AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌ ಸಂಬಂಧ ಪೊಲೀಸರು ಆರೋಪಿಗಳನ್ನು ತೀವ್ರ ತನಿಖೆ ನಡೆಸುತ್ತಿದ್ದು, ಒಂದೊಂದೆ ಮಾಹಿತಿ ಹೊರಬರುತ್ತಿದೆ. ಅದರಂತೆ, ಆರೋಪಿ ಕುಕೃತ್ಯ ಎಸಗಲು ಮೊಬೈಲ್ ತರಬೇತಿ ಪಡೆದ ಬಗ್ಗೆ ಮಾಹಿತಿ ತಿಳಿದುಬಂದಿದೆ.

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
ಮಂಗಳೂರು ಬಾಂಬ್ ಸ್ಪೋಟ ಪ್ರಕರಣ‌; ಬಾಂಬ್ ತಯಾರಿಸುವ ವೇಳೆ ಮೊಬೈಲ್ ಟ್ರೈನಿಂಗ್ ಪಡೆದ ಆರೋಪಿ
TV9 Web
| Edited By: |

Updated on:Nov 22, 2022 | 5:39 PM

Share

ಮಂಗಳೂರು: ಆಟೊದಲ್ಲಿ ಕುಕ್ಕರ್ ಬಾಂಬ್ ಸ್ಪೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ತನಿಖೆ ನಡೆಸುತ್ತಿರುವ ಪೊಲೀಸರು ಒಂದೊಂದೇ ಸ್ಫೋಟಕ ಮಾಹಿತಿಯನ್ನು ಆರೋಪಿಗಳ ಬಾಯಿಯಿಂದ ಹೊರಹಾಕಿಸುತ್ತಿದ್ದಾರೆ. ಈ ವೇಳೆ ಅನೇಕ ಮಾಹಿತಿ ಬಹಿರಂಗ ಪಡಿಸಿದ ಪೈಕಿ ಮೊಬೈಲ್ ಟ್ರೈನಿಂಗ್ ಪಡೆದಿರುವುದು ಕೂಡ ಒಂದು. ಬಾಂಬ್ ಸ್ಫೋಟಗೊಳಿಸಲು ಮೊಬೈಲ್ ಬಗ್ಗೆ ತರಬೇತಿ ಪಡೆದಿರುವುದು ಯಾಕೆ ಎಂದು ತಿಳಿದರೆ ನೀವು ನಿಜಕ್ಕೂ ಆಘಾತಗೊಳ್ಳುತ್ತೀರಿ. ಹಾಗಿದ್ದರೆ ಆರೋಪಿ ಮೊಬೈಲ್ ಟ್ರೈನಿಂಗ್ ಪಡೆದಿದ್ದು ಯಾಕೆ? ಇಲ್ಲಿದೆ ನೋಡಿ ಮೊಬೈಲ್ ಲರ್ನಿಂಗ್ ಕಹಾನಿಯ ಟಿವಿ9 ಎಕ್ಸ್ಲೂಸಿವ್ ಸುದ್ದಿ.

ನಿದ್ದೆ ಬರುತ್ತದೆ ಎಂದು ಸಮಯಕ್ಕೆ ಸರಿಯಾಗಿ ಎಳಲು ಸಹಾಯ ಮಾಡಲೆಂದು ಮೊಬೈಲ್​ನಲ್ಲಿ ಅಲರಾಮ್ ಸಿಸ್ಟಮ್ ಇದೆ. ನಿದ್ದೆಯಿಂದ ಎಬ್ಬಿಸಲು ನೆರವಾಗುವ ಈ ಅಲರಾಮ್ ವ್ಯವಸ್ಥೆಯನ್ನು ಆರೋಪಿಗಳು ಕುಕೃತ್ಯ ಎಸಗಲು ಬಳಕೆ ಮಾಡಿದ್ದಾರೆ. ಅದರಂತೆ ಮೊಬೈಲ್​ನಲ್ಲಿ ಅಲರಾಮ್ ಅಪ್ಲಿಕೇಶನ್ ಹೇಗೆ ವರ್ಕ್ ಆಗುತ್ತದೆ ಎಂಬ ಬಗ್ಗೆ ಕಲಿತಿದ್ದಾರೆ.

ಇದನ್ನೂ ಓದಿ: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರಿಖ್ ಜೊತೆ ಮತ್ತೊಬ್ಬ ಯುವಕನಿದ್ದನೇ?

ಬಾಂಬ್ ನಿಗದಿತ ಸಮಯಕ್ಕೆ ಸ್ಫೋಟಗೊಳ್ಳಲು ಅದರಲ್ಲಿ ಸಮಯ ನಿಗದಿ ಮಾಡಲಾಗುತ್ತದೆ. ಈ ಸಮಯವನ್ನು ಫೀಕ್ಸ್ ಮಾಡುವುದು ಹೇಗೆ ಎಂಬುದನ್ನು ತಿಳಿಯಲೆಂದೇ ಮೊಬೈಲ್​ನಲ್ಲಿ ಅಲರಾಮ್ ಯಾವ ರೀತಿ ಕೆಲಸ ಮಾಡುತ್ತದೆ ಎಂಬುದನ್ನು ಆರೋಪಿಗಳು ಕಲಿತುಕೊಂಡಿದ್ದಾರೆ. ಮೊಬೈಲ್​ನಿಂದ ರಿಮೋಟ್ ಕಂಟ್ರೋಲ್ ಹೇಗೆ ಮಾಡಬಹುದು ಎಂಬುದನ್ನು ತಿಳಿಯುವ ಯತ್ನ ನಡೆದಿದೆ ಎಂದು ಟಿವಿ9 ಗೆ ಪೊಲೀಸ್ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಅಪರಾಧ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:40 pm, Tue, 22 November 22

ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ