AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟದ ಮಾಸ್ಟರ್​ಮೈಂಡ್​ ಬಂಧಿತ ಉಗ್ರ ಅಫ್ಸರ್​ ಪಾಷಾ

ಕಳೆದ ವರ್ಷ ಮಂಗಳೂರಿನಲ್ಲಿ ಆಟೋದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್​ಮೈಂಡ್ ಬೆಳಗಾವಿ​ ಜೈಲಿನಲ್ಲಿ ಬಂಧಿಯಾಗಿದ್ದ ಲಷ್ಕರ್​ ಎ ತೊಯ್ಬಾ ಸಂಘಟನೆಯ ಸದಸ್ಯ ಅಫ್ಸರ್​ ಪಾಷಾ ಎಂಬ ಸ್ಪೋಟಕ ಅಂಶವನ್ನು ಮಹಾರಾಷ್ಟ್ರ ಪೊಲೀಸರು ತನಿಖೆಯಲ್ಲಿ ಪತ್ತೆಮಾಡಿದ್ದಾರೆ.

ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟದ ಮಾಸ್ಟರ್​ಮೈಂಡ್​ ಬಂಧಿತ ಉಗ್ರ ಅಫ್ಸರ್​ ಪಾಷಾ
ಕುಕ್ಕರ್​ ಬಾಂಬ್​ ಬ್ಲಾಸ್ಟ್​​​ ಆರೋಪಿ ಶಾರಿಕ್​
ವಿವೇಕ ಬಿರಾದಾರ
|

Updated on:Jul 31, 2023 | 7:14 AM

Share

ಬೆಂಗಳೂರು: ಕಳೆದ ವರ್ಷ ಮಂಗಳೂರಿನಲ್ಲಿ (Mangaluru) ಆಟೋದಲ್ಲಿ (Auto) ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb) ಪ್ರಕರಣದ ಮಾಸ್ಟರ್​ಮೈಂಡ್ ಬೆಳಗಾವಿ​ (Belagavi) ಜೈಲಿನಲ್ಲಿ ಬಂಧಿಯಾಗಿದ್ದ ಲಷ್ಕರ್​ ಎ ತೊಯ್ಬಾ ಸಂಘಟನೆಯ ಸದಸ್ಯ ಅಫ್ಸರ್​ ಪಾಷಾ ಎಂಬ ಸ್ಪೋಟಕ ಅಂಶವನ್ನು ಮಹಾರಾಷ್ಟ್ರ ಪೊಲೀಸರು (Maharashtra Police) ತನಿಖೆಯಲ್ಲಿ ಪತ್ತೆಮಾಡಿದ್ದಾರೆ. ಶಿವಮೊಗ್ಗ ಮೂಲದ ಮೊಹ್ಮದ್​ ಶಾರೀಖ್​​ಗೆ ಉಗ್ರ ಅಫ್ಸರ್​ ಪಾಷಾ ಕರ್ನಾಟಕದ ಜೈಲೊಂದರಲ್ಲಿ ತರಬೇತಿ ನೀಡಿದ್ದನು. ಹಲವು ಉಗ್ರ ಚಟುವಟಿಗಳಲ್ಲಿ ಭಾಗಿಯಾಗಿರುವ ಅಫ್ಸರ್​ ಪಾಷಾ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಕೆ ತರಬೇತಿ ಪಡೆದಿದ್ದನು.

ಕಖ್ಯಾತ ಉಗ್ರಗಾಮಿ ಸಂಘಟನೆ ಲಸ್ಕರ್ ಎ.ತೊಯ್ಬಾದ ಸದಸ್ಯನಾಗಿರುವ ಅಫ್ಸರ್​ ಪಾಷಾ ಹಲವು ವರ್ಷಗಳ ಹಿಂದೆಯೇ ನೆರೆಯ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಕೆ ಕುರಿತು ತರಬೇತಿ ಪಡೆದಿದ್ದಾನೆ. 2005ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಐಐಎಸ್ಸಿ ಮೇಲೆ ನಡೆದ ದಾಳಿ ಪ್ರಕರಣದಲ್ಲೂ ಈತ ಭಾಗಿಯಾಗಿದ್ದಾನೆ. 2012ರಲ್ಲಿ ಜಮ್ಮು- ಕಾಶ್ಮೀರದಲ್ಲಿ ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣದಲ್ಲಿ ಈತ ಅಪರಾಧಿಯಾಗಿದ್ದಾನೆ. ಅಲ್ಲದೇ ಈತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾಗ ಸಕೈದಿಗಳಿಗೆ ಮೂಲಭೂತವಾದ ಬೋಧನೆ ಮಾಡಿದ ಆರೋಪವಿದೆ. ಇದೇ ಅಫ್ಸರ್​ ಪಾಷಾ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಹಾರಷ್ಟ್ರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಜೈಲಿನಿಂದ ಜಯೇಶ್ ಪೂಜಾರಿ ಎಂಬಾತ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಈ ಪ್ರಕರಣದಲ್ಲಿ ಅಫ್ಸರ್​ ಪಾಷಾನನ್ನು ಬೆಳಗಾವಿ ಜೈಲಿನಿಂದ ಜುಲೈ 14ರಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕರೆದೊಯ್ದು ನಾಗಪುರ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆ ನಡೆಸಿದರು. ಆ ವೇಳೆ ಈತನಿಗೆ ಮಂಗಳೂರು ಕುಕ್ಕರ್ ಬಾಂಬ್‌ ಜತೆಗೆ ನಂಟು ಇರುವ ಮಾಹಿತಿ ಪತ್ತೆಯಾಗಿದೆ. ಈ ಮಾಹಿತಿಯನ್ನು ಮಹಾರಾಷ್ಟ್ರ ಪೊಲೀಸರು ಸಮಗ್ರ ವರದಿ ತಯಾರಿಸಿ, ಕೇಂದ್ರ ಗುಪ್ತಚರ ದಳಕ್ಕೂ ಮಾಹಿತಿ ರವಾನಿಸಿದ್ದಾರೆ.

ಏನಿದು ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟ

2022ರ ನ.19ರಂದು ಮಂಗಳೂರಿನಲ್ಲಿ, ಆಟೋವೊಂದರಲ್ಲಿ ​​ಕುಕ್ಕರ್‌ಗೆ ಡಿಟೋನೇಟಲ್, ವೈ‌ ಹಾಗೂ ಬ್ಯಾಟರಿಗಳನ್ನು ಅಳವಡಿಸಿದ್ದ ಕುಕ್ಕರ್​ ಬಾಂಬ್ ಅನ್ನು ಶಿವಮೊಗ್ಗ ಮೂಲದ ಮೊಹಮ್ಮದ್ ಶಾರಿಕ್ ತೆಗೆದುಕೊಂಡು ಹೋಗುತ್ತಿದ್ದನು. ಇದು ದಾರಿ ಮಧ್ಯೆ ಸ್ಪೋಟವಾಗಿತ್ತು. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Mon, 31 July 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್