AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಗೂಗಲ್ ಮ್ಯಾಪ್ ಲೊಕೇಷನ್ ತಿರುಚಿದ ಕಿಡಿಗೇಡಿಗಳು

ದೇಗುಲದ ಆಡಳಿತ ಮಂಡಳಿ ದೂರು ನೀಡಿದ ಬೆನ್ನಲ್ಲೇ ಗೂಗಲ್ ಮ್ಯಾಪ್ ಲೊಕೇಷನ್ ಮತ್ತೆ ಸರಿಯಾಗಿದೆ. ಸಾಮರಸ್ಯ ಹಾಳು ಮಾಡಿದವರ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ಧಾರ್ಮಿಕ ಭಾವನೆಗೆ ಘಾಸಿ ಉಂಟುವಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಮಂಗಳೂರು: ಮಂಗಳಾದೇವಿ ದೇವಸ್ಥಾನದ ಗೂಗಲ್ ಮ್ಯಾಪ್ ಲೊಕೇಷನ್ ತಿರುಚಿದ ಕಿಡಿಗೇಡಿಗಳು
ಮಂಗಳಾದೇವಿ ದೇವಸ್ಥಾನ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Dec 13, 2023 | 1:54 PM

Share

ಮಂಗಳೂರು, ಡಿಸೆಂಬರ್ 13: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ (Mangaluru) ಮಂಗಳಾದೇವಿ ದೇವಸ್ಥಾನದ (Mangaladevi Temple) ಗೂಗಲ್​ ಮ್ಯಾಪ್​ ಲೊಕೇಷನ್ (Google Map) ಅನ್ನು ಕಿಡಿಗೇಡಿಗಲು ತಿರುಚಿರುವುದು ಕಂಡುಬಂದಿದೆ. ದೇಗುಲ ಇರುವ ಜಾಗದ ಹೆಸರನ್ನು ಬೋಳಾರ ಶೇಖ್ ಉಮ್ಮರ್ ಸಾಹೇಬ್ ಕಾಂಪೌಂಡ್ ಅಂತ ಮರುನಾಮಕರಣ ಮಾಡಲಾಗಿದೆ.

ಮಂಗಳಾದೇವಿ ದೇವಸ್ಥಾನದಿಂದ 200 ಮೀಟರ್ ದೂರದಲ್ಲಿ ಬೋಳಾರ ಶೇಖ್ ಉಮ್ಮರ್ ಸಾಹೇಬ್ ಕಾಂಪೌಂಡ್ ಇದೆ. ಅದನ್ನೇ ದೇಗುಲದ ಹೆಸರಿರುವ ಜಾಗಕ್ಕೆ ಮರುನಾಮಕರಣ ಮಾಡಲಾಗಿದೆ. ಇದೀಗ ಕಿಡಿಗೇಡಿಗಳ ವಿರುದ್ಧ ದೇಗುಲದ ಆಡಳಿತ ಮಂಡಳಿ ಜಿಲ್ಲಾಧಿಕಾರಿ, ಪೊಲೀಸ್ ‌ಕಮಿಷನರ್ ಹಾಗೂ ಸೈಬರ್ ಕ್ರೈಮ್‌ಗೆ ದೂರು ನೀಡಿದೆ.

ದೇಗುಲದ ಆಡಳಿತ ಮಂಡಳಿ ದೂರು ನೀಡಿದ ಬೆನ್ನಲ್ಲೇ ಗೂಗಲ್ ಮ್ಯಾಪ್ ಲೊಕೇಷನ್ ಮತ್ತೆ ಸರಿಯಾಗಿದೆ. ಸಾಮರಸ್ಯ ಹಾಳು ಮಾಡಿದವರ ವಿರುದ್ಧ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜತೆಗೆ, ಧಾರ್ಮಿಕ ಭಾವನೆಗೆ ಘಾಸಿ ಉಂಟುವಾಡಿದವರ ಬಂಧನಕ್ಕೆ ಆಗ್ರಹಿಸಿದ್ದಾರೆ.

ಮಂಗಳಾದೇವಿ ದೇವಸ್ಥಾನವು ಮಂಗಳೂರು ನಗರದ ಬೋಳಾರದಲ್ಲಿದೆ. ಇದು ನಗರ ಕೇಂದ್ರದ ನೈಋತ್ಯಕ್ಕೆ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿದೆ. ಈ ದೇವಾಲಯವು ಹಿಂದೂ ಶಕ್ತಿ ದೇವತೆಯಾದ ಮಂಗಳಾದೇವಿಯದ್ದಾಗಿದೆ. ನಗರಕ್ಕೆ ಮಂಗಳೂರೆಂಬ ಹೆಸರು ಬರಲು ಕೂಡ ಈ ದೇಗುಲವೇ ಕಾರಣ ಎನ್ನಲಾಗಿದೆ.

ಇದನ್ನೂ ಓದಿ: ಅಕ್ರಮ ಸಾರಾಯಿ ಘಟಕಕ್ಕೆ ಅಬಕಾರಿ ಪೊಲೀಸರ ದಾಳಿ, ಮನೆಯಲ್ಲೇ ಸ್ಪಿರಿಟ್ ತಯಾರಿಸುತ್ತಿದ್ದವರು ವಶ

ಈ ದೇವಾಲಯವು ಐತಿಹಾಸಿಕ ಮಹತ್ವ ಹೊಂದಿದೆ ಮತ್ತು 9 ನೇ ಶತಮಾನದಲ್ಲಿ ಅತ್ಯಂತ ಪ್ರಸಿದ್ಧ ರಾಜ ಕುಂದವರ್ಮನಿಂದ ನಿರ್ಮಿಸಲಾಗಿದೆ ಎಂದು ಭಾವಿಸಲಾಗಿದೆ. ಮತ್ತೊಂದು ಕಥೆಯ ಪ್ರಕಾರ, ಈ ದೇವಾಲಯವನ್ನು ಹಿಂದೂ ದೇವರು ವಿಷ್ಣುವಿನ ಹತ್ತು ಅವತಾರಗಳಲ್ಲಿ ಒಂದಾದ ಪರಶುರಾಮ ನಿರ್ಮಿಸಿದ ಮತ್ತು ನಂತರ ಕುಂದವರ್ಮನಿಂದ ವಿಸ್ತರಿಸಲಾಯಿತು ಎಂದು ನಂಬಿಕೊಂಡು ಬರಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ