AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋದಲ್ಲಿ ನಿಗೂಢ ಸ್ಫೋಟ: ಗಾಯಗೊಂಡಿದ್ದ ಪ್ರಯಾಣಿಕನ ಸ್ಥಿತಿ ಗಂಭೀರ: ಪೊಲೀಸ್ ಆಯುಕ್ತ ಶಶಿಕುಮಾರ್

ಮಂಗಳೂರಿನಲ್ಲಿ ಆಟೋ ರಿಕ್ಷಾನಲ್ಲಿ ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಂಡಿದೆ. ಘಟನೆಯಲ್ಲಿ ಗಾಯಗೊಂಡಿರುವ ಆಟೋ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ.

ಆಟೋದಲ್ಲಿ ನಿಗೂಢ ಸ್ಫೋಟ: ಗಾಯಗೊಂಡಿದ್ದ ಪ್ರಯಾಣಿಕನ ಸ್ಥಿತಿ ಗಂಭೀರ: ಪೊಲೀಸ್ ಆಯುಕ್ತ ಶಶಿಕುಮಾರ್
Mangaluru Police Commissioner Shashi Kumar
TV9 Web
| Edited By: |

Updated on:Nov 21, 2022 | 11:49 AM

Share

ಮಂಗಳೂರು: ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ (Mangaluru Auto Blast) ಸಂಭವಿಸಿದ ನಿಗೂಢ ಸ್ಫೋಟ ಪ್ರಕರಣಕ್ಕೆ ಕ್ಷಣಕ್ಕೊಂದು ತಿರುವು ಸಿಗುತ್ತಿದೆ. ಆಟೋ ಪ್ರಯಾಣಿಕನ ನಿಗೂಢ ಹೆಜ್ಜೆಗಳು ಭಯ ಹುಟ್ಟಿಸುತ್ತಿವೆ. ಇದರ ಮಧ್ಯೆ ಸ್ಫೋಟದಲ್ಲಿ ಗಾಯಗೊಂಡಿದ್ದ ಆಟೋ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ (Shashi kumar) ಮಾಹಿತಿ ನೀಡಿದ್ದಾರೆ.

ಆಟೋದಲ್ಲಿ ನಿಗೂಢ ಸ್ಪೋಟ: ಹಿಂದೂ ಹೆಸರಿನಲ್ಲಿ ಆಧಾರ್ ಕಾರ್ಡ್ ಹೊಂದಿದ್ದ ಪ್ರಯಾಣಿಕನಿಗೆ ಸುನ್ನತ್ ಆಗಿರೋದು ಬೆಳಕಿಗೆ

ಮಂಗಳೂರಿನಲ್ಲಿ ಇಂದು(ನವೆಂಬರ್ 20) ಸುದ್ದಿಗಾರರೊಂದಿಗೆ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್, ಘಟನೆಯಲ್ಲಿ ಶಂಕಿತ ವ್ಯಕ್ತಿ(ಆಟೋ ಪ್ರಯಾಣಿಕ) ಹಾಗೂ ಆಟೋ ಚಾಲಕನಿಗೆ ಗಾಯಗಳಾಗಿವೆ. ಆದ್ರೆ, ಆಟೋ ಚಾಲಕ ಪುರುಷೋತ್ತಮ್​ ಪ್ರಾಣಾಪಾಯದಿಂದ ಪಾರಾಗಿದ್ದು, ಶಂಕಿತ ವ್ಯಕ್ತಿಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದರು.

ಸುಟ್ಟಗಾಯವಾದ್ದರಿಂದ ಮಾತಾಡಲು ವೈದ್ಯರು ಯಾರನ್ನೂ ಬಿಡುತ್ತಿಲ್ಲ. ಶಂಕಿತ ವ್ಯಕ್ತಿಗೆ ಇನ್ಫೆಕ್ಷನ್​ ಆಗುತ್ತೆ ಎಂದು ವಿಚಾರಣೆ ಸಾಧ್ಯವಾಗಿಲ್ಲ. ಶಂಕಿತ ವ್ಯಕ್ತಿಯ ಪ್ರಯಾಣದ ಬಗ್ಗೆ ಸರಿಯಾದ ಮಾಹಿತಿ ಸಿಕ್ಕಿಲ್ಲ. ಪ್ರಕರಣದ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತೇವೆ ಎಂದು ಹೇಳಿದರು.

ಆಟೋ ಚಾಲಕನ ಹೇಳಿಕೆ ಆಧರಿಸಿ ಪ್ರಕರಣ​ ದಾಖಲಿಸಿದ್ದೇವೆ. ಚಾಲಕನ ಜತೆ ಶಂಕಿತ ವ್ಯಕ್ತಿ ಯಾವುದೇ ಮಾತುಕತೆ ಮಾಡಿಲ್ಲ. ಶಂಕಿತನಿಗೆ ಬೇರೆ ಲಿಂಕ್​ ಇರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದ್ದು, ಗಾಯಾಳು ಗುಣಮುಖವಾಗುತ್ತಿದ್ದಂತೆ ವಿಚಾರಣೆ ಮಾಡುತ್ತೇವೆ. ತನಿಖೆ ಬಳಿಕ ಎಲ್ಲಾ ಮಾಹಿತಿ ಹೊರಬರಲಿದೆ ಎಂದು ಸ್ಪಷ್ಟಪಡಿಸಿದರು.

ಶಂಕಿತ ವ್ಯಕ್ತಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕ್ರಿಟಿಕಲ್ ಎಂಬ ಮಾಹಿತಿ ವೈದ್ಯರಿಂದ ನಮಗೆ ಸಿಕ್ಕಿದೆ. ನಮ್ಮ ಹಿರಿಯ ಅಧಿಕಾರಿಗಳು ಕ್ಷಣ ಕ್ಷಣದ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಆಟೋ ಚಾಲಕನ ಹೇಳಿಕೆ ಮೇಲೆ ಪ್ರಕರಣ ದಾಖಲಿಸಿದ್ದೇವೆ. ಚಾಲಕನ ಜೊತೆ ಶಂಕಿತ ವ್ಯಕ್ತಿ ಯಾವುದೇ ಮಾತುಕತೆ ಮಾಡಿಲ್ಲ. ಈ ವರೆಗೆ ಈ ಘಟನೆಯನ್ನು ಯಾವುದೇ ಬೇರೆ ಲಿಂಕ್ ಇರುವ ಬಗ್ಗೆ ಸದ್ಯಕ್ಕೆ ಮಾಹಿತಿ ಇಲ್ಲ. ಸಾರ್ವಜನಿಕರಲ್ಲಿ ಆತಂಕ ಮೂಡದೇ ಇರಲಿ ಎನ್ನುವ ಕಾರಣಕ್ಕೆ ತನಿಖೆಯನ್ನು ಗೌಪ್ಯತೆಯನ್ನು ಕಾಯ್ದುಕೊಳ್ಳಲಾಗಿದೆ ಎಂದು ಸ್ಪಷ್ಟಪಡಿಸಿದರು.

ಸಾರ್ವಜನಿಕ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿ ವಸ್ತು ಪ್ರದೇಶಗಳನ್ನು ನಿಗಾ ವಹಿಸಲಾಗಿದೆ. ಪೊಲೀಸ್ ಸಿಬ್ಬಂದಿ ವ್ಯಕ್ತಿಗಳು ಮತ್ತು ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ನಿಗಾ ವಹಿಸಲಾಗಿದೆ ಎಂದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:38 pm, Sun, 20 November 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!