AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​

ಮಂಗಳೂರು ಸಿಸಿಬಿ ಭರ್ಜರಿ ಕಾರ್ಯಾಚರಣೆ ನಡೆಸಿ, 4 ಕೋಟಿ ರೂ. ಮೌಲ್ಯದ ಎಂಡಿಎಂಎ ಡ್ರಗ್ಸ್ ಸಮೇತ ಉಗಾಂಡ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸಿದೆ. ಪುರುಷರ ಶರ್ಟ್‌ಗಳಲ್ಲಿ ಅಡಗಿಸಿ ಡ್ರಗ್ಸ್ ಸಾಗಿಸುತ್ತಿದ್ದ ಆರೋಪಿ ಮಂಗಳೂರಿನ ಆರು ಪೆಡ್ಲರ್‌ಗಳಿಗೆ ಪೂರೈಸುತ್ತಿದ್ದಳು. ಡ್ರಗ್ಸ್​​ ಕೇಸ್​​ ಸಂಬಂಧ ಮಂಗಳೂರು ಪೊಲೀಸರು ಪೆಡ್ಲರ್​​ಗಳನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಈಕೆಯ ಕುರಿತು ಮಾಹಿತಿ ಸಿಕ್ಕಿತ್ತು. ಅದರ ಆಧಾರದಲ್ಲಿ ಸಿಸಿಬಿ ದಾಳಿ ನಡೆಸಿತ್ತು.

ಖತರ್ನಾಕ್​​ ಡ್ರಗ್​​ ಜಾಲ ಭೇದಿಸಿದ ಮಂಗಳೂರು ಸಿಸಿಬಿ: ಮಹಿಳೆ ಅರೆಸ್ಟ್​, 4 ಕೋಟಿ ಮೌಲ್ಯದ MDMA ಸೀಜ್​
ಸಾಂದರ್ಭಿಕ ಚಿತ್ರ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 13, 2026 | 5:36 PM

Share

ಮಂಗಳೂರು, ಜನವರಿ 13: ಆರು​ ಪೆಡ್ಲರ್​ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್​​ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್​​ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್​​ ಇಂಬ, ಬಂಟ್ವಾಳದ ನಿಸಾರ್ ಅಹಮ್ಮದ್, ಕಾಪು ನಿವಾಸಿ ಮೊಹಮ್ಮದ್ ಇಕ್ಬಾಲ್ ಮತ್ತು ಪಡುಬಿದ್ರೆ ನಿವಾಸಿ ಶೆಹರಾಜ್ ಶಾರೂಕ್ ಎಂಬ ಡ್ರಗ್ ಪೆಡ್ಲರ್​​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಜಲಿಯಾಳಿಂದ ಡ್ರಗ್ಸ್ ಪಡೆದು ಮಂಗಳೂರಲ್ಲಿ ಮಾರುತ್ತಿದ್ದ ವಿಚಾರ ತನಿಖೆ ವೇಳೆ ಗೊತ್ತಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಲ್ಲಿ ಸಿಸಿಬಿ ರೇಡ್​ ನಡೆಸಿದೆ ಎನ್ನಲಾಗಿದೆ.

ಇದನ್ನೂ ಓದಿ: ಡ್ರಗ್ಸ್​​ ಫ್ಯಾಕ್ಟರಿ ರಾಜಧಾನಿ ಆಯ್ತಾ ಬೆಂಗಳೂರು?; 55.88 ಕೋಟಿ ರೂ. ಮೌಲ್ಯದ MDMA ಸೀಜ್​​

ಉಗಾಂಡದ ಜಲಿಯಾ ಯಾರಿಗೂ ಅನುಮಾನ ಬಾರದಂತೆ ಎಂಡಿಎಂ ಸಾಗಾಟಕ್ಕೆ ಮಾಸ್ಟರ್​​ ಪ್ಲ್ಯಾನ್​​ ಮಾಡಿದ್ದಳು. ಮಾಲ್‌ಗಳು ಅಥವಾ ಟೆಕ್ಸ್‌ ಟೈಲ್​​ಗಳಿಂದ ಪುರುಷರ ಹೊಸ ಶರ್ಟ್​ಗಳನ್ನು ಖರೀದಿಸಿ ಅದನ್ನು ಮೆಲ್ಲಗೆ ಬಿಡಿಸಿ ಅದರೊಳಗೆ ಅಂದಾಜು 300 ಗ್ರಾಂ ಎಂಡಿಎಂಎ ಪ್ಯಾಕ್ ಇಟ್ಟು ಸೂಟ್ ಕೇಸ್​​ನಲ್ಲಿ ತುಂಬುತ್ತಿದ್ದಳು. ಮೇಲ್ನೋಟಕ್ಕೆ ಇದು ಅಂದವಾಗಿ ಶರ್ಟ್ ಜೋಡಿಸಿಟ್ಟ ಸೂಟ್ ಕೇಸ್​​ನಂತೆ ಕಾಣುತ್ತಿತ್ತು. ಶರ್ಟ್ ಬಿಡಿಸಿ ನೋಡಿದರೆ ಆದರೊಳಗೆ ಎಂಡಿಎಂ ಪ್ಯಾಕೇಟ್​​ಗಳು ಇರುತ್ತಿದ್ದವು. ಇನ್ನು ಜಲಿಯಾ ಉಗಾಂಡದಿಂದ ಬಂದು ಭಾರತದಲ್ಲಿ ಅಕ್ರಮವಾಗಿ ವಾಸವಿದ್ದಳು ಎಂಬ ವಿಚಾರವೂ ಬಯಲಾಗಿದೆ. ಆ ಮೂಲಕ ಮಂಗಳೂರಿಗೆ ಸರಬರಾಜಾಗುತ್ತಿದ್ದ ಡ್ರಗ್ಸ್​​ ಜಾಲದ ಒಂದು ಪ್ರಮುಖ ಕೊಂಡಿ ಕಳಚಿದೆ. ಅದರೆ ಇಂತಹ ನುರಾರು ಮಂದಿ ಇರುವ ಅನುಮಾನವಿದ್ದು, ಅವರ ಪತ್ತೆಯನ್ನೂ ಶೀಘ್ರಮಾಡಿ ತಕ್ಕ ಶಾಸ್ತಿ ನೀಡಬೇಕೆಂಬ ಆಗ್ರಹ ಸಾರ್ವಜನಿಕ ವಲಯದಿಂದ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:34 pm, Tue, 13 January 26

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More