AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ ಬರದಿದ್ದಕ್ಕೆ ಬೇಸಗೊಂಡು ಆತ್ಮ,ಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ 17 ವರ್ಷದ ಕಾಲೇಜು ವಿದ್ಯಾರ್ಥಿನಿ ನಿಶಾ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾಳೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ
ನಿಶಾ, ಮೃತ ವಿದ್ಯಾರ್ಥಿನಿ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Nov 26, 2023 | 12:17 PM

Share

ಮಂಗಳೂರು, (ನವೆಂಬರ್ 26): ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (College Student) ಕೀಟನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ಖಿನ್ನತೆಗೊಳಗಾಗಿದ್ದ ನಿಶಾ, ಕೀಟನಾಶಕ ಸೇವಿಸಿದ್ದಳು. ಬಳಿಕ ಮನೆಯವರೂ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಶಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ,

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್​ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದ್ರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಳು.  ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.

ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ದಿದ್ದು, ಕಳೆದ ಒಂದು ವಾರದಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಳು, ಆದ್ರೆ, ಇಂದು ಚಿಕಿತ್ಸೆ ಫಲಕಾರಿಗಾದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ