ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ

ನಿಷೇಧಿತ ಎಮ್​ಡಿಎಮ್​ಎ ಡ್ರಗ್ಸ್​​ ಮಾರುತಿದ್ದ ಕುಖ್ಯಾತ ಡ್ರಗ್​ ಪೆಡ್ಲರ್​ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮಂಗಳೂರಿನ ವಿವಿಧ ಪ್ರದೇಶಗಳಿಗೆ ಡ್ರಗ್ಸ್​​ ಸರಬರಾಜು ಮಾಡುತ್ತಿದ್ದರು.

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಕುಖ್ಯಾತ ಡ್ರಗ್ ಪೆಡ್ಲರ್​​ಗಳ ಬಂಧನ
ಬಂಧಿತ ಆರೋಪಿಗಳು
Edited By: ವಿವೇಕ ಬಿರಾದಾರ

Updated on: Aug 28, 2023 | 8:29 AM

ಮಂಗಳೂರು: ಮಂಗಳೂರು ಪೊಲೀಸರು (Mangaluru Police) ಡ್ರಗ್ಸ್ ಮಾಫಿಯಾ (Drug Mafia) ವಿರುದ್ಧ ಸಮರ ಸಾರಿದ್ದು, ಈ ದಂಧೆಯಲ್ಲಿ ಭಾಗಿಯಾಗಿದ ಆರೋಪಿಗಳ ಹೆಡೆಮುರಿ ಕಟ್ಟುತ್ತಿದ್ದಾರೆ. ಇದೀಗ ಮಂಗಳೂರು ಸಿಸಿಬಿ (CCB) ಪೊಲೀಸರು ಡ್ರಗ್​ ಮಾಫಿಯಾ ವಿರುದ್ಧ ಕಾರ್ಯಾಚರಣೆ ನಡೆಸಿದ್ದು, ನಿಷೇಧಿತ ಎಮ್​ಡಿಎಮ್​ಎ ಡ್ರಗ್​ ಪೆಡ್ಲರ್​​​ಗಳನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಿವಾಸಿ ಶಾಕೀಬ್ ಅಲಿಯಾಸ್ ಶಬ್ಬು (33), ಚೊಕ್ಕಬೆಟ್ಟು ನಿವಾಸಿ ನಿಸಾರ್ ಹುಸೈನ್ ಅಲಿಯಾಸ್ ನಿಚ್ಚು ಬಂಧಿತ ಆರೋಪಿಗಳು. ಆರೋಪಿಗಳ ಬಳಿ ಇದ್ದ 2.6 ಲಕ್ಷ ರೂ. ಮೌಲ್ಯದ ಎಮ್​ಡಿಎಮ್​ಎ ಡ್ರಗ್​ ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ಮಂಗಳೂರಿನ ವಿವಿಧ ಪ್ರದೇಶಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದರು. ಹೀಗೆ ಸುರತ್ಕಲ್​​​ನ ತಡಂಬೈಲ್ ಬೀಚ್ ಬಳಿ ಕಾರಿನಲ್ಲಿ ನಿಷೇಧಿತ ಎಮ್​ಡಿಎಮ್​ಎ ಮಾರುವಾಗ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಲ್ಲದೇ ಆರೋಪಿಗಳ ವಿರುದ್ಧ ಈ ಹಿಂದೆ ಕೊಲೆಯತ್ನ, ಹಲ್ಲೆ, ಸರಗಳ್ಳತನ, ಮನೆಗಳ್ಳತನ, ವಾಹನ ಕಳ್ಳತನದಲ್ಲಿ ಹತ್ತಾರು ಪ್ರಕರಣಗಳು ದಾಖಲಾಗಿದ್ದವು.

ಇದನ್ನೂ ಓದಿ: ಗಾಂಜಾ ಮತ್ತಲ್ಲಿ ಯುವಕನ ದಾಂಧಲೆ: ಸಿನಿಮಿಯ ರೀತಿಯಲ್ಲಿ ಲಾಕ್ ಮಾಡಿದ ಮಂಗಳೂರು ಪೊಲೀಸ್​​​​; ವಿಡಿಯೋ ವೈರಲ್​​

26 ದಿನಗಳಲ್ಲಿ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಇನ್ನು ಮಂಗಳೂರು ಪೊಲೀಸರು ಕಳೆದ 26 ದಿನಗಳಲ್ಲಿ 40 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ನಿಷೇಧಿತ ಎಮ್​ಡಿಎಮ್​ಎ ಡ್ರಗ್ ಪಾಲು ಹೆಚ್ಚಾಗಿತ್ತು. ಹಾಗೇ ಪೊಲೀಸರು ಹತ್ತು ಪ್ರಕರಣದಲ್ಲಿ ಒಟ್ಟು 22 ಜನ ಪೆಡ್ಲರ್​ಗಳನ್ನು ಬಂಧಿಸಿದ್ದರು.

ಈ ಆರೋಪಿಗಳು ಬೆಂಗಳೂರಿನಿಂದ ಎಮ್​ಡಿಎಮ್​ಎ ಡ್ರಗ್ ಖರೀದಿಸಿ ತಂದು ಕರಾವಳಿ, ಕೇರಳ ಭಾಗದಲ್ಲಿ ಮಾರಾಟ ಮಾಡುತ್ತಿದ್ದರು. ಸದ್ಯ ನಗರ ಪೊಲೀಸರು ಈ ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾ ಇನ್ನು ಹಲವರಿಗಾಗಿ ಶೋಧ ನಡೆಸುತ್ತಿದ್ದು, ಶೀಘ್ರದಲ್ಲೇ ಬಂಧಿಸಿ ಜೈಲಿಗೆ ಅಟ್ಟಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:25 am, Mon, 28 August 23

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us