AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ಕಂಡಕ್ಟರ್

ಮಂಗಳೂರಿನಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ-ಮಗುವನ್ನು ಸಿಟಿ ಬಸ್ ಚಾಲಕ ದಯಾನಂದ್ ಮತ್ತು ನಿರ್ವಾಹಕ ಸಂದೀಪ್ ರಕ್ಷಿಸಿದ್ದಾರೆ. ತಮ್ಮ ಬಸ್ಸಿನಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ. ಈ ಮಾನವೀಯ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಕರಾವಳಿಯ ಜನರ ಮಾನವೀಯತೆಗೆ ಇದು ಮತ್ತೊಂದು ಸಾಕ್ಷಿ.

ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಬಿದ್ದು ಪ್ರಜ್ಞೆ ತಪ್ಪಿದ್ದ ತಾಯಿ-ಮಗುವನ್ನು ತಮ್ಮ ಬಸ್ಸಿನಲ್ಲಿ ಆಸ್ಪತ್ರೆಗೆ ಸಾಗಿಸಿ ಪ್ರಾಣ ಉಳಿಸಿದ ಚಾಲಕ, ಕಂಡಕ್ಟರ್
ತಾಯಿ ಮಗು ರಕ್ಷಣೆ
ಅಕ್ಷಯ್​ ಪಲ್ಲಮಜಲು​​
|

Updated on: May 30, 2026 | 11:06 AM

Share

ಮಂಗಳೂರು, ಮೇ,30 : ಕರಾವಳಿಯ ಜನರ ರಕ್ತದಲ್ಲೇ ಮಾನವೀಯತೆ ಇದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಇದು. ಮಂಗಳೂರು ನಗರದಲ್ಲಿ ಚಲಿಸುತ್ತಿದ್ದ ಬಸ್ಸಿನಿಂದ ಆಕಸ್ಮಿಕವಾಗಿ ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿ ಮತ್ತು ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಚಾಲಕ ಮತ್ತು ನಿರ್ವಾಹಕ, ಸಾರ್ವಜನಿಕ ಪ್ರಯಾಣಿಕರನ್ನು ಕೆಳಗಿಳಿಸಿ ಅದೇ ಬಸ್ಸಿನಲ್ಲಿ ಗಾಯಾಳುಗಳನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ಯುವ ಮೂಲಕ ರಿಯಲ್ ಹೀರೊಗಳಾಗಿದ್ದಾರೆ. ಇದೀಗ ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಭಾರೀ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ.

ಶುಕ್ರವಾರ ಮಂಗಳೂರಿನ ಕಾವೂರು ಕಡೆಯಿಂದ ಕುಂಜತ್ತಬೈಲ್ ಕಡೆಗೆ ಸಾಗುತ್ತಿದ್ದ ರೂಟ್ ನಂಬರ್ 13B ಯ ‘ಮಾಸ್ಟರ್’ (Master) ಹೆಸರಿನ ಸಿಟಿ ಬಸ್ ಮರಕಡ ಜಂಕ್ಷನ್ ತಲುಪುತ್ತಿತ್ತು. ಇದೇ ವೇಳೆ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್ಸಿನಿಂದ ತಾಯಿ ಮತ್ತು ಆಕೆಯ ಪುಟ್ಟ ಮಗು ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಅವರಿಬ್ಬರೂ ರಸ್ತೆಯಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದನ್ನು ನೋಡಿ ಸ್ಥಳೀಯರು ಹಾಗೂ ದಾರಿಹೋಕರು ತೀವ್ರ ಆತಂಕಕ್ಕೆ ಒಳಗಾಗಿದ್ದರು.

ಈ ಭೀಕರ ದೃಶ್ಯವನ್ನು ಗಮನಿಸಿದ ಮಾಸ್ಟರ್ ಬಸ್ ಚಾಲಕ ದಯಾನಂದ್ ಮತ್ತು ನಿರ್ವಾಹಕ (ಕಂಡಕ್ಟರ್) ಸಂದೀಪ್ ಅವರು ಸಮಯ ಪ್ರಜ್ಞೆ ಮೆರೆದಿದ್ದಾರೆ. ತಕ್ಷಣವೇ ತಮ್ಮ ಬಸ್ಸನ್ನು ರಸ್ತೆ ಬದಿಗೆ ನಿಲ್ಲಿಸಿ ಗಾಯಾಳುಗಳ ಬಳಿಗೆ ಧಾವಿಸಿದ್ದಾರೆ. ತಾಯಿ-ಮಗುವಿನ ಸ್ಥಿತಿ ಗಂಭೀರವಾಗಿರುವುದನ್ನು ಅರಿತು ಆಂಬ್ಯುಲೆನ್ಸ್‌ಗೆ ಕಾಯುತ್ತಾ ಸಮಯ ವ್ಯರ್ಥ ಮಾಡದ ಸಿಬ್ಬಂದಿ, ತಮ್ಮ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಪರಿಸ್ಥಿತಿಯನ್ನು ವಿವರಿಸಿ ಕೆಳಗಿಳಿಯಲು ವಿನಂತಿಸಿದ್ದಾರೆ. ತಕ್ಷಣವೇ ಅವರಿಬ್ಬರನ್ನೂ ಅದೇ ಸಿಟಿ ಬಸ್ಸಿಗೆ ಹತ್ತಿಸಿಕೊಂಡು ನೇರವಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಿ ತುರ್ತು ಚಿಕಿತ್ಸೆ ಕೊಡಿಸಿದ್ದಾರೆ.

ಇದನ್ನೂ ಓದಿ: ‘ಸಿಎಂ ಸ್ಥಾನ ಬಿಟ್ಟು ಹೋಗುವ ಮುನ್ನ ಆ 5,000 ಕೋಟಿ ರೂ. ಎಲ್ಲಿದೆ ಹೇಳಿ!’: ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದ ಸುರೇಶ್ ಕುಮಾರ್

ಸಕಾಲದಲ್ಲಿ ಸ್ಪಂದಿಸಿ ಇಬ್ಬರು ಅಮೂಲ್ಯ ಜೀವಗಳನ್ನು ಉಳಿಸಿದ ಚಾಲಕ ದಯಾನಂದ್ ಮತ್ತು ಕಂಡಕ್ಟರ್ ಸಂದೀಪ್ ಅವರ ಈ ನಿಸ್ವಾರ್ಥ ಮಾನವೀಯ ಕಾರ್ಯಕ್ಕೆ ಮಂಗಳೂರಿನ ಸಾರ್ವಜನಿಕ ವಲಯದಲ್ಲಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಶ್ಲಾಘನೆ ಮತ್ತು ಪ್ರಶಂಸೆ ವ್ಯಕ್ತವಾಗುತ್ತಿದೆ.

ರಾಜ್ಯ ಸುದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಪೀಣ್ಯದಲ್ಲಿ ಪುಡಿ ರೌಡಿಗಳ ಪುಂಡಾಟ, ಕಲ್ಲು ತೂರಿ ಕಾರು ಧ್ವಂಸ!
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಚಾಮುಂಡೇಶ್ವರಿ ಅಮ್ಮನವರ ವರ್ಧಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಕೇರಳದ ಪ್ರವಾಹದಲ್ಲಿ ಮಣಪ್ಪುರಂ ಶಿವ ದೇವಾಲಯ ಮುಳುಗಡೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಸಂಪುಟ ವಿಸ್ತರಣೆ ಗೊಂದಲದ ನಡುವೆ ಡಿಕೆ ಶಿವಕುಮಾರ್ ಸ್ಪಷ್ಟನೆ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
ಖರ್ಗೆ, ಸಿದ್ದರಾಮಯ್ಯ, ಡಿಕೆಶಿ ಕೋಲಾರಕ್ಕೆ ಮೋಸ ಮಾಡಿದ್ದಾರೆ: ನಾರಾಯಣಸ್ವಾಮಿ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
‘ನಾನು ಬೇಗ ಮದುವೆ ಆದೆ; ಅನೇಕ ಹೀರೋಗಳ ಜತೆ ನಟಿಸೋಕೆ ಆಗಲಿಲ್ಲ’: ಪ್ರಿಯಾಂಕಾ
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಇಂಗ್ಲಿಷ್‌ನಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದ ಸಚಿವ ಜಮೀರ್ ಅಹ್ಮದ್ ಖಾನ್
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ಪಂಚಪೀಠಾಧೀಶ್ವರ ಹೆಸರಲ್ಲಿ ಕಾಶಪ್ಪನವರ್ ಪ್ರಮಾಣವಚನ
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ನೂತನ ಸಚಿವರ ಪದಗ್ರಹಣ ಕಾರ್ಯಕ್ರಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಗೈರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು
ರೆಬೆಲ್ಸ್​​ ಸಭೆಯಲ್ಲಿ ಅಪ್ಪಾಜಿ ನಾಡಗೌಡ ಕಣ್ಣೀರು