AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರು ಬ್ಯಾಂಕ್ ದರೋಡೆಕೋರನಿಗೆ ಗುಂಡೇಟು!

ಅದು ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ರಾಬರಿ ಕೇಸ್​. ಮಟಮಟ ಮಧ್ಯಾಹ್ನವೇ ಸಹಕಾರಿ ಬ್ಯಾಂಕ್‌ಗೆ ನುಗ್ಗಿದ್ದ ದರೋಡೆಕೋರರು, ಪಿಸ್ತೂಲ್‌, ತಲ್ವಾರ್‌ ತೋರಿಸಿ ಕೆಜಿ ಕೆಜಿ ಚಿನ್ನದೊಂದಿಗೆ ಎಸ್ಕೇಪ್ ಆಗಿದ್ದರು. ಬಳಿಕ ಪೊಲೀಸರು ಅವರನ್ನು ಬಂಧಿಸಿದ್ದರು. ಇತ್ತೀಚೆಗೆ ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ ಆರೋಪಿಗೆ ಗುಂಡು ಹಾರಿಸಲಾಗಿತ್ತು. ಇದೀಗ ಮತ್ತೊಬ್ಬ ಆರೋಪಿಗೆ ಗುಂಡು ಹಾರಿಸಲಾಗಿತ್ತು.

ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರು ಬ್ಯಾಂಕ್ ದರೋಡೆಕೋರನಿಗೆ ಗುಂಡೇಟು!
ತಪ್ಪಿಸಿಕೊಳ್ಳಲು ಯತ್ನಿಸಿದ ಮಂಗಳೂರು ಬ್ಯಾಂಕ್ ದರೋಡೆಕೋರನಿಗೆ ಗುಂಡೇಟು..!
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Feb 01, 2025 | 2:53 PM

Share

ಮಂಗಳೂರು, ಫೆಬ್ರವರಿ 01: ನಗರದ ಕೋಟೆಕಾರ್ ಸಹಕಾರಿ ಬ್ಯಾಂಕ್​​ನಲ್ಲಿ ಚಿನ್ನಾಭರಣ, ನಗದು ದರೋಡೆ (Bank Robbery) ಕೇಸ್​ಗೆ ಸಂಬಂಧಿಸಿದಂತೆ ಇದೀಗ ಮತ್ತೊಬ್ಬ ಆರೋಪಿ ಮೇಲೆ ಪೊಲೀಸರು ಗುಂಡಿನ ದಾಳಿ ಮಾಡಿದ್ದಾರೆ. ಮಹಜರ್ ಸಂದರ್ಭದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ ಆರೋಪಿ ಮುರುಗನ್ ಡಿ ಮೇಲೆ ಪೊಲೀಸರಿಂದ ಗುಂಡು ಹಾರಿಸಲಾಗಿದೆ. ಮಂಗಳೂರು ಹೊರವಲಯದ ಉಳ್ಳಾಲದ ಅಜ್ಜಿನಡ್ಕ ಎಂಬಲ್ಲಿ ಘಟನೆ ನಡೆದಿದ್ದು, ಸದ್ಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಆರೋಪಿ ದರೋಡೆಗೆ ಬಳಸಿದ್ದ ಪಿಸ್ತೂಲ್​ ಅನ್ನು ಬಚ್ಚಿಟ್ಟಿದ್ದ. ಅದನ್ನು ರಿಕವರಿ ಮಾಡಲು ಆತನನ್ನು ಸ್ಥಳಕ್ಕೆ ಕರೆದುಕೊಂಡು ಹೋಗಲಾಗಿತ್ತು. ಈ ವೇಳೆ ಪೊಲೀಸ್ ಕಾನ್‌ಸ್ಟೆಬಲ್ ಮರ್ಮಾಂಗಕ್ಕೆ ಒದ್ದು ತಪ್ಪಿಸಿಕೊಳ್ಳುವುದಕ್ಕೆ ಪ್ರಯತ್ನ ಮಾಡಿದ್ದಾನೆ. ಪಿಸಿ ಮಂಜುನಾಥ್​ಗೆ ಗಾಯವಾಗಿದೆ. ಆರೋಪಿ ಮುರುಗನ್ ಡಿ ದೇವರ್ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಂತೆ ಉಳ್ಳಾಲ ಇನ್ಸ್​ಪೆಕ್ಟರ್ ಬಾಲಕೃಷ್ಣ ಆತನ ಕಾಲಿಗೆ ಶೂಟ್ ಮಾಡಿದ್ದಾರೆ.

ಹಾಡಹಗಲೇ ಬ್ಯಾಂಕ್‌ಗೆ ನುಗ್ಗಿ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದರು. ಜನವರಿ 17 ರಂದು ಮಂಗಳೂರಿನ ಕೋಟೆಕಾರು ಸಹಕಾರಿ ಬ್ಯಾಂಕ್‌ಗೆ ಎಂಟ್ರಿಕೊಟ್ಟಿದ್ದ ಗ್ಯಾಂಗ್‌, ಕಾರ್‌ನಲ್ಲೇ ಎಸ್ಕೇಪ್ ಆಗಿತ್ತು. ಅದೇ ಗ್ಯಾಂಗ್​ನ್ನು ಪೊಲೀಸರ ಬಲೆಗೆ ಬಿದ್ದಿತ್ತು. ಕೇರಳ ಮೂಲಕ ತಮಿಳುನಾಡು ಸೇರಿದ್ದ ಮುರುಗನ್ ಡಿ. ದೇವರ್, ಯೋಶುವಾ ರಾಜೇಂದ್ರನ್, ಕಣ್ಣನ್ ಮಣಿಯನ್ನ ಇತ್ತೀಚೆಗೆ ತಮಿಳುನಾಡಿನ ತಿರುವನ್ವೇಲಿಯಲ್ಲಿ ಬಂಧಿಸಲಾಗಿತ್ತು.

ಇದನ್ನೂ ಓದಿ: ಹಲ್ಲೆಗೆ ಯತ್ನಿಸಿ ಪರಾರಿಯಾಗಲು ಪ್ರಯತ್ನ: ಮಂಗಳೂರು ಬ್ಯಾಂಕ್ ದರೋಡೆ ಆರೋಪಿಗೆ ಖಾಕಿ ಫೈರಿಂಗ್‌

ದರೋಡೆಕೋರರನ್ನ ಇತ್ತೀಚೆಗೆ ಮಂಗಳೂರಿಗೆ ಕರೆದುಕೊಂಡು ಬರಲಾಗುತ್ತಿತ್ತು. ಸಂಜೆ 4.20 ರ ಸುಮಾರಿಗೆ ತಲಪಾಡಿ ಅಲಂಗಾರು ಗುಡ್ಡದ ಬಳಿ ಕರೆತಂದು ಸ್ಥಳ ಮಹಜರು ಮಾಡಲಾಗ್ತಿತ್ತು. ಈ ವೇಳೆ ಪ್ರಮುಖ ಆರೋಪಿ ಕಣ್ಣನ್ ಮಣಿ ಬಿಯರ್ ಬಾಟಲಿಯಿಂದ ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದ. ಪಿಐ ಬಾಲಕೃಷ್ಣ, ಪಿಸಿ ನಿತಿನ್, ಸಿಸಿಬಿ ಸಿಬ್ಬಂದಿ ಅಂಜನಪ್ಪ ಮೇಲೆ ದಾಳಿ ಮಾಡಿದ್ದ. ಕೂಡಲೇ ಅಲರ್ಟ್ ಆದ ಮಂಗಳೂರು ಸಿಸಿಬಿ ಇನ್ಸ್​ಪೆಕ್ಟರ್ ರಫೀಕ್‌, ಆರೋಪಿ ಮೇಲೆ ಗುಂಡಿನ ದಾಳಿ ಮಾಡಿದ್ದರು.

15 ಕೋಟಿ ಮೌಲ್ಯದ ಚಿನ್ನ: 11 ಲಕ್ಷ ರೂ ಹಣ ದರೋಡೆ!

ಇನ್ನು ಕೋಟೆಕಾರು ಬ್ಯಾಂಕ್‌ನಿಂದ ಎಷ್ಟು ಚಿನ್ನ ದರೋಡೆ ಆಗಿದೆ ಅನ್ನೋ ಮಾಹಿತಿ ಇರ್ಲಿಲ್ಲ. ಆರಂಭದಲ್ಲಿ 12 ಕೋಟಿ ರೂ. ಮೌಲ್ಯದ ಚಿನ್ನ ಅಂತಾ ಹೇಳಿದ್ರೆ, ಪೊಲೀಸರ ಮುಂದೆ ನಾಲ್ಕು ಕೋಟಿ ಮೌಲ್ಯದ ಚಿನ್ನ ಅಂತಾ ಹೇಳಲಾಗಿತ್ತು. ಆದರೆ ಎಲ್ಲಾ ಲೆಕ್ಕಹಾಕಿದ ಬಳಿಕ ಬರೋಬ್ಬರಿ 15 ಕೋಟಿ ರೂ. ಮೌಲ್ಯದ ಚಿನ್ನ ಕಳ್ಳತನ ಆಗಿರೋದು ಗೊತ್ತಾಗಿತ್ತು. ಬ್ಯಾಂಕ್‌ನಲ್ಲಿ ಆ ದಿನ ಒಟ್ಟು 23 ಕೋಟಿ ರೂ. ಮೌಲ್ಯದ ಚಿನ್ನ ಇತ್ತು. ಆದರೆ ದರೋಡೆಕೋರರು, 15 ಕೋಟಿ ರೂ. ಮೌಲ್ಯದ ಚಿನ್ನವನ್ನ ಮಾತ್ರ ಲೂಟಿ ಮಾಡಿ ಎಸ್ಕೇಪ್ ಆಗಿದ್ದರು. ಇದರ ಜತೆ 11 ಲಕ್ಷ 75 ಸಾವಿರ ರೂ ಹಣವನ್ನೂ ದೋಚಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:52 pm, Sat, 1 February 25

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ