AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ರೀತಿಯಲ್ಲೇ ಮಂಗಳೂರಿನ ಉದ್ಯಮಿ ಪುತ್ರ ಸಾವು!

ನದಿ ದಡದ ಮೇಲೆ ಕಾರು ನಿಲ್ಲಿಸಿ ನೀರಿಗೆ ಹಾರಿ ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೇ ರೀತಿಯಲ್ಲೇ ಮಂಗಳೂರಿನ ಉದ್ಯಮಿಯೊಬ್ಬರ ಪುತ್ರ ಸಹ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ನಡೆದಿದೆ.

ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಆತ್ಮಹತ್ಯೆ ರೀತಿಯಲ್ಲೇ ಮಂಗಳೂರಿನ ಉದ್ಯಮಿ ಪುತ್ರ ಸಾವು!
ಅಭಿಷೇಕ್ ಆಳ್ವ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Updated By: ಗಂಗಾಧರ​ ಬ. ಸಾಬೋಜಿ|

Updated on:Nov 07, 2025 | 5:05 PM

Share

ಮಂಗಳೂರು, ನವೆಂಬರ್​ 07: ನಗರದ ಉದ್ಯಮಿಯ ಪುತ್ರನ (businessman Son) ಮೃತದೇಹ ಶಾಂಭವಿ ನದಿ ತೀರದಲ್ಲಿ ಪತ್ತೆ ಆಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಬಪ್ಪನಾಡು ಬಳಿ ನಡೆದಿದೆ. ಉದ್ಯಮಿ ನವೀನ್ ಚಂದ್ರ ಆಳ್ವಾ ಪುತ್ರ ಅಭಿಷೇಕ್ ಆಳ್ವ (29) ಮೃತ ಯುವಕ. ಮುಲ್ಕಿ ಬಳಿ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ (death) ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದದ್ದೇನು?

ಅಭಿಷೇಕ್, ನವಂಬರ್ 5ರ ರಾತ್ರಿ ಮೂಲ್ಕಿ ಬಪ್ಪನಾಡು ಬ್ರಿಡ್ಜ್ ಬಳಿ ತಮ್ಮ ಕಾರು ನಿಲ್ಲಿಸಿ ನಾಪತ್ತೆಯಾಗಿದ್ದರು. ಇಂದು ಬೆಳಗ್ಗೆ ಬಪ್ಪನಾಡು ಸಮೀಪ ನದಿ ತೀರದಲ್ಲಿ ಮೃತದೇಹ ಪತ್ತೆ ಆಗಿದೆ. ಅಭಿಷೇಕ್ ತಮ್ಮ ತಂದೆಯ ಉದ್ಯಮವನ್ನು ಮುನ್ನಡೆಸುತ್ತಿದ್ದರು ಎಂಬ ಮಾಹಿತಿಯಿದೆ.

ಇದನ್ನೂ ಓದಿ: ಹೆತ್ತ ಕರುಳನ್ನೇ ಕತ್ತರಿಸಿದ ಮಗ: ಹತ್ಯೆ ಮಾಡಿ ನಾಟಕವಾಡಿದ್ದ ನಿವೃತ್ತ ಸರ್ಕಾರಿ ನೌಕರ ಅರೆಸ್ಟ್

ತಿರುವೈಲು ಗುತ್ತು ಕರಾವಳಿ ಕಂಬಳದಲ್ಲಿ ಗುರುತಿಸಿಕೊಂಡಿದ್ದ ಪ್ರಖ್ಯಾತ ಮನೆತನ. ಅಭಿಷೇಕ್ ನಾಪತ್ತೆ ಕುರಿತು ಪಡುಬಿದ್ರಿ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.

9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

9ನೇ ತರಗತಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದಲ್ಲಿ ನಡೆದಿದೆ. ಲೋಕೇಶ್ ಎಂಬುವರ ಪುತ್ರ ಗಗನ್(14) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ.

ಇದನ್ನೂ ಓದಿ: ವಿಚ್ಛೇದನ ಕೇಳಿದ್ದಕ್ಕೆ ಪತ್ನಿಯ ಖಾಸಗಿ ಫೋಟೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ಪತಿ! ಅಮೇಲೇನಾಯ್ತು?

ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದ ಬಾಲಕ ಎಂದಿನಂತೆ ಶಾಲೆಗೆ ತೆರಳಿ ವಾಪಸ್ ಆಗಿದ್ದ. ನಿನ್ನೆ ಸಂಜೆ ಶಾಲೆಯಿಂದ ವಾಪಸಾಗಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಆಟೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಗ್ರಾಮದ ಬಳಿ ಆಟೋ ಪಲ್ಟಿಯಾಗಿ ಕಾಲೇಜು ವಿದ್ಯಾರ್ಥಿನಿ ಪ್ರೇಮಾ(18) ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಐವರಿಗೆ ಗಂಭೀರ ಗಾಯವಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:00 pm, Fri, 7 November 25

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ