AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಐಸಿಸ್ ಉಗ್ರಗಾಮಿ ಸಂಘಟನೆಯ ನಂಟು ಹೊಂದಿರುವ ಶಂಕಿತರೊಂದಿಗೆ ಸಂಪರ್ಕ ಹೊಂದಿದ್ದಾನೆ. ಅವರೇ ಇವನ ಹ್ಯಾಂಡ್ಲರ್​ಗಳು ​ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಶಂಕೆ ವ್ಯಕ್ತಪಡಿಸಿದ್ದಾರೆ.

Mangalore Blast: ಐಸಿಸ್ ಉಗ್ರರ ನಂಟಿನ ಮೂವರು ಶಂಕಿತರಿಂದ ಮಂಗಳೂರು ಸ್ಫೋಟಕ್ಕೆ ಕುಮ್ಮಕ್ಕು: ಪೊಲೀಸರ ಶಂಕೆ
ಅಲೋಕ್ ಕುಮಾರ್, ಎಡಿಜಿಪಿ
TV9 Web
| Edited By: |

Updated on:Nov 22, 2022 | 9:19 AM

Share

ಮಂಗಳೂರು: ಐಸಿಸ್ (Islamic State) ಸಂಘಟನೆಗಳೊಂದಿಗೆ ನಂಟು ಹೊಂದಿದ್ದಾರೆ ಎಂದು ಶಂಕಿಸಲಾಗಿರುವ, 2020ರಿಂದ ನಾಪತ್ತೆಯಾಗಿರುವ ಮೂವರು ವ್ಯಕ್ತಿಗಳು ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಶಾರೀಖ್​ಗೆ ತಾಂತ್ರಿಕ ಹಾಗೂ ಹಣಕಾಸು ನೆರವು ನೀಡಿರಬಹುದು. ಅವರೇ ಈತನ ‘ಹ್ಯಾಂಡ್ಲರ್​’ ಸಹ ಆಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಪೊಲೀಸ್ ಪರಿಭಾಷೆಯಲ್ಲಿ ‘ಹ್ಯಾಂಡ್ಲರ್’ ಎಂದರೆ ಉಗ್ರಗಾಮಿ ಚಟುವಟಿಕೆ ನಡೆಸಲು ಗುರುತಿಸಿದ ವ್ಯಕ್ತಿಯ ಕಾರ್ಯನಿರ್ವಹಣೆಯನ್ನು ದೂರದಿಂದಲೇ ನಿಯಂತ್ರಿಸುವುದು ಎಂಬ ಅರ್ಥವಿದೆ.

ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್​ ಕುಮಾರ್ ಸ್ವತಃ  ಈ ಅನುಮಾನ ವ್ಯಕ್ತಪಡಿಸಿದರು. ಐಸಿಸ್ ಜೊತೆಗೆ ನಂಟು ಹೊಂದಿರುವ ಶಂಕೆ ಇರುವ ಮುಸಾಬಿರ್ ಹುಸೇನ್, ಅಬ್ದುಲ್ ಮಥೀನ್ ತಾಹಾ ಮತ್ತು ಅರಾಫತ್ ಅಲಿ ಜಂಟಿಯಾಗಿ ಶಾರಿಕ್​ನ ಚಟುವಟಿಕೆಗಳನ್ನು ನಿರ್ವಹಿಸಿರುವ ಸಾಧ್ಯತೆಯಿದೆ. ಅವರೇ ಶಾರಿಕ್​ಗೆ ಹಣಕಾಸು ಹೊಂದಿಸಿಕೊಡುವುದರ ಜೊತೆಗೆ ಹ್ಯಾಂಡ್ಲರ್​ಗಳಾಗಿಯೂ ಕಾರ್ಯನಿರ್ವಹಿಸಿರಬಹುದು ಎಂದು ತಿಳಿಸಿದರು.

ಶಾರಿಕ್​ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ವಾಸಿ ಎಂದು ಸ್ಪಷ್ಟವಾಗಿದೆ. ಈತನ ಮೇಲೆ ಈ ಮೊದಲು ಮೂರು ಪ್ರಕರಣಗಳು ದಾಖಲಾಗಿವೆ. ಮುಸಾಬಿರ್ ಹುಸೇನ್ ಮತ್ತು ಮಥೀನ್ ತಾಹಾ ವಿರುದ್ಧ 2020ರಲ್ಲಿ ಬೆಂಗಳೂರಿನಲ್ಲಿ ಪ್ರಕರಣ ದಾಖಲಾಗಿತ್ತು. ಇನ್ನು ಗೋಡೆ ಬರಹ ಪ್ರಕರಣದಲ್ಲಿ ತಲೆಮರೆಸಿಕೊಂಡ ಅರಾಫತ್ ಅಲಿ ದುಬೈನಲ್ಲಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಈವರೆಗೂ ನಾಲ್ವರನ್ನು ಬಂಧಿಸಲಾಗಿದೆ. ಮೈಸೂರಿನ ಇಬ್ಬರು, ಮಂಗಳೂರಿನ ಒಬ್ಬ ಹಾಗೂ ಊಟಿಯಿಂದ ಒಬ್ಬನನ್ನು ಬಂಧಿಸಿ ಕರೆತರಲಾಗಿದೆ ಎಂದರು.

ಕೊಯಮತ್ತೂರು, ಕೇರಳ, ತಮಿಳುನಾಡು ತಿರುಗಾಡಿ ಕಳೆದ ಸೆ.20ರಂದು ಮೈಸೂರಿಗೆ ಶಾರಿಕ್ ಬಂದಿದ್ದ. ಮೈಸೂರಿನ​ ಲೋಕ ನಾಯಕ ನಗರದಲ್ಲಿ ಮೋಹನ್‍ಕುಮಾರ್ ಎಂಬುವರ ಮನೆಯಲ್ಲಿ ಬಾಡಿಗೆಗೆ ಇದ್ದನು. ಮನೆ ಮಾಲೀಕರಿಗೆ ಈತನ ಬಗ್ಗೆ ಗೊತ್ತಿರಲಿಲ್ಲ. ಹುಬ್ಬಳ್ಳಿ-ಧಾರವಾಡ ನಿವಾಸಿ ಪ್ರೇಮ್‍ರಾಜ್ ಎಂಬ ಆಧಾರ್ ಕಾರ್ಡ್ ಹೊಂದಿದ್ದನು ಎಂದು ಹೇಳಿದರು.

ಶಾರಿಕ್ ಇನ್ನೂ ಚಿಕಿತ್ಸೆ ಪಡೆದುಕೊಳ್ಳುತ್ತಿರುವುದರಿಂದ ಆತ ಬ್ಲಾಸ್ಟ್​​ಗೆ ಸಂಬಂಧಿಸಿದ ಸಾಧನಗಳನ್ನು ಎಲ್ಲಿಗೆ ತೆಗೆದುಕೊಂಡು ಹೋಗುತ್ತಿದ್ದನು ಎಂಬುವುದನ್ನು ತಿಳಿಯಬೇಕಾಗಿದೆ. ಬ್ಲಾಸ್ಟ್​​ಗೂ ಮುನ್ನ ಶಾರಿಕ್​ ನವೆಂಬರ್ 10 ರಂದು ಮಂಗಳೂರಿಗೆ ಭೇಟಿ ನೀಡಿದ್ದನು. ಘಟನೆಯಲ್ಲಿ ಕೆಲ ಸ್ಥಳೀಯರ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ ಎಂದು ಅಲೋಕ್ ಕುಮಾರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:33 am, Tue, 22 November 22

Follow Us
Web contact
Web contact

TV9 Kannada

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!