AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ

ಮಂಗಳೂರಿನಲ್ಲಿ ತೆರಿಗೆ ಹಣವನ್ನು ಜನಪ್ರತಿನಿಧಿಯೊಬ್ಬರ ಸರ್ಕಾರಿ ಕಚೇರಿಗಾಗಿ ದುಂದುವೆಚ್ಚ ಮಾಡುತ್ತಿರುವ ಆರೋಪ ಕೇಳಿಬಂದಿದೆ. ನೂತನವಾಗಿ ಆಯ್ಕೆಯಾದ ಕಾಂಗ್ರೆಸ್ ಎಂಎಲ್​​ಸಿ ಐವನ್ ಡಿಸೋಜಾಗಾಗಿ ಅರ್ಧ ಕೋಟಿ ರೂ. ವೆಚ್ಚದಲ್ಲಿ ಕಚೇರಿ ನಿರ್ಮಾಣ ಮಾಡುತ್ತಿರುವುದು ತೀವ್ರ ಚರ್ಚೆಗೆ ಕಾರಣವಾಗಿದೆ. ಆ ಕುರಿತು ವಿವರ ಇಲ್ಲಿದೆ.

ಮಂಗಳೂರು: ಕಾಂಗ್ರೆಸ್ ಎಂಎಲ್​ಸಿ ಐವನ್ ಡಿಸೋಜಾಗೆ ದುಬಾರಿ ಕಚೇರಿ, ತೆರಿಗೆ ಹಣ ದುಂದುವೆಚ್ಚಕ್ಕೆ ಸಾರ್ವಜನಿಕರ ಆಕ್ರೋಶ
ದುಬಾರಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಚೇರಿ
ಅಶೋಕ್​ ಪೂಜಾರಿ
| Edited By: |

Updated on: Sep 20, 2024 | 8:50 AM

Share

ಮಂಗಳೂರು, ಸೆಪ್ಟೆಂಬರ್ 20: ಇತ್ತೀಚೆಗೆ ಕಾಂಗ್ರೆಸ್‌ನಿಂದ ಐವನ್ ಡಿಸೋಜಾ ಅವರನ್ನು ಎಂಎಲ್​​​ಸಿಯಾಗಿ ಆಯ್ಕೆ ಮಾಡಲಾಗಿತ್ತು. ಆದರೆ ಅವರಿಗಾಗಿ ನೂತನವಾಗಿ ನಿರ್ಮಿಸುತ್ತಿರುವ ಸರ್ಕಾರಿ ಕಚೇರಿ ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ. ಮಂಗಳೂರಿನ ಲಾಲ್‌ಬಾಗ್ ಬಳಿ ಇರುವ ಮಹಾನಗರ ಪಾಲಿಕೆಯ ಸಂಕೀರ್ಣದಲ್ಲಿ ನೂತನ ಕಚೇರಿಯ ನಿರ್ಮಾಣ ಕಾರ್ಯ ಭರದಿಂದ ಸಾಗುತ್ತಿದೆ. ಆದರೆ ಈ ಕಚೇರಿಗಾಗಿ ಸುಮಾರು 55 ಲಕ್ಷ ರೂಪಾಯಿ ಹಣವನ್ನು ಖರ್ಚು ಮಾಡಲಾಗುತ್ತಿದ್ದು ಜನರ, ಸಾಮಾಜಿಕ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ನೂತನ ಕಚೇರಿ ಐದು ಚೇಂಬರ್‌ಗಳನ್ನು ಹೊಂದಿರಲಿದ್ದು ಈಗಾಗಲೇ ಇಂಟೀರಿಯರ್ ವರ್ಕ್ ನಡೆಯುತ್ತಿದೆ. ಒಳಭಾಗಕ್ಕೆ ಯಾರು ಸಹ ಹೋಗದಂತೆ ಟಾರ್ಪಲ್ ಅಳವಡಿಸಲಾಗಿದೆ. ಒಳಭಾಗದಲ್ಲಿ ಭರದಿಂದ ನೂತನ ಕಚೇರಿಯ ಕೆಲಸ ನಡೆಯುತ್ತಿದೆ.

ಐವನ್ ಕಚೇರಿಗಾಗಿ ಆರೋಗ್ಯ ಇಲಾಖೆ ಕಚೇರಿ ಸ್ಥಳಾಂತರ

ಐವನ್ ಡಿಸೋಜಾ ಅವರಿಗಾಗಿ ನಿರ್ಮಿಸುತ್ತಿರುವ ಈ ಕಚೇರಿ ಇದ್ದ ಜಾಗದಲ್ಲಿ ಮೊದಲು ಪಾಲಿಕೆಯ ಆರೋಗ್ಯ ಇಲಾಖೆ ವಿಭಾಗ ಕಾರ್ಯ ನಿರ್ವಹಿಸುತ್ತಿತ್ತು. ಸುಮಾರು ಹದಿನೈದಕ್ಕೂ ಹೆಚ್ಚು ಆರೋಗ್ಯ ವಿಭಾಗದ ಅಧಿಕಾರಿ ಸಿಬ್ಬಂದಿಗಳು ಈ ಕಚೇರಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಇದೀಗ ಐವನ್ ಡಿಸೋಜಾ ಅವರ ಕಚೇರಿ ನಿರ್ಮಾಣಕ್ಕಾಗಿ ಇಲ್ಲಿದ್ದ ಆರೋಗ್ಯ ಇಲಾಖೆ ವಿಭಾಗವನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಲಾಗಿದೆ. ಸ್ಥಳಾಂತರವಾದ ಸ್ಥಳದಲ್ಲಿ ಇಕ್ಕಟ್ಟು ಇರುವುದರಿಂದ ಅಧಿಕಾರಿ ಸಿಬ್ಬಂದಿ ಕಷ್ಟ ಪಡುವಂತಾಗಿದೆ.

Mangaluru: Congress MLC Ivan D'Souza's expensive office, public outrage over waste of tax money, Kannada news

ಐವನ್ ಡಿಸೋಜಾ (ಸಂಗ್ರಹ ಚಿತ್ರ)

ಪಾಲಿಕೆ ಕಚೇರಿಯಲ್ಲೇ ಕಡತ ಇಡಲೂ ಇಲ್ಲ ಸಾಕಷ್ಟು ಜಾಗ!

ಪಾಲಿಕೆ ಕಚೇರಿಯಲ್ಲಿಯೇ ಕಡತಗಳನ್ನು ಇಡುವುದಕ್ಕೂ ಸಾಕಷ್ಟು ಜಾಗ ಇಲ್ಲದಂತಹ ಪರಿಸ್ಥಿತಿ ಇರುವಾಗ ಎಂಎಲ್​ಸಿಗೆ 55 ರೂಪಾಯಿ ಲಕ್ಷ ವೆಚ್ಚದಲ್ಲಿ ಇಷ್ಟು ದೊಡ್ಡ ಕಚೇರಿ ಯಾಕೆ ಎಂದು ಜನ ಪ್ರಶ್ನೆ ಮಾಡುತ್ತಿದ್ದಾರೆ. ಸ್ವತ ನಗರಾಭಿವೃದ್ದಿ ಸಚಿವರಿಗೂ ಇಷ್ಟು ದೊಡ್ಡದಾದ ಕಚೇರಿ ಇಲ್ಲದಿರುವಾಗ ಐವನ್ ಡಿಸೋಜಾಗೆ ಯಾಕೆ ಎಂದು ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಾಂಗ್ಲಾ ಪ್ರಧಾನಿಗೆ ಬಂದ ಸ್ಥಿತಿ ರಾಜ್ಯಪಾಲರಿಗೂ ಬರಬಹುದು: ಕಾಂಗ್ರೆಸ್ MLC ಹೇಳಿಕೆಗೆ ಭುಗಿಲೆದ್ದ ಆಕ್ರೋಶ

ಈ ಕಚೇರಿ ಎಂಎಲ್​​ಸಿ ಐವನ್ ಡಿಸೋಜಾಗೆ ಮಾತ್ರವಲ್ಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಕೂಡ ಇಲ್ಲಿಂದಲೇ ಕಾರ್ಯ ನಿರ್ವಹಿಸುತ್ತದೆ ಎಂಬುದು ಕಾಂಗ್ರೆಸ್ ನಾಯಕರ ವಾದ. ಒಟ್ಟಿನಲ್ಲಿ ಈ ಕಚೇರಿ ನಿರ್ಮಾಣಕ್ಕಾಗಿ ಪಾಲಿಕೆಯ ಹಣವನ್ನೇ ಬಳಕೆ ಮಾಡುತ್ತಿದ್ದು ಇಂತಹ ಕಚೇರಿಯ ಅವಶ್ಯಕತೆ ಇದೆಯಾ ಎಂಬ ಪ್ರಶ್ನೆ ಜನರಲ್ಲಿ ಮೂಡಿರುವುದು ಸುಳ್ಳಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!