Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌ ಸಂಬಂಧ ಪೊಲೀಸರು ಆರೋಪಿಗಳನ್ನು ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೆ ಮಾಹಿತಿ ಹೊರಬರುತ್ತಿದೆ. ಅದರಂತೆ, ಆರೋಪಿ ಕುಕೃತ್ಯ ಎಸಗಲು ಮೊಬೈಲ್ ತರಬೇತಿ ಪಡೆದ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
Follow us
TV9 Web
| Updated By: Rakesh Nayak Manchi

Updated on:Nov 22, 2022 | 5:39 PM

ಮಂಗಳೂರು: ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಒಂದೊಂದೇ ಸ್ಫೋಟಕ ಮಾಹಿತಿಯನ್ನು ಆರೋಪಿಗಳ ಬಾಯಿಯಿಂದ ಹೊರಹಾಕಿಸುತ್ತಿದ್ದಾರೆ. ಈ ವೇಳೆ ಅನೇಕ ಮಾಹಿತಿ ಬಹಿರಂಗ ಪಡಿಸಿದ ಪೈಕಿ ಮೊಬೈಲ್ ಟ್ರೈನಿಂಗ್ ಪಡೆದಿರುವುದು ಕೂಡ ಒಂದು. ಬಾಂಬ್ ಸ್ಫೋಟಗೊಳಿಸಲು ಮೊಬೈಲ್ ಬಗ್ಗೆ ತರಬೇತಿ ಪಡೆದಿರುವುದು ಯಾಕೆ ಎಂದು ತಿಳಿದರೆ ನೀವು ನಿಜಕ್ಕೂ ಆಘಾತಗೊಳ್ಳುತ್ತೀರಿ. ಹಾಗಿದ್ದರೆ ಆರೋಪಿ ಮೊಬೈಲ್ ಟ್ರೈನಿಂಗ್ ಪಡೆದಿದ್ದು ಯಾಕೆ? ಇಲ್ಲಿದೆ ನೋಡಿ ಮೊಬೈಲ್ ಲರ್ನಿಂಗ್ ಕಹಾನಿಯ ಟಿವಿ9 ಎಕ್ಸ್ಲೂಸಿವ್ ಸುದ್ದಿ.

ನಿದ್ದೆ ಬರುತ್ತದೆ ಎಂದು ಸಮಯಕ್ಕೆ ಸರಿಯಾಗಿ ಎಳಲು ಸಹಾಯ ಮಾಡಲೆಂದು ಮೊಬೈಲ್​ನಲ್ಲಿ ಅಲರಾಮ್ ಸಿಸ್ಟಮ್ ಇದೆ. ನಿದ್ದೆಯಿಂದ ಎಬ್ಬಿಸಲು ನೆರವಾಗುವ ಈ ಅಲರಾಮ್ ವ್ಯವಸ್ಥೆಯನ್ನು ಆರೋಪಿಗಳು ಕುಕೃತ್ಯ ಎಸಗಲು ಬಳಕೆ ಮಾಡಿದ್ದಾರೆ. ಅದರಂತೆ ಮೊಬೈಲ್​ನಲ್ಲಿ ಅಲರಾಮ್ ಅಪ್ಲಿಕೇಶನ್ ಹೇಗೆ ವರ್ಕ್ ಆಗುತ್ತದೆ ಎಂಬ ಬಗ್ಗೆ ಕಲಿತಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಜೊತೆ ಮತ್ತೊಬ್ಬ ಯುವಕನಿದ್ದನೇ?

ಬಾಂಬ್ ನಿಗದಿತ ಸಮಯಕ್ಕೆ ಸ್ಫೋಟಗೊಳ್ಳಲು ಅದರಲ್ಲಿ ಸಮಯ ನಿಗದಿ ಮಾಡಲಾಗುತ್ತದೆ. ಈ ಸಮಯವನ್ನು ಫೀಕ್ಸ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲೆಂದೇ ಮೊಬೈಲ್​ನಲ್ಲಿ ಅಲರಾಮ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದನ್ನು ಆರೋಪಿಗಳು ಕಲಿತುಕೊಂಡಿದ್ದಾರೆ. ಮೊಬೈಲ್​ನಿಂದ ರಿಮೋಟ್ ಕಂಟ್ರೋಲ್ ಹೇಗೆ ಮಾಡಬಹುದು ಎಂಬುದನ್ನು ತಿಳಿಯುವ ಯತ್ನ ನಡೆದಿದೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 22 November 22

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ