AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗಂಟಾದ ಮಂಗಳೂರಿನ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು

ಧರ್ಮಸ್ಥಳದ ಆಕಾಂಕ್ಷ ಪಂಜಾಬ್​​ನಲ್ಲಿ ನಿಗೂಢ ಸಾವು ಕೇಸ್​ ಸದ್ಯ ಕಗ್ಗಂಟಾಗಿದೆ. ಕಾಲೇಜಿನಲ್ಲಿ ಈ ಹಿಂದೆ ಇಂತಹ ಘಟನೆಗಳು ನಡೆದಿರುವುದರಿಂದ ಕಾಲೇಜಿನ ಮೇಲೆ ಅನುಮಾನ ವ್ಯಕ್ತವಾಗಿದ್ದು, ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಕಾಂಕ್ಷ ಪೋಷಕರು ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಕಗ್ಗಂಟಾದ ಮಂಗಳೂರಿನ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು
ಮೃತ ಆಕಾಂಕ್ಷ, ಪಂಜಾಬ್ ಸಿಎಂ ಭಗವಂತ್​ ಮಾನ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 19, 2025 | 4:29 PM

Share

ಮಂಗಳೂರು, ಮೇ 19: ಪಂಜಾಬ್​​ನಲ್ಲಿ ಧರ್ಮಸ್ಥಳದ (Dharmasthala) ಆಕಾಂಕ್ಷ ನಿಗೂಢ ಸಾವು ಕೇಸ್​​ಗೆ ಸಂಬಂಧಿಸಿದಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಈಗಾಗಲೇ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆಕಾಂಕ್ಷ ಸಾವಿನಲ್ಲಿ ಕಾಲೇಜಿನ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ (Bhagwant Mann) ಮೃತಾ ಆಕಾಂಕ್ಷ ಪೋಷಕರು ಪತ್ರ ಬರೆದಿದ್ದು, ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ಎಲ್​​ಪಿಸಿ ಕ್ಯಾಂಪಸ್​ನಲ್ಲಿ ಇದೇ ರೀತಿ ಹಲವು ಅಸಹಜ ಸಾವುಗಳಾಗಿವೆ. ಇದರಲ್ಲಿ ಕಾಲೇಜಿನ ಕೈವಾಡ ಹೆಚ್ಚಾಗಿ ಕಂಡು ಬರುತ್ತಿದೆ. ಸರಿಯಾದ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರುತ್ತದೆ. ಸರಿಯಾಗಿ ತನಿಖೆ ನಡೆಸುವಂತೆ ಪಂಜಾಬ್​ ಸಿಎಂಗೆ ಪತ್ರ ಬರೆದಿದ್ದಾರೆ.

ಪ್ರಕರಣ ತಿರುಚಲು ಯತ್ನ: ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ

ಇನ್ನು ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಆಕಾಂಕ್ಷ ಪೋಷಕರು ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ ಮಾಡಿದ್ದಾರೆ. ಇನ್ನು ಕೂಡ ಎಫ್​​ಐಆರ್​​ ದಾಖಲಾಗಿಲ್ಲ. ಎಫ್​ಐಆರ್​ ದಾಖಲಾಗದಿರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ಆಗಿಲ್ಲ.

ಇದನ್ನೂ ಓದಿ: ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಕಾಲೇಜಿನವರು ನೀಡಿದ ಮಾಹಿತಿ ಆಧಾರದಲ್ಲಿ ಎಫ್​ಐಆರ್​ ಮಾಡಲು ಬಿಡಲ್ಲವೆಂದು ಪೋಷಕರು ಪಟ್ಟು ಹಿಡಿದಿದ್ದು, ಇತ್ತ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರೊಫೆಸರ್ ವಿರುದ್ಧ ಎಫ್​​ಐಆರ್ ಹಾಕಲು ಪೊಲೀಸರು ಹಿಂದೇಟು ಆರೋಪ ಕೇಳಿಬಂದಿದೆ. ಇದರಿಂದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಕಾಂಕ್ಷ ಪೋಷಕರು ದೂರು ನೀಡಿದ್ದಾರೆ.

ಆಕಾಂಕ್ಷ ಪೋಷಕರನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆಕಾಂಕ್ಷ ಪೋಷಕರನ್ನು ಜಲಂಧರ್​ನ ಡಿಐಜಿ ನವೀನ್ ಸಿಂಗ್ಲಾ ಮತ್ತು ಎಸ್​​ಪಿ ರೂರೇಂಧರ್​ ಭಾಟ್ಟಿ ಕೌರ್ ಭೇಟಿ ಮಾಡಿದ್ದಾರೆ. ಈ ವೇಳೆ ಘಟನೆಯನ್ನು ವಿವರಿಸಿ ಪೋಷಕರ ಅಹವಾಲು ಸ್ವೀಕರಿಸಿದ್ದಾರೆ. ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಆದರೆ ಆ ರೀತಿ ಮಾಡಲು ಆಗಲ್ಲ ಅಂತಾ ಪೊಲೀಸರು ಹೇಳಿದ್ದಾರೆ. ಹಾಗಾಗಿ ಆಕಾಂಕ್ಷ ಸಾವು ಪ್ರಕರಣ ಇನ್ನು ಕೂಡ ಕಗ್ಗಂಟಾಗಿದೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಧರ್ಮಸ್ಥಳ ಯುವತಿ ನಿಗೂಢ ಸಾವು: ಸರ್ಟಿಫಿಕೇಟ್ ತರಲು ಹೋಗಿ ದುರಂತ ಅಂತ್ಯ

22 ವರ್ಷದ ಆಕಾಂಕ್ಷ ಪಂಜಾಬ್​ನ ಪಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್​ ಕಾಲೇಜ್​ನಲ್ಲಿ ಏರೋನಾಟಿಕ್ ಇಂಜಿನಿಯರಿಂಗ್ ಮುಗಿಸಿದ್ದಳು. 6 ತಿಂಗಳಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್​ನಲ್ಲಿ ಕೆಲಸ ಮಾಡುತ್ತಿದ್ದಳು. ಹೆಚ್ಚುವರಿ ಕೋರ್ಸ್​​ಗಾಗಿ ಜರ್ಮನಿಗೆ ತೆರಳೋದಕ್ಕಾಗಿ ಸಜ್ಜಾಗಿದ್ದಳು. ಅಷ್ಟರಲ್ಲಿ ದುರಂತ ಸಂಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್