ಮಂಗಳೂರಿಗರಿಗೆ ಸಿಹಿಸುದ್ದಿ​, ಆಸ್ತಿ ತೆರಿಗೆ ಪರಿಷ್ಕರಿಸಿದ ಪಾಲಿಕೆ, ತಗ್ಗಿದ ಹೊರೆ

ತೆರಿಗೆದಾರರಿಗೆ ಹೊರೆಯಾಗದಂತೆ ಪರಿಷ್ಕೃತ ದರದಲ್ಲಿ ತೆರಿಗೆ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಜಯಾನಂದ ಅಂಚನ್​ ತಿಳಿಸಿದ್ದಾರೆ.

ಮಂಗಳೂರಿಗರಿಗೆ ಸಿಹಿಸುದ್ದಿ​, ಆಸ್ತಿ ತೆರಿಗೆ ಪರಿಷ್ಕರಿಸಿದ ಪಾಲಿಕೆ, ತಗ್ಗಿದ ಹೊರೆ
ಮಂಗಳೂರು ಮಹಾನಗರ ಪಾಲಿಕೆ

Updated on: Mar 30, 2023 | 7:43 AM

ಮಂಗಳೂರು: ಈ ಹಿಂದೆ ಪರಿಸ್ಕರಿಸಲಾಗಿದ್ದ 2023-24ರ ಆಸ್ತಿ ತೆರಿಗೆಯ(property tax) ಬಗ್ಗೆ ಸಾರ್ವಜನಿಕರಿಂದ ದೂರುಗಳು ಮತ್ತು ಮಹಾನಗರ ಪಾಲಿಕೆಯ ಸದಸ್ಯರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಮತ್ತೊಮ್ಮೆ ಪರಿಸ್ಕರಿಸಲಾಗಿದೆ. ತೆರಿಗೆದಾರರಿಗೆ ಹೊರೆಯಾಗದಂತೆ ಪರಿಷ್ಕೃತ ದರದಲ್ಲಿ ತೆರಿಗೆ ಪಾವತಿಗೆ ಅವಕಾಶ ನೀಡಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಮೇಯರ್(mangaluru city corporation) ಜಯಾನಂದ ಅಂಚನ್​ ತಿಳಿಸಿದ್ದಾರೆ.

ಮಾ 20ರಂದು ಆಸ್ತಿ ತೆರಿಗೆ ಪರಿಷ್ಕರಣೆ ಕುರಿತ ಕಾರ್ಯಸೂಚಿಗೆ ಅನುಮೋದನೆ ನೀಡಿದ್ದು, ಈಗಾಗಲೇ ಮಾರ್ಚ್ 21ರಂದಯ ಎಂಸಿಸಿಯ ಆಸ್ತಿಯ ತೆರಿಗೆ ಸಾಫ್ಟ್​ವೇರ್​ನಲ್ಲಿ ಪರಿಸ್ಕೃತ ಆಸ್ತಿ ತೆರಿಗೆಯನ್ನು ಅಳವಡಿಲಾಗಿದೆ. ಆಸ್ತಿ ಮಾಲೀಕರು 2023-24ನೇ ಸಾಲಿನ ಆಸ್ತಿ ತೆರಿಗೆ ಈಗಾಗಲೇ ಪಾವತಿಸಿದ್ದರೆ ಅವರು ಮುಂದಿನ ವರ್ಷ ತೆರಿಗೆ ಪಾವತಿಸುವಾಗ ಸರಿಹೊಂದಿಸಲಾಗುತ್ತದೆ. ಈ ಸಂಬಂಧ ಆಸ್ತಿ ಮಾಲೀಕರಿಗೆ ಎಸ್​ಎಂಎಸ್​ ಕಳುಹಿಸಲಾಗುತ್ತದೆ. ಈಗಾಗಲೇ 32,407 ಆಸ್ತಿಗಳ ಮಾಲೀಕರು 2023-24ನೇ ಸಾಲಿಗೆ 17.25 ಕೋಟಿ ರೂ. ತೆರಿಗೆ ಪಾವತಿಸಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. ಅಲ್ಲದೇ ಆಸ್ತಿ ಮಾಲೀಕರು ಏಪ್ರಿಲ್​​ ಒಳಗೆ ಪಾವತಿ ಮಾಡಿದರೆ ತೆರಿಗೆಯಲ್ಲಿ ಶೇ.5ರಷ್ಟು ರಿಯಾಯಿತಿಯನ್ನು ಪಡೆಯಬಹುದು ಎಂದು ಜಯಾನಂದ್ ಹೇಳಿದ್ದಾರೆ.

ಮಹಾನಗರ ಪಾಲಿಕೆಯಲ್ಲಿ 2022-23ನೇ ಸಾಲಿನ ಆಸ್ತಿ ತೆರಿಗೆ ಪರಿಸ್ಕರಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ ಹಿಂದಿನ ಆಯುಕ್ತರಿಗೆ ಸರ್ಕಾರ ಕಾರಣ ಕೇಳಿ ನೋಟಿಸ್ ಜಾರಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಕರ್ನಾಟಕ ಮಹಾನಗರ ಪಾಲಿಕೆ ಅಧಿನಿಯಮ 1976ಕ್ಕೆ ತಂದಿರುವ ಕಾನೂನು ತಿದ್ದುಪಡಿಯಂತೆ ಪರಿಸ್ಕೃತ ಆಸ್ತಿ ತೆರಿಗೆಯನ್ನು ಜಾರಿಗೊಳಿಸಲಾಗಿತ್ತು. ಆದ್ರೆ, ಜಾರಿಗೊಳಿಸಿದ ಆಸ್ತಿ ತೆರಿಗೆಯಲ್ಲಿ ಏಕರೂಪತೆ ಇಲ್ಲದೇ ಜನರಿಗೆ ಹೊರೆಯಾಗುವ ರೀತಿಯಲ್ಲಿ ನಿಗದಿಪಡಿಸಿರುವ ಬಗ್ಗೆ ಆಕ್ಷೇಪಗಳು ವ್ಯಕ್ತವಾಗಿದ್ದವು. ಹೀಗಾಗಿ ಮರುಪರಿಶೀಲಿಸಿ ಸಾರ್ವಜನಿಕರಿಗೆ ಹೊರೆಯಾದಂತೆ ತೆರಿಗೆ ದರ ನಿರ್ಧರಿಸುವಂತೆ ಪಾಲಿಕೆ ಆಯುಕ್ತರಿಗೆ ಸೂಚಿಸಲಾಗಿತ್ತು ಎಂದಿದ್ದಾರೆ.

ಇನ್ನು ಎಂಸಿಸಿ ಕೌನ್ಸಿಲ್‌ನ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಮಾತನಾಡಿ, ಆಯಾ ಭಾಗದ ಆಸ್ತಿ ಮೌಲ್ಯವನ್ನು ಪರಿಗಣಿಸಿ ತೆರಿಗೆ ಪರಿಷ್ಕರಣೆ ಮಾಡಲಾಗಿದೆ. ಕಟ್ಟದ ತೆರಿಗೆ ಪಾವತಿಸಬಹುದಾದ ಭಾಗದ ಶೇ0.2ರಿಂದ ಶೇ1.5ರಷ್ಟು ಪರಿಗಣಿಸಿ ಲೆಕ್ಕಹಾಕಲಾಗುತ್ತದೆ. 2022-23ರ ಆರ್ಥಿಕ ವರ್ಷದಲ್ಲಿ 93 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹವಾಗಿದೆ ಎಂದು ವಿವರಿಸಿದ್ದಾರೆ.

ಇನ್ನಷ್ಟು ದಕ್ಷಿಣ ಕನ್ನಡ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:41 am, Thu, 30 March 23

Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
Follow Us