AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ

ಹೊರರಾಜ್ಯದ ಯುವಕನ ಮೇಲೆ ಮನೆಮಂದಿ ಎಲ್ಲರೂ ಸೇರಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ(ಮಾ.28) ಮಧ್ಯಾಹ್ನ ಮಂಗಳೂರು(Mangaluru) ಹೊರವಲಯದ ಅರ್ಕುಳದಲ್ಲಿ ನಡೆದಿದೆ. ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹೊಡೆದಿದ್ದು, ಜೊತೆ ಇರುವ ಮತ್ತೋರ್ವನ ಮೇಲೂ ಹಲ್ಲೆ ಮಾಡಲಾಗಿದೆ.

ಮಂಗಳೂರು: ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ
ಮಂಗಳೂರಿನಲ್ಲಿ ಹೊರರಾಜ್ಯದ ಯುವಕನ ಮೇಲೆ ಅಮಾನುಷ ಹಲ್ಲೆ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Mar 29, 2024 | 7:27 PM

Share

ದಕ್ಷಿಣ ಕನ್ನಡ, ಮಾ.29: ಹೊರರಾಜ್ಯದ ಯುವಕನ ಮೇಲೆ ಮನೆಮಂದಿ ಎಲ್ಲರೂ ಸೇರಿ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಿನ್ನೆ(ಮಾ.28) ಮಧ್ಯಾಹ್ನ ಮಂಗಳೂರು(Mangaluru) ಹೊರವಲಯದ ಅರ್ಕುಳದಲ್ಲಿ ನಡೆದಿದೆ. ಬೆಲ್ಟ್, ಚೇರ್ ಸೇರಿದಂತೆ ಸಿಕ್ಕ ಸಿಕ್ಕ ವಸ್ತಗಳಿಂದ ಹೊಡೆದಿದ್ದು, ಜೊತೆ ಇರುವ ಮತ್ತೋರ್ವನ ಮೇಲೂ ಹಲ್ಲೆ ಮಾಡಲಾಗಿದೆ. ಹಲ್ಲೆ ದೃಶ್ಯ ಅದೇ ಮನೆಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಈ ಘಟನೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಈ ಬಗ್ಗೆ ಇನ್ನೂ ಪೊಲೀಸ್ ದೂರು ದಾಖಲಾಗಿಲ್ಲ.

ನಿಯಂತ್ರಣ ತಪ್ಪಿ ಕಾರ್​ ಪಲ್ಟಿ; ಚಾಲಕ ಸಾವು, ಇಬ್ಬರಿಗೆ ಗಂಭೀರ ಗಾಯ

ದಕ್ಷಿಣ ಕನ್ನಡ: ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಬಳಿಯ ಶಕ್ತಿನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾಂಪೌಂಡ್​​ಗೆ ಡಿಕ್ಕಿಯಾಗಿ ಕಾರು  ಪಲ್ಟಿಯಾಗಿದೆ. ಈ ವೇಳೆ ಚಾಲಕ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾನೆ. ಬೆಳ್ತಂಗಡಿ ಲಾಯಿಲ ನಿವಾಸಿ ಪ್ರೈಸ್​ ಮ್ಯಾಥ್ಯೂ(32) ಮೃತ ದುರ್ದೈವಿ. ಬೆಳ್ತಂಗಡಿ ಕಡೆಯಿಂದ ಮೂಡುಬಿದಿರೆ ಕಡೆಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ:ನಗರ್ತ ​ಪೇಟೆ ಹಲ್ಲೆ ಪ್ರಕರಣದ ಬೆನ್ನಿಗೆ ಆನೇಕಲ್​​ನಲ್ಲೂ ಅನ್ಯಕೋಮಿನ ಯುವಕರಿಂದ ಅಂಗಡಿ ಮಾಲೀಕನ ಮೇಲೆ ಹಲ್ಲೆ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸಿರಾಫನಹಳ್ಳಿ ಬಳಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲು

ಚಿತ್ರದುರ್ಗ: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾದ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಸಿರಾಫನಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕರು ಸಾವನ್ನಪ್ಪಿದ್ದಾರೆ. ಸಿರಾಫನಹಳ್ಳಿಯ ಆದಿತ್ಯ(15) ಹಾಗೂ ಅಪ್ಪರಸನಹಳ್ಳಿಯ ಯರಗುಂಟೇಶ್ವರ(14) ಮೃತ ರ್ದುದೈವಿ. ಈ ಕುರಿತು ಚಿತ್ರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Fri, 29 March 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್