AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಗಣಿಗಾರಿಕೆ ಸ್ಫೋಟದಿಂದ ದೇಗುಲ ಬಿರುಕು; ಸೂಕ್ತ ಪರಿಹಾರಕ್ಕಾಗಿ ನಾಳೆ ಹಿಂದೂ ಜಾಗರಣ ವೇದಿಕೆಯಿಂದ ಸಂಕಿರ್ತನ ಯಾತ್ರೆ

ಅದು ಪ್ರಕೃತಿಯ ಮಧ್ಯೆ ಬೃಹದಾದ ಬಂಡೆಯ ಮೇಲೆ ನೆಲೆ ನಿಂತ ಶಿವ-ಪಾರ್ವತಿಯ ಸನ್ನಿಧಾನ. ಆದ್ರೆ ಮಾನವ ತನ್ನ ಸ್ವಾರ್ಥಕ್ಕಾಗಿ ಆ ದೇವಸ್ಥಾನದ ಸುತ್ತ ಗಣಿಗಾರಿಕೆ ನಡೆಸಿ ಭಗವಂತನ ಸನ್ನಿದಿಗೆ ಸಂಚಕಾರ ತಂದಿಟ್ಟಿದ್ದಾನೆ. ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕಾಗಿ ಹಿಂದೂಜಾಗರಣ ವೇದಿಕೆ ಶಿವಮಾಲಾಧಾರಣೆ ಅಭಿಯಾನ ನಡೆಸಲು ಮುಂದಾಗಿದೆ.

ಮಂಗಳೂರು: ಗಣಿಗಾರಿಕೆ ಸ್ಫೋಟದಿಂದ ದೇಗುಲ ಬಿರುಕು; ಸೂಕ್ತ ಪರಿಹಾರಕ್ಕಾಗಿ ನಾಳೆ ಹಿಂದೂ ಜಾಗರಣ ವೇದಿಕೆಯಿಂದ ಸಂಕಿರ್ತನ ಯಾತ್ರೆ
ಮಂಗಳೂರು ಅಕ್ರಮ ಗಣಿಗಾರಿಕೆ ವಿರುದ್ದ ಶಿವ ಮಾಲಾಧಾರಣೆಗೆ ಮುಂದಾದ ಹಿಂದೂ ಜಾಗರಣ ವೇದಿಕೆ
TV9 Web
| Edited By: |

Updated on: Feb 15, 2023 | 8:37 PM

Share

ದಕ್ಷಿಣ ಕನ್ನಡ: ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜದಲ್ಲಿರುವ ಪ್ರಸಿದ್ದ ಕಾರಿಂಜೇಶ್ವರ ದೇವಸ್ಥಾನ. ಪ್ರಕೃತಿಯ ಮಡಿಲಲ್ಲಿ ಬೃಹದಾಕಾರವಾಗಿ ನಿಂತಿರುವ ಕಲ್ಲಿನ ಮೇಲೆ ಶಿವ ಪಾರ್ವತಿಯ ಈ ಕಾರಣಿಕ ದೇವಸ್ಥಾನವಿದೆ. ಆದ್ರೆ ಈ ದೇವಸ್ಥಾನದ ಸುತ್ತ ಕಾರ್ಯಾಚರಿಸುತ್ತಿದ್ದ ಕಲ್ಲು ಗಣಿಗಾರಿಕೆಗೆ ನಡೆಸಿದ ಸ್ಫೋಟದಿಂದ ದೇಗುಲ ಬಿರುಕು ಬಿಟ್ಟಿದೆ. ಇದರ ವಿರುದ್ದ ಹೋರಾಟ ನಡೆಸಿದ್ದ ಹಿಂದೂ ಜಾಗರಣ ವೇದಿಕೆ ಹಾಗೂ ಸ್ಥಳೀಯರಿಗೆ ಇದೀಗ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಜಿಲ್ಲಾಡಳಿತ ದೇವಸ್ಥಾನದ ಸುತ್ತಲಿನ 2 ಕಿ.ಮೀ ವ್ಯಾಪ್ತಿಯನ್ನ ಗಣಿಗಾರಿಕೆ ಚಟುವಟಿಕೆಗಳ ನಿಷೇಧಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಆದ್ರೆ ಈ ಗಣಿಗಾರಿಕೆಯನ್ನು ಶಾಶ್ವತವಾಗಿ ನಿಲ್ಲಿಸಬೇಕೆಂದು ಆಗ್ರಹಿಸಿ ಹಿಂದೂ ಜಾಗರಣ ವೇದಿಕೆ ಶಿವ ಮಾಲಾಧಾರಣೆ ಅಭಿಯಾನ ನಡೆಸಲು ಮುಂದಾಗಿದೆ.

ಇದೇ ಫೆಬ್ರವರಿ 16ರಂದು ಭಕ್ತರು ಮಾಲಾಧಾರಣೆ ಮಾಡಿ ಫೆಬ್ರವರಿ 18ರಂದು ಮಾಲಾಧಾರಿಗಳ ಬೃಹತ್ ಸಮೂಹದೊಂದಿಗೆ ಸಂಕೀರ್ತನ ಯಾತ್ರೆಯೊಂದಿಗೆ ಕಾರಿಂಜ ದೇವಸ್ಥಾನಕ್ಕೆ ತೆರಳಿ ಜಾಗೃತಿಗೆ ಮುಂದಾಗಿದೆ. ದೇವಸ್ಥಾನದಲ್ಲಿ ಇಟ್ಟ ತಾಂಬೂಲ ಪ್ರಶ್ನೆಯಲ್ಲಿ ಕಾರಿಂಜೇಶ್ವರನ ಬೆಟ್ಟದ ಕಲ್ಲು ಸುಮಾರು 6 ಕಿ.ಮೀ ವ್ಯಾಪ್ತಿಯವರೆಗೆ ಹರಡಿಕೊಂಡಿದೆ ಎಂಬುದು ತಿಳಿದುಬಂದಿತ್ತು. ಹರಡಿಕೊಂಡಿರುವ ಕಲ್ಲು ಈ ಬೆಟ್ಟದ ಪಂಚಾಗವಿದ್ದಂತೆ. ಇದನ್ನು ಲೂಟಿ ಮಾಡಿದ್ರೆ ಶಿವಕೋಪಕ್ಕೀಡಾಗುವುದು ಎಂಬುದನ್ನು ಸೂಚಿಸಲಾಗಿತ್ತು. ಹೀಗಾಗಿ ಈ ಅಕ್ರಮದ ವಿರುದ್ದ ಜನ ಎಚ್ಚೆತ್ತುಕೊಂಡಿದ್ದರು.

ಸದ್ಯ ಗಣಿಗಾರಿಕೆ ತಾತ್ಕಾಲಿಕವಾಗಿ ನಿಂತಿದ್ದು, ನಿಷೇಧದ ಪ್ರಸ್ತಾಪವನ್ನು ಸರ್ಕಾರಕ್ಕೆ ಕಳುಹಿಸಲಾಗಿದ್ದು ಶೀಘ್ರ ಅನುಮೋದನೆ ನೀಡುವಂತೆ ಒತ್ತಾಯಿಸಲಾಗಿದೆ. ಹೀಗಾಗಿ ಫೆ.16ರಂದು ಸೂರ್ಯೋದಯದ ಮೊದಲು ಶಿವ ಮಾಲಾಧಾರಣೆ ಮಾಡುವ ಭಕ್ತರು ಅಂದು 108 ಭಾರಿ ಶಿವ ನಾಮ ಜಪಿಸಲಿದ್ದಾರೆ. ಫೆ.18ರಂದು ಸಂಜೆ ಬೃಹತ್ ಭಕ್ತರ ಸಮೂಹ ದೇವಸ್ಥಾನಕ್ಕೆ ಸಾಗಿ ಪವಿತ್ರ ಸ್ನಾನ ಮಾಡಿ ದೇವರ ದರ್ಶನ ಪಡೆದು ಶಿವ ಜಾಗರಣೆ ಮಾಡಿ ಮರುದಿನ ಮುಂಜಾನೆ ಮಾಲೆ ವಿಸರ್ಜನೆ ಮಾಡಲಿದ್ದಾರೆ.

ಇದನ್ನೂ ಓದಿ:ಖಾಕಿಗೆ ಕಗ್ಗಂಟಾದ ಮಂಗಳೂರು ಜುವೆಲ್ಲರಿ ಮರ್ಡರ್ ಕೇಸ್, ಆರೋಪಿ ಜಾಡು ಹಿಡಿದು ಉತ್ತರ ಕರ್ನಾಟಕದಲ್ಲಿ ಮೊಕ್ಕಾಂ ಹೂಡಿದ ಖಾಕಿ

ಅಕ್ರಮ ಗಣಿಗಾರಿಕೆಯ ವಿರುದ್ದ ಜನ ಒಗ್ಗಟ್ಟಾಗಿ ದೇವಸ್ಥಾನದ ಸಂರಕ್ಷಣೆಗೆ ಮುಂದೆ ಬಂದಿದ್ದರಿಂದ ಜನರಿಗೆ ತಾತ್ಕಾಲಿಕ ಪರಿಹಾರ ಸಿಕ್ಕಿದೆ. ಶಾಶ್ವತವಾಗಿ ಈ ಗಣಿಗಾರಿಕೆ ನಿಲ್ಲದಿದ್ದರೆ ಈ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಎಚ್ಚರಿಕೆಯನ್ನು ಹಿಂದೂ ಜಾಗರಣ ವೇದಿಕೆ ನೀಡಿದೆ.

ವರದಿ: ಅಶೋಕ್ ಟಿವಿ9 ಮಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ