AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲೇ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಶೋಧ ಕಾರ್ಯ ತೀವ್ರ

2019 ರಲ್ಲಿ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ, ಸೇತುವೆಯು ಸರಣಿ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿತ್ತು. 2020 ರಲ್ಲಿ, ಜನರು ಸೇತುವೆಯ ಮೇಲ್ಭಾಗದಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವುದನ್ನು ತಡೆಯಲು ಮುಡಾ ಅನುದಾನದಿಂದ ಬೇಲಿಯನ್ನು ಹಾಕಲಾಗಿತ್ತು. ಬೇಲಿ ಹಾಕಿದ ನಂತರ ಆತ್ಮಹತ್ಯೆಗಳು ನಿಂತಿದ್ದವು.

ಮಂಗಳೂರು: ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಜಾಗದಲ್ಲೇ ನೇತ್ರಾವತಿ ನದಿಗೆ ಹಾರಿದ ವ್ಯಕ್ತಿ, ಶೋಧ ಕಾರ್ಯ ತೀವ್ರ
ವ್ಯಕ್ತಿ ನದಿಗೆ ಹಾರಿದ ಜಾಗದಲ್ಲಿ ಸೇತುವೆಯಲ್ಲಿ ಜನ ಜಮಾಯಿಸಿರುವುದು
TV9 Web
| Edited By: |

Updated on:Oct 30, 2023 | 8:27 PM

Share

ಮಂಗಳೂರು, ಅಕ್ಟೋಬರ್ 30: ಕಾಫಿ ಡೇ ಮಾಲೀಕ ವಿಜಿ ಸಿದ್ಧಾರ್ಥ ಆತ್ಮಹತ್ಯೆ ಮಾಡಿಕೊಂಡ ಬಳಿಕ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಮಂಗಳೂರು ಹೊರವಲಯದ ತೊಕ್ಕೊಟ್ಟು (Thokottu) ಬಳಿಯ ನೇತ್ರಾವತಿ ಸೇತುವೆ (Netravati River Bridge) ಮತ್ತೆ ಸುದ್ದಿಗೆ ಗ್ರಾಸವಾಗಿದೆ. ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ವ್ಯಕ್ತಿಯೊಬ್ಬರು ಸೋಮವಾರ ನದಿಗೆ ಹಾರಿದ್ದಾರೆ. ನದಿಗೆ ಹಾರಿದವರನ್ನು ಚಿಕ್ಕಮಗಳೂರು ಮೂಲದ ಪ್ರಶಾಂತ್ (35) ಎಂದು ಹೇಳಲಾಗಿದೆ.

ಕುಟುಂಬಸ್ಥರ ಜೊತೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಬಂದಿದ್ದ ಪ್ರಶಾಂತ್, ಕುಟುಂಬ ಸದಸ್ಯರನ್ನು ಆಸ್ಪತ್ರೆಯಲ್ಲಿ ಬಿಟ್ಟು ಕಾರಿನಲ್ಲಿ ಸೇತುವೆ ಬಳಿ ಬಂದಿದ್ದರು. ಬಳಿಕ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹಾರಿದ್ದಾರೆ.

ಪ್ರಸನ್ನ ಅವರು ನದಿಗೆ ಹಾರಿದ್ದನ್ನು ನೋಡಿದ ಸ್ಥಳೀಯರು ರಕ್ಷಣೆಗಾಗಿ ಪ್ರಯತ್ನ ಪಟ್ಟರೂ ಫಲಕಾರಿಯಾಗಲಿಲ್ಲ ಎನ್ನಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ನೂರಾರು ಜನರು ಜಮಾಯಿಸಿದ್ದರಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು.

ಪ್ರಶಾಂತ್ ತರಕಾರಿ ವ್ಯಾಪಾರ ಮಾಡುತ್ತಿದ್ದರು ಎನ್ನಲಾಗಿದೆ. ನೇತ್ರಾವತಿ ನದಿಯಲ್ಲಿ ಪ್ರಶಾಂತ್​ಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಟನಾ ಸ್ಥಳದಲ್ಲಿ ಕಂಕನಾಡಿ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಆಧಾರ್​​ ಫಿಂಗರ್​​ ಪ್ರಿಂಟ್​ಗೇ ಕನ್ನ, ಖಾತೆಯಿಂದ ಹಣ ವಿತ್​ಡ್ರಾ: ಮಂಗಳೂರಿನಲ್ಲಿ ಸೈಬರ್ ಚೋರರು ಹಣ ಎಗರಿಸುತ್ತಿದ್ದುದು ಹೀಗೆ

2019 ರಲ್ಲಿ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಆತ್ಮಹತ್ಯೆಯ ನಂತರ, ಸೇತುವೆಯು ಸರಣಿ ಆತ್ಮಹತ್ಯೆಗಳಿಗೆ ಸಾಕ್ಷಿಯಾಗಿತ್ತು. 2020 ರಲ್ಲಿ, ಜನರು ಸೇತುವೆಯ ಮೇಲ್ಭಾಗದಿಂದ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗುವುದನ್ನು ತಡೆಯಲು ಮುಡಾ ಅನುದಾನದಿಂದ ಬೇಲಿಯನ್ನು ಹಾಕಲಾಗಿತ್ತು. ಬೇಲಿ ಹಾಕಿದ ನಂತರ ಆತ್ಮಹತ್ಯೆಗಳು ನಿಂತಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Mon, 30 October 23

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು