AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಪಟಾಕಿ ಮಳಿಗೆ ತೆರೆಯಲು ಹೊಸ ನಿಯಮ, ಕಾಂಗ್ರೆಸ್ ಸರ್ಕಾರದ ಹುನ್ನಾರ ಎಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್

ದೀಪಾವಳಿಯ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿ ಹೇರಲಾಗಿದೆ. ಹತ್ತು ಹಲವು ನೆಪವೊಡ್ಡಿ ಹಿಂದೂಗಳ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ ಎಂದು ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಪಟಾಕಿ ಮಳಿಗೆ ತೆರೆಯಲು ಹೊಸ ನಿಯಮ, ಕಾಂಗ್ರೆಸ್ ಸರ್ಕಾರದ ಹುನ್ನಾರ ಎಂದ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್
ವೇದವ್ಯಾಸ್ ಕಾಮತ್
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on: Nov 10, 2023 | 4:28 PM

Share

ಮಂಗಳೂರು, ನವೆಂಬರ್ 10: ಬೆಳಕಿನ ಹಬ್ಬ ದೀಪಾವಳಿಯ (Deepavali) ಸಂಭ್ರಮಾಚರಣೆಗೆ ಇಡೀ ನಾಡಿಗೆ ನಾಡೇ ಕಾತರದಿಂದ ಕಾಯುತ್ತಿದೆ. ಆದ್ರೆ ಈ ಬಾರಿ ರಾಜ್ಯದಲ್ಲಿ ಪಟಾಕಿ (Firecrackers) ಮಳಿಗೆ ತೆರೆಯುವುದಕ್ಕೆ ಹಲವು ಷರತ್ತುಗಳನ್ನು ಹಾಕಲಾಗಿದೆ. ಸರ್ಕಾರ ಹೇರಿರುವ ಈ ನಿಯಮಗಳ ಬಗ್ಗೆ ಬಿಜೆಪಿ ಕಿಡಿಕಾರಿದ್ದು ಹಿಂದೂ ಧಾರ್ಮಿಕ ಆಚರಣೆಗಳಿಗೆ ಕಡಿವಾಣ ಹಾಕುವ ಕಾಂಗ್ರೆಸ್ ಸರ್ಕಾರದ ಷಡ್ಯಂತ್ರ ಎಂದಿದೆ. ಅದರಲ್ಲೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಗುರುತು ಮಾಡಿದ ಮೈದಾನ ಹೊರತುಪಡಿಸಿ ಬೇರೆಲ್ಲೂ ಪಟಾಕಿ ಅಂಗಡಿಗಳನ್ನು ತೆರೆಯದಂತೆ ನಿರ್ಬಂಧ ವಿಧಿಸಲಾಗಿದೆ. ಆದ್ರೆ ಈ ನಿರ್ಭಂದಗಳ ಬಗ್ಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ (Vedavyas Kamath) ತಗಾದೆ ತೆಗೆದಿದ್ದು ಈ ಹೊಸ ನಿಯಮಾವಳಿ ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದ ಹುನ್ನಾರವೆಂದು ಆರೋಪಿಸಿದ್ದಾರೆ. ದೀಪಾವಳಿಯ ಸಂದರ್ಭದಲ್ಲಿ ಮಾತ್ರ ಪಟಾಕಿ ವಿಷಯದಲ್ಲಿ ಇಲ್ಲ ಸಲ್ಲದ ನಿಯಮಾವಳಿ ಹೇರಲಾಗಿದೆ. ಹತ್ತು ಹಲವು ನೆಪವೊಡ್ಡಿ ಹಿಂದೂಗಳ ಹಬ್ಬದ ಸಂಭ್ರಮದ ವಾತಾವರಣಕ್ಕೆ ಅಡ್ಡಿ ಮಾಡಲಾಗುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆನೇಕಲ್ ಪಟಾಕಿ ದುರಂತ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಟಾಕಿ ಗೋದಾಮುಗಳಲ್ಲಿ ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಇಲಾಖೆಗಳು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ತಾಕೀತು ಮಾಡಿದೆ. ಇದರ ಜೊತೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ತಾತ್ಕಾಲಿಕವಾಗಿ ತೆರೆಯುವ ಪಟಾಕಿ ಮಳಿಗೆಗಳಿಗೆ ಹಲವು ನಿಯಮಗಳನ್ನು ಪಾಲಿಸುವಂತೆ ಆದೇಶಿಸಿದೆ.

ದಕ್ಷಿಣ ಕನ್ನಡದಲ್ಲಿ ಆಕ್ಷೇಪ ವ್ಯಕ್ತವಾಗಿದ್ದೇಕೆ?

ಈ ಹಿಂದೆ ಮಂಗಳೂರು ನಗರ ಸೇರಿದಂತೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ದೀಪಾವಳಿ ಸಂದರ್ಭದಲ್ಲಿ ರಸ್ತೆ ಬದಿಗಳಲ್ಲಿ ಸೇರಿದಂತೆ ಅಲ್ಲಲ್ಲಿ ಪಟಾಕಿ ಅಂಗಡಿ ತೆರೆಯುವುದಕ್ಕೆ ಅವಕಾಶ ನೀಡಲಾಗಿತ್ತು. ಆದ್ರೆ ಈ ಬಾರಿ ಮಂಗಳೂರು ನಗರದ ನೆಹರು ಮೈದಾನ, ಬೈಕಂಪಾಡಿ ಎಪಿಎಂಸಿ, ಪಚ್ಚನಾಡಿ, ಬೋಂದೇಲ್ ಹೀಗೆ ಕೆಲ ಮೈದಾನಗಳಲ್ಲಿ ಮಾತ್ರ ಪಟಾಕಿ ಅಂಗಡಿ ತೆರೆಯಲು ಸ್ಥಳ ಗುರುತಿಸಲಾಗಿದೆ. ಆದ್ರೆ ಎಷ್ಟೋ ಕಡೆಗಳಲ್ಲಿ ಮೈದಾನಗಳೇ ಇಲ್ಲ, ಹೀಗಾಗಿ ಈ ಹಿಂದೆ ಅಲ್ಲಿ ಪಟಾಕಿ ಅಂಗಡಿಗಳನ್ನು ಹಾಕುತ್ತಿದ್ದವರು ಈಗ ಎಲ್ಲಿ ಹೋಗಬೇಕು ಎಂದು ಶಾಸಕರು ಪ್ರಶ್ನಿಸಿದ್ದಾರೆ.

ಇನ್ನು ದೀಪಾವಳಿ ಹಬ್ಬಕ್ಕೆ ಎರಡು ದಿನ ಬಾಕಿಯಿದ್ದರು ಅನುಮತಿಗಾಗಿ ಪಟಾಕಿ ವ್ಯಾಪಾರಿಗಳು ಅಗ್ನಿಶಾಮಕ, ಪೊಲೀಸ್, ಮಹಾನಗರ ಪಾಲಿಕೆಗಳಿಗೆ ಅಲೆಯುತ್ತಿದ್ದು ಈ ಬಗ್ಗೆ ಹಿಂದೂಪರ ಸಂಘಟನೆಯಾದ ವಿಶ್ವಹಿಂದೂ ಪರಿಷತ್ ಸಹ ಆಕ್ರೋಶ ವ್ಯಕ್ತಪಡಿಸಿದೆ. ಇಷ್ಟು ಬಲವಾಗಿ ನಿಯಮ ಜಾರಿ ಮಾಡುವುದಾದರೆ ಮೈಕ್ ನಿಯಮ ಜಾರಿಯಾಗಲಿ. ಮಸೀದಿಗಳಲ್ಲಿ ಮೈಕ್ ಗಳನ್ನು ಜೋರಾಗಿ ಕೂಗಲಾಗುತ್ತಿದೆ ನ್ಯಾಯಾಲಯದ ಆದೇಶದಂತೆ ಅದನ್ನು ನಿಲ್ಲಿಸುವ ಕೆಲಸ ಆಗಿದೆಯಾ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ದೀಪಾವಳಿ: ಮಂಗಳೂರು-ಮಂಡ್ಯ ಮಧ್ಯೆ ವಿಶೇಷ ರೈಲು; ಇಲ್ಲಿದೆ ದಿನಾಂಕ, ಸಮಯ

ತಾತ್ಕಾಲಿಕ ಪಟಾಕಿ ಅಂಗಡಿ ಹಾಕುವವರು ಸುರಕ್ಷತಾ ದೃಷ್ಟಿಯ ಎಲ್ಲಾ ನೀತಿ ನಿಯಮ ಪಾಲಿಸಲು ಸಿದ್ದರಿದ್ದಾರೆ. ಆದರೆ ಈವರೆಗೂ ಇಲ್ಲದ ಅವೈಜ್ಞಾನಿಕ ನೀತಿ ನಿಯಮಗಳನ್ನು ಹೊಸದಾಗಿ ಸೃಷ್ಟಿಸಲಾಗಿದೆ ಎಂಬುದೇ ಇವರುಗಳ ಆರೋಪ. ಒಟ್ಟಿನಲ್ಲಿ ಈ ವಿಚಾರದಲ್ಲಿ ಮುಂದೆ ಸರ್ಕಾರದ ತುರ್ತು ನಡೆ ಏನಾಗಿರುತ್ತೆ ಎಂದು ಕಾದು ನೋಡಬೇಕಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​