ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಪ್ರಶಸ್ತಿ ಬರದಿದ್ದಕ್ಕೆ ಬೇಸಗೊಂಡು ಆತ್ಮ,ಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಸಾವನ್ನಪ್ಪಿದ್ದಾಳೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದ 17 ವರ್ಷದ ಕಾಲೇಜು ವಿದ್ಯಾರ್ಥಿನಿ ನಿಶಾ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಂದು ಕೊನೆಯುಸಿರೆಳೆದಿದ್ದಾಳೆ.

ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪ್ರಶಸ್ತಿ ಕೈತಪ್ಪಿದಕ್ಕೆ ಬೇಸರಗೊಂಡಿದ್ದ ಮಂಗಳೂರಿನ ವಿದ್ಯಾರ್ಥಿನಿ ಆತ್ಮಹತ್ಯೆ
ನಿಶಾ, ಮೃತ ವಿದ್ಯಾರ್ಥಿನಿ
Edited By:

Updated on: Nov 26, 2023 | 12:17 PM

ಮಂಗಳೂರು, (ನವೆಂಬರ್ 26): ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿನಿ (College Student) ಕೀಟನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ವಿವೇಕಾನಂದ ಪದವಿಪೂರ್ವ ಕಾಲೇಜಿನ ನಿಶಾ (17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗದಿದ್ದಕ್ಕೆ ಖಿನ್ನತೆಗೊಳಗಾಗಿದ್ದ ನಿಶಾ, ಕೀಟನಾಶಕ ಸೇವಿಸಿದ್ದಳು. ಬಳಿಕ ಮನೆಯವರೂ ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಶಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ,

ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ನಡೆದಿದ್ದ ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ನಿಶಾ ರನ್ನಿಂಗ್​ನಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದಳು. ಆದ್ರೆ, ರನ್ನಿಂಗ್ ರೇಸ್ ನಲ್ಲಿ ಬಹುಮಾನ ಸಿಕ್ಕಿರಲಿಲ್ಲ. ಇದರಿಂದ ನಿಶಾ ತೀವ್ರ ಬೇಸರಗೊಂಡಿದ್ದಳು. ಬಳಿಕ ಖಿನ್ನತೆಗೊಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶವನ್ನ ಸೇವಿಸಿದ್ದಳು.  ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ.

ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನಿಂದ ಮಂಗಳೂರಿಗೆ ಕೊಂಡೊಯ್ದಿದ್ದು, ಕಳೆದ ಒಂದು ವಾರದಿಂದ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಳು, ಆದ್ರೆ, ಇಂದು ಚಿಕಿತ್ಸೆ ಫಲಕಾರಿಗಾದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಬಗ್ಗೆ
ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us