತ್ತು ಒಳ ಪ್ರವೇಶಿಸಬೇಕಾಗಲಿದೆ. ಸದ್ಯ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರಿಗೆ ಗ್ರೌಂಡ್​ ಫ್ಲೋರ್​ ಪ್ರವೇಶಿಸಲಷ್ಟೇ ಅನುಮತಿ ಇದೆ. ಅಲ್ಲಿಂದಲೇ ತಮ್ಮವರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಇದೆ.

ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್ ಒಳಗೆ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಪ್ರವೇಶಕ್ಕೆ ಅನುಮತಿಸಲು ವಿಮಾನ ನಿಲ್ದಾಣ ಆಡಳಿತ ಯೋಜನೆಯನ್ನು ರೂಪಿಸಲು ಯೋಜಿಸಿದೆ. ಮೂಲಗಳ ಪ್ರಕಾರ, ಸೇವೆಯನ್ನು ಪ್ರಾರಂಭಿಸಲು ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಸಿದ್ಧತೆಗಳು ಸಿಐಎಸ್‌ಎಫ್‌ನಿಂದ ಭದ್ರತಾ ಅನುಮೋದನೆ, ಪ್ರಯಾಣಿಕರನ್ನು ಕರೆದೊಯ್ಯಲು ಬವರುವವರ ಗ್ಯಾಲರಿಗಾಗಿ ಗೊತ್ತುಪಡಿಸಿದ ಸ್ಥಳವನ್ನು ನಿಗದಿಪಡಿಸುವಂತಹ ವಿಚಾರಗಳನ್ನು ಒಳಗೊಂಡಿದೆ ಎನ್ನಲಾಗಿದೆ. ವಿಮಾನ ನಿಲ್ದಾಣ ಆಡಳಿತವು ಈಗಾಗಲೇ ಅರೈವಲ್ ಲಾಬಿಯ ಹೊರಗೆ ಕಿಯೋಸ್ಕ್ ಅನ್ನು ಸ್ಥಾಪಿಸಿದ್ದು ಪ್ರತಿ ಟಿಕೆಟ್‌ಗೆ ಸುಮಾರು 100 ರೂ ನಿಗದಿಪಡಿಸಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಟರ್ಮಿನಲ್ ಪ್ರವೇಶಕ್ಕೆ ಸಂಬಂಧಿಸಿದ ಸೇವೆಯ ವಿವರಗಳು ಶೀಘ್ರದಲ್ಲೇ ಲಭ್ಯವಾಗಲಿವೆ. ಸೇವೆಯನ್ನು ಪ್ರಾರಂಭಿಸಿದ ನಂತರ, ಜನರು ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್‌ನಲ್ಲಿ ಭೇಟಿಯಾಗಲು ಅವಕಾಶವನ್ನು ಪಡೆಯುತ್ತಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ 2022-23ನೇ ಹಣಕಾಸು ವರ್ಷದಲ್ಲಿ ಶೇ 76ರಷ್ಟು ಹೆಚ್ಚಾಗಿರುವುದು ಇತ್ತೀಚೆಗೆ ತಿಳಿದುಬಂದಿತ್ತು. ಈ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 17,94,054 ಮಂದಿ ಪ್ರಯಾಣಿಸಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ 10,16,559 ಮಂದಿ ಪ್ರಯಾಣಿಸಿದ್ದರು ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದರು. ಒಟ್ಟಾರೆಯಾಗಿ 17.94 ಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದು ಈ ಪೈಕಿ 12.08 ಲಕ್ಷ ಮಂದಿ ದೇಶೀಯ ಪ್ರಯಾಣಿಕರಾಗಿದ್ದಾರೆ. 5.86 ಲಕ್ಷ ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದು, ಮುಖ್ಯವಾಗಿ ಗಲ್ಫ್ ದೇಶಗಳಿಗೆ ಪ್ರಯಾಣಿಸಿದವರು ಎಂದು ಅವರು ಮಾಹಿತಿ ನೀಡಿದ್ದರು. ಇದರೊಂದಿಗೆ ಮಂಗಳೂರು ವಿಮಾನ ನಿಲ್ದಾಣದ ಜನಪ್ರಿಯತೆ ಹೆಚ್ಚುತ್ತಿರುವುದು ತಿಳಿದುಬಂದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿ
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ರೇಣುಕಾಸ್ವಾಮಿ ಕೊಲೆಯಾದ ದಿನ ಆ ಶೆಡ್​ಗೆ ಬಂದಿದ್ದ ಎಂಎಲ್​ಎ ಆಪ್ತ; ಯಾರವನು?
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ವಸತಿ ಶಾಲೆಯಲ್ಲಿ ಮಕ್ಕಳ ಊಟೋಪಚಾರ ಬಗ್ಗೆ ತಿಳಿಯುವ ಪ್ರಯತ್ನ ಸಿಎಂ ಮಾಡಿದರು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ದರ್ಶನ್ ಗೆಳೆಯರ ರೌಡಿಸಂ ಬಗ್ಗೆ ದರ್ಶನ್ ಮಾಜಿ ಭದ್ರತಾ ಸಿಬ್ಬಂದಿ ಮಾತು
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ಊಟದ ಬ್ರೇಕ್ ಇಲ್ಲದೆ ಜನತಾ ದರ್ಶನದಲ್ಲಿ ಜನರ ಸಮಸ್ಯೆ ಆಲಿಸಿದ ಕುಮಾರಸ್ವಾಮಿ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ದರ್ಶನ್​ ಬಳಸುವ ಮೊಬೈಲ್​ ನಂಬರ್​ ಬಗ್ಗೆ ಶಾಕಿಂಗ್​ ವಿಚಾರ ಬಹಿರಂಗ
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಪ್ರಧಾನಿ ಮೋದಿ, ನನ್ನ ತಂದೆ ಉತ್ತಮ ಸ್ನೇಹಿತರಂತೆ ಇದ್ದರು; ಚಿರಾಗ್ ಪಾಸ್ವಾನ್
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಮಕ್ಕಳ ಜೊತೆ ಊಟ ಮಾಡಿದ ಸಿದ್ದರಾಮಯ್ಯ ಮುದ್ದೆ ಇನ್ನೂ ಸ್ವಲ್ಪ ಬೇಯಿಸಬೇಕೆಂದರು
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕುಮಾರಸ್ವಾಮಿ ಹಳ್ಳಿಗಳಿಗೆ ಹೋದರೆ ಅಧಿಕಾರಿಗಳೂ ಹೋಗುತ್ತಾರೆ: ಶಿವಕುಮಾರ್
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ಕೆಲವರಿಗೆ ಮಾತ್ರ ಜನತಾ ದರ್ಶನ ನಡೆಸುವ ಅವಕಾಶವಿರುತ್ತದೆ: ಸಿದ್ದರಾಮಯ್ಯ
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?
ರೇಣುಕಾ ಸ್ವಾಮಿ ಕೊಲೆ ಬಳಿಕ ದರ್ಶನ್​ಗೆ 40 ಲಕ್ಷ ರೂ. ಕೊಟ್ಟಿದ್ದು ಯಾರು?