AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌ ಸಂಬಂಧ ಪೊಲೀಸರು ಆರೋಪಿಗಳನ್ನು ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೆ ಮಾಹಿತಿ ಹೊರಬರುತ್ತಿದೆ. ಅದರಂತೆ, ಆರೋಪಿ ಕುಕೃತ್ಯ ಎಸಗಲು ಮೊಬೈಲ್ ತರಬೇತಿ ಪಡೆದ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
TV9 Web
| Updated By: Rakesh Nayak Manchi|

Updated on:Nov 22, 2022 | 5:39 PM

Share

ಮಂಗಳೂರು: ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಒಂದೊಂದೇ ಸ್ಫೋಟಕ ಮಾಹಿತಿಯನ್ನು ಆರೋಪಿಗಳ ಬಾಯಿಯಿಂದ ಹೊರಹಾಕಿಸುತ್ತಿದ್ದಾರೆ. ಈ ವೇಳೆ ಅನೇಕ ಮಾಹಿತಿ ಬಹಿರಂಗ ಪಡಿಸಿದ ಪೈಕಿ ಮೊಬೈಲ್ ಟ್ರೈನಿಂಗ್ ಪಡೆದಿರುವುದು ಕೂಡ ಒಂದು. ಬಾಂಬ್ ಸ್ಫೋಟಗೊಳಿಸಲು ಮೊಬೈಲ್ ಬಗ್ಗೆ ತರಬೇತಿ ಪಡೆದಿರುವುದು ಯಾಕೆ ಎಂದು ತಿಳಿದರೆ ನೀವು ನಿಜಕ್ಕೂ ಆಘಾತಗೊಳ್ಳುತ್ತೀರಿ. ಹಾಗಿದ್ದರೆ ಆರೋಪಿ ಮೊಬೈಲ್ ಟ್ರೈನಿಂಗ್ ಪಡೆದಿದ್ದು ಯಾಕೆ? ಇಲ್ಲಿದೆ ನೋಡಿ ಮೊಬೈಲ್ ಲರ್ನಿಂಗ್ ಕಹಾನಿಯ ಟಿವಿ9 ಎಕ್ಸ್ಲೂಸಿವ್ ಸುದ್ದಿ.

ನಿದ್ದೆ ಬರುತ್ತದೆ ಎಂದು ಸಮಯಕ್ಕೆ ಸರಿಯಾಗಿ ಎಳಲು ಸಹಾಯ ಮಾಡಲೆಂದು ಮೊಬೈಲ್​ನಲ್ಲಿ ಅಲರಾಮ್ ಸಿಸ್ಟಮ್ ಇದೆ. ನಿದ್ದೆಯಿಂದ ಎಬ್ಬಿಸಲು ನೆರವಾಗುವ ಈ ಅಲರಾಮ್ ವ್ಯವಸ್ಥೆಯನ್ನು ಆರೋಪಿಗಳು ಕುಕೃತ್ಯ ಎಸಗಲು ಬಳಕೆ ಮಾಡಿದ್ದಾರೆ. ಅದರಂತೆ ಮೊಬೈಲ್​ನಲ್ಲಿ ಅಲರಾಮ್ ಅಪ್ಲಿಕೇಶನ್ ಹೇಗೆ ವರ್ಕ್ ಆಗುತ್ತದೆ ಎಂಬ ಬಗ್ಗೆ ಕಲಿತಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಜೊತೆ ಮತ್ತೊಬ್ಬ ಯುವಕನಿದ್ದನೇ?

ಬಾಂಬ್ ನಿಗದಿತ ಸಮಯಕ್ಕೆ ಸ್ಫೋಟಗೊಳ್ಳಲು ಅದರಲ್ಲಿ ಸಮಯ ನಿಗದಿ ಮಾಡಲಾಗುತ್ತದೆ. ಈ ಸಮಯವನ್ನು ಫೀಕ್ಸ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲೆಂದೇ ಮೊಬೈಲ್​ನಲ್ಲಿ ಅಲರಾಮ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದನ್ನು ಆರೋಪಿಗಳು ಕಲಿತುಕೊಂಡಿದ್ದಾರೆ. ಮೊಬೈಲ್​ನಿಂದ ರಿಮೋಟ್ ಕಂಟ್ರೋಲ್ ಹೇಗೆ ಮಾಡಬಹುದು ಎಂಬುದನ್ನು ತಿಳಿಯುವ ಯತ್ನ ನಡೆದಿದೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 22 November 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ