AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಗ್ಗಂಟಾದ ಮಂಗಳೂರಿನ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು

ಧರ್ಮಸ್ಥಳದ ಆಕಾಂಕ್ಷ ಪಂಜಾಬ್​​ನಲ್ಲಿ ನಿಗೂಢ ಸಾವು ಕೇಸ್​ ಸದ್ಯ ಕಗ್ಗಂಟಾಗಿದೆ. ಕಾಲೇಜಿನಲ್ಲಿ ಈ ಹಿಂದೆ ಇಂತಹ ಘಟನೆಗಳು ನಡೆದಿರುವುದರಿಂದ ಕಾಲೇಜಿನ ಮೇಲೆ ಅನುಮಾನ ವ್ಯಕ್ತವಾಗಿದ್ದು, ತನಿಖೆ ನಡೆಸಿ ನ್ಯಾಯ ಒದಗಿಸುವಂತೆ ಆಕಾಂಕ್ಷ ಪೋಷಕರು ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ.

ಕಗ್ಗಂಟಾದ ಮಂಗಳೂರಿನ ಆಕಾಂಕ್ಷ ಸಾವಿನ ಪ್ರಕರಣ: ಪಂಜಾಬ್ ಸಿಎಂಗೆ ಪತ್ರ ಬರೆದ ಕುಟುಂಬಸ್ಥರು
ಮೃತ ಆಕಾಂಕ್ಷ, ಪಂಜಾಬ್ ಸಿಎಂ ಭಗವಂತ್​ ಮಾನ್
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: May 19, 2025 | 4:29 PM

Share

ಮಂಗಳೂರು, ಮೇ 19: ಪಂಜಾಬ್​​ನಲ್ಲಿ ಧರ್ಮಸ್ಥಳದ (Dharmasthala) ಆಕಾಂಕ್ಷ ನಿಗೂಢ ಸಾವು ಕೇಸ್​​ಗೆ ಸಂಬಂಧಿಸಿದಂತೆ ಪ್ರೇಮ ವೈಫಲ್ಯದಿಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿರುವುದು ಈಗಾಗಲೇ ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆದರೆ ಆಕಾಂಕ್ಷ ಸಾವಿನಲ್ಲಿ ಕಾಲೇಜಿನ ಮೇಲೆ ಸಾಕಷ್ಟು ಅನುಮಾನಗಳು ಮೂಡಿವೆ. ಈ ಹಿನ್ನೆಲೆ ಪಂಜಾಬ್ ಸಿಎಂ ಭಗವಂತ್​ ಮಾನ್​ಗೆ (Bhagwant Mann) ಮೃತಾ ಆಕಾಂಕ್ಷ ಪೋಷಕರು ಪತ್ರ ಬರೆದಿದ್ದು, ಸರ್ಕಾರ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುವಂತೆ ಮನವಿ ಮಾಡಿದ್ದಾರೆ.

ಈ ಹಿಂದೆ ಎಲ್​​ಪಿಸಿ ಕ್ಯಾಂಪಸ್​ನಲ್ಲಿ ಇದೇ ರೀತಿ ಹಲವು ಅಸಹಜ ಸಾವುಗಳಾಗಿವೆ. ಇದರಲ್ಲಿ ಕಾಲೇಜಿನ ಕೈವಾಡ ಹೆಚ್ಚಾಗಿ ಕಂಡು ಬರುತ್ತಿದೆ. ಸರಿಯಾದ ತನಿಖೆ ನಡೆದರೆ ಮಾತ್ರ ಸತ್ಯ ಹೊರಬರುತ್ತದೆ. ಸರಿಯಾಗಿ ತನಿಖೆ ನಡೆಸುವಂತೆ ಪಂಜಾಬ್​ ಸಿಎಂಗೆ ಪತ್ರ ಬರೆದಿದ್ದಾರೆ.

ಪ್ರಕರಣ ತಿರುಚಲು ಯತ್ನ: ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ

ಇನ್ನು ಪ್ರಕರಣ ತಿರುಚಲು ಯತ್ನಿಸುತ್ತಿದ್ದಾರೆ ಎಂದು ಆಕಾಂಕ್ಷ ಪೋಷಕರು ಕಾಲೇಜು ಮತ್ತು ಪೊಲೀಸ್ ಇಲಾಖೆ ವಿರುದ್ಧ ಆರೋಪ ಮಾಡಿದ್ದಾರೆ. ಇನ್ನು ಕೂಡ ಎಫ್​​ಐಆರ್​​ ದಾಖಲಾಗಿಲ್ಲ. ಎಫ್​ಐಆರ್​ ದಾಖಲಾಗದಿರುವುದರಿಂದ ಮರಣೋತ್ತರ ಪರೀಕ್ಷೆ ಕೂಡ ಆಗಿಲ್ಲ.

ಇದನ್ನೂ ಓದಿ: ಪಂಜಾಬ್​ನಲ್ಲಿ ಧರ್ಮಸ್ಥಳದ ಯುವತಿ ಸಾವಿನ ಕಾರಣ ಕೊನೆಗೂ ಬಹಿರಂಗ

ಕಾಲೇಜಿನವರು ನೀಡಿದ ಮಾಹಿತಿ ಆಧಾರದಲ್ಲಿ ಎಫ್​ಐಆರ್​ ಮಾಡಲು ಬಿಡಲ್ಲವೆಂದು ಪೋಷಕರು ಪಟ್ಟು ಹಿಡಿದಿದ್ದು, ಇತ್ತ ಕಾಲೇಜು ಆಡಳಿತ ಮಂಡಳಿ ಹಾಗೂ ಪ್ರೊಫೆಸರ್ ವಿರುದ್ಧ ಎಫ್​​ಐಆರ್ ಹಾಕಲು ಪೊಲೀಸರು ಹಿಂದೇಟು ಆರೋಪ ಕೇಳಿಬಂದಿದೆ. ಇದರಿಂದ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಆಕಾಂಕ್ಷ ಪೋಷಕರು ದೂರು ನೀಡಿದ್ದಾರೆ.

ಆಕಾಂಕ್ಷ ಪೋಷಕರನ್ನು ಭೇಟಿ ಮಾಡಿದ ಹಿರಿಯ ಪೊಲೀಸ್ ಅಧಿಕಾರಿಗಳು

ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಆಕಾಂಕ್ಷ ಪೋಷಕರನ್ನು ಜಲಂಧರ್​ನ ಡಿಐಜಿ ನವೀನ್ ಸಿಂಗ್ಲಾ ಮತ್ತು ಎಸ್​​ಪಿ ರೂರೇಂಧರ್​ ಭಾಟ್ಟಿ ಕೌರ್ ಭೇಟಿ ಮಾಡಿದ್ದಾರೆ. ಈ ವೇಳೆ ಘಟನೆಯನ್ನು ವಿವರಿಸಿ ಪೋಷಕರ ಅಹವಾಲು ಸ್ವೀಕರಿಸಿದ್ದಾರೆ. ಕಾಲೇಜಿನ ವಿರುದ್ಧ ಪ್ರಕರಣ ದಾಖಲಿಸುವಂತೆ ಪೋಷಕರು ಆಗ್ರಹಿಸಿದ್ದಾರೆ. ಆದರೆ ಆ ರೀತಿ ಮಾಡಲು ಆಗಲ್ಲ ಅಂತಾ ಪೊಲೀಸರು ಹೇಳಿದ್ದಾರೆ. ಹಾಗಾಗಿ ಆಕಾಂಕ್ಷ ಸಾವು ಪ್ರಕರಣ ಇನ್ನು ಕೂಡ ಕಗ್ಗಂಟಾಗಿದೆ.

ಇದನ್ನೂ ಓದಿ: ಪಂಜಾಬ್​​ನಲ್ಲಿ ಧರ್ಮಸ್ಥಳ ಯುವತಿ ನಿಗೂಢ ಸಾವು: ಸರ್ಟಿಫಿಕೇಟ್ ತರಲು ಹೋಗಿ ದುರಂತ ಅಂತ್ಯ

22 ವರ್ಷದ ಆಕಾಂಕ್ಷ ಪಂಜಾಬ್​ನ ಪಗ್ವಾರದಲ್ಲಿರುವ ಲವ್ಲಿ ಪ್ರೊಫೆಷನಲ್​ ಕಾಲೇಜ್​ನಲ್ಲಿ ಏರೋನಾಟಿಕ್ ಇಂಜಿನಿಯರಿಂಗ್ ಮುಗಿಸಿದ್ದಳು. 6 ತಿಂಗಳಿಂದ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್​ನಲ್ಲಿ ಕೆಲಸ ಮಾಡುತ್ತಿದ್ದಳು. ಹೆಚ್ಚುವರಿ ಕೋರ್ಸ್​​ಗಾಗಿ ಜರ್ಮನಿಗೆ ತೆರಳೋದಕ್ಕಾಗಿ ಸಜ್ಜಾಗಿದ್ದಳು. ಅಷ್ಟರಲ್ಲಿ ದುರಂತ ಸಂಭವಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ