Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ

ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ.

Mangaluru airport: ಮಂಗಳೂರು ವಿಮಾನ ನಿಲ್ದಾಣ; ಇನ್ನು ಪ್ರಯಾಣಿಕರ ಕರೆದೊಯ್ಯಲು ಬರುವವರಿಗೂ ಸಿಗಲಿದೆ ಟರ್ಮಿನಲ್ ಒಳಗೆ ಎಂಟ್ರಿ
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Follow us
Ganapathi Sharma
|

Updated on: Apr 17, 2023 | 3:48 PM

ಮಂಗಳೂರು: ಆತ್ಮೀಯರು ಮತ್ತು ಸಂಬಂಧಿಕರನ್ನು ಕರೆದೊಯ್ಯುವುದಕ್ಕೆಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (Mangaluru international airport) ಬರುವವರಿಗೆ ಶೀಘ್ರದಲ್ಲೇ ವಿಮಾನ ನಿಲ್ದಾಣದ ಟರ್ಮಿನಲ್‌ ಪ್ರವೇಶಿಸಲು ಅವಕಾಶ ದೊರೆಯಲಿದೆ. ಆದರೆ, ಶುಲ್ಕ ತೆತ್ತು ಒಳ ಪ್ರವೇಶಿಸಬೇಕಾಗಲಿದೆ. ಸದ್ಯ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರಿಗೆ ಗ್ರೌಂಡ್​ ಫ್ಲೋರ್​ ಪ್ರವೇಶಿಸಲಷ್ಟೇ ಅನುಮತಿ ಇದೆ. ಅಲ್ಲಿಂದಲೇ ತಮ್ಮವರನ್ನು ಕರೆದುಕೊಂಡು ಹೋಗಲು ವ್ಯವಸ್ಥೆ ಇದೆ.

ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್ ಒಳಗೆ ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಪ್ರವೇಶಕ್ಕೆ ಅನುಮತಿಸಲು ವಿಮಾನ ನಿಲ್ದಾಣ ಆಡಳಿತ ಯೋಜನೆಯನ್ನು ರೂಪಿಸಲು ಯೋಜಿಸಿದೆ. ಮೂಲಗಳ ಪ್ರಕಾರ, ಸೇವೆಯನ್ನು ಪ್ರಾರಂಭಿಸಲು ಅಂತಿಮ ಸಿದ್ಧತೆಗಳು ನಡೆಯುತ್ತಿವೆ ಎನ್ನಲಾಗಿದೆ. ಈ ಸಿದ್ಧತೆಗಳು ಸಿಐಎಸ್‌ಎಫ್‌ನಿಂದ ಭದ್ರತಾ ಅನುಮೋದನೆ, ಪ್ರಯಾಣಿಕರನ್ನು ಕರೆದೊಯ್ಯಲು ಬವರುವವರ ಗ್ಯಾಲರಿಗಾಗಿ ಗೊತ್ತುಪಡಿಸಿದ ಸ್ಥಳವನ್ನು ನಿಗದಿಪಡಿಸುವಂತಹ ವಿಚಾರಗಳನ್ನು ಒಳಗೊಂಡಿದೆ ಎನ್ನಲಾಗಿದೆ. ವಿಮಾನ ನಿಲ್ದಾಣ ಆಡಳಿತವು ಈಗಾಗಲೇ ಅರೈವಲ್ ಲಾಬಿಯ ಹೊರಗೆ ಕಿಯೋಸ್ಕ್ ಅನ್ನು ಸ್ಥಾಪಿಸಿದ್ದು ಪ್ರತಿ ಟಿಕೆಟ್‌ಗೆ ಸುಮಾರು 100 ರೂ ನಿಗದಿಪಡಿಸಿದೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ; ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಹೆಚ್ಚಳ

ಪ್ರಯಾಣಿಕರನ್ನು ಕರೆದೊಯ್ಯಲು ಬರುವವರ ಟರ್ಮಿನಲ್ ಪ್ರವೇಶಕ್ಕೆ ಸಂಬಂಧಿಸಿದ ಸೇವೆಯ ವಿವರಗಳು ಶೀಘ್ರದಲ್ಲೇ ಲಭ್ಯವಾಗಲಿವೆ. ಸೇವೆಯನ್ನು ಪ್ರಾರಂಭಿಸಿದ ನಂತರ, ಜನರು ಆಗಮಿಸುವ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಅರೈವಲ್ ಟರ್ಮಿನಲ್‌ನಲ್ಲಿ ಭೇಟಿಯಾಗಲು ಅವಕಾಶವನ್ನು ಪಡೆಯುತ್ತಾರೆ ಎಂದು ಮೂಲವೊಂದು ತಿಳಿಸಿರುವುದಾಗಿ ‘ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರ ಸಂಖ್ಯೆ 2022-23ನೇ ಹಣಕಾಸು ವರ್ಷದಲ್ಲಿ ಶೇ 76ರಷ್ಟು ಹೆಚ್ಚಾಗಿರುವುದು ಇತ್ತೀಚೆಗೆ ತಿಳಿದುಬಂದಿತ್ತು. ಈ ಅವಧಿಯಲ್ಲಿ ವಿಮಾನ ನಿಲ್ದಾಣದ ಮೂಲಕ 17,94,054 ಮಂದಿ ಪ್ರಯಾಣಿಸಿದ್ದಾರೆ. 2021-22ನೇ ಹಣಕಾಸು ವರ್ಷದಲ್ಲಿ 10,16,559 ಮಂದಿ ಪ್ರಯಾಣಿಸಿದ್ದರು ಎಂದು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದರು. ಒಟ್ಟಾರೆಯಾಗಿ 17.94 ಲಕ್ಷ ಪ್ರಯಾಣಿಕರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದು ಈ ಪೈಕಿ 12.08 ಲಕ್ಷ ಮಂದಿ ದೇಶೀಯ ಪ್ರಯಾಣಿಕರಾಗಿದ್ದಾರೆ. 5.86 ಲಕ್ಷ ಮಂದಿ ಅಂತಾರಾಷ್ಟ್ರೀಯ ಪ್ರಯಾಣಿಕರಾಗಿದ್ದು, ಮುಖ್ಯವಾಗಿ ಗಲ್ಫ್ ದೇಶಗಳಿಗೆ ಪ್ರಯಾಣಿಸಿದವರು ಎಂದು ಅವರು ಮಾಹಿತಿ ನೀಡಿದ್ದರು. ಇದರೊಂದಿಗೆ ಮಂಗಳೂರು ವಿಮಾನ ನಿಲ್ದಾಣದ ಜನಪ್ರಿಯತೆ ಹೆಚ್ಚುತ್ತಿರುವುದು ತಿಳಿದುಬಂದಿತ್ತು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​