Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟದ ಮಾಸ್ಟರ್​ಮೈಂಡ್​ ಬಂಧಿತ ಉಗ್ರ ಅಫ್ಸರ್​ ಪಾಷಾ

ಕಳೆದ ವರ್ಷ ಮಂಗಳೂರಿನಲ್ಲಿ ಆಟೋದಲ್ಲಿ ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್​ಮೈಂಡ್ ಬೆಳಗಾವಿ​ ಜೈಲಿನಲ್ಲಿ ಬಂಧಿಯಾಗಿದ್ದ ಲಷ್ಕರ್​ ಎ ತೊಯ್ಬಾ ಸಂಘಟನೆಯ ಸದಸ್ಯ ಅಫ್ಸರ್​ ಪಾಷಾ ಎಂಬ ಸ್ಪೋಟಕ ಅಂಶವನ್ನು ಮಹಾರಾಷ್ಟ್ರ ಪೊಲೀಸರು ತನಿಖೆಯಲ್ಲಿ ಪತ್ತೆಮಾಡಿದ್ದಾರೆ.

ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟದ ಮಾಸ್ಟರ್​ಮೈಂಡ್​ ಬಂಧಿತ ಉಗ್ರ ಅಫ್ಸರ್​ ಪಾಷಾ
ಕುಕ್ಕರ್​ ಬಾಂಬ್​ ಬ್ಲಾಸ್ಟ್​​​ ಆರೋಪಿ ಶಾರಿಕ್​
Follow us
ವಿವೇಕ ಬಿರಾದಾರ
|

Updated on:Jul 31, 2023 | 7:14 AM

ಬೆಂಗಳೂರು: ಕಳೆದ ವರ್ಷ ಮಂಗಳೂರಿನಲ್ಲಿ (Mangaluru) ಆಟೋದಲ್ಲಿ (Auto) ಸಂಭವಿಸಿದ್ದ ಕುಕ್ಕರ್ ಬಾಂಬ್ ಸ್ಫೋಟ (Cooker Bomb) ಪ್ರಕರಣದ ಮಾಸ್ಟರ್​ಮೈಂಡ್ ಬೆಳಗಾವಿ​ (Belagavi) ಜೈಲಿನಲ್ಲಿ ಬಂಧಿಯಾಗಿದ್ದ ಲಷ್ಕರ್​ ಎ ತೊಯ್ಬಾ ಸಂಘಟನೆಯ ಸದಸ್ಯ ಅಫ್ಸರ್​ ಪಾಷಾ ಎಂಬ ಸ್ಪೋಟಕ ಅಂಶವನ್ನು ಮಹಾರಾಷ್ಟ್ರ ಪೊಲೀಸರು (Maharashtra Police) ತನಿಖೆಯಲ್ಲಿ ಪತ್ತೆಮಾಡಿದ್ದಾರೆ. ಶಿವಮೊಗ್ಗ ಮೂಲದ ಮೊಹ್ಮದ್​ ಶಾರೀಖ್​​ಗೆ ಉಗ್ರ ಅಫ್ಸರ್​ ಪಾಷಾ ಕರ್ನಾಟಕದ ಜೈಲೊಂದರಲ್ಲಿ ತರಬೇತಿ ನೀಡಿದ್ದನು. ಹಲವು ಉಗ್ರ ಚಟುವಟಿಗಳಲ್ಲಿ ಭಾಗಿಯಾಗಿರುವ ಅಫ್ಸರ್​ ಪಾಷಾ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಕೆ ತರಬೇತಿ ಪಡೆದಿದ್ದನು.

ಕಖ್ಯಾತ ಉಗ್ರಗಾಮಿ ಸಂಘಟನೆ ಲಸ್ಕರ್ ಎ.ತೊಯ್ಬಾದ ಸದಸ್ಯನಾಗಿರುವ ಅಫ್ಸರ್​ ಪಾಷಾ ಹಲವು ವರ್ಷಗಳ ಹಿಂದೆಯೇ ನೆರೆಯ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಕೆ ಕುರಿತು ತರಬೇತಿ ಪಡೆದಿದ್ದಾನೆ. 2005ರಲ್ಲಿ ಬೆಂಗಳೂರಿನ ಪ್ರತಿಷ್ಠಿತ ಐಐಎಸ್ಸಿ ಮೇಲೆ ನಡೆದ ದಾಳಿ ಪ್ರಕರಣದಲ್ಲೂ ಈತ ಭಾಗಿಯಾಗಿದ್ದಾನೆ. 2012ರಲ್ಲಿ ಜಮ್ಮು- ಕಾಶ್ಮೀರದಲ್ಲಿ ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಪ್ರಕರಣದಲ್ಲಿ ಈತ ಅಪರಾಧಿಯಾಗಿದ್ದಾನೆ. ಅಲ್ಲದೇ ಈತ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾಗ ಸಕೈದಿಗಳಿಗೆ ಮೂಲಭೂತವಾದ ಬೋಧನೆ ಮಾಡಿದ ಆರೋಪವಿದೆ. ಇದೇ ಅಫ್ಸರ್​ ಪಾಷಾ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಮಾಹಾರಷ್ಟ್ರ ಪೊಲೀಸರು ಬಂಧಿಸಿ ಕರೆದೊಯ್ದಿದ್ದಾರೆ.

ಇದನ್ನೂ ಓದಿ: ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್​ ಸ್ಫೋಟ ಪ್ರಕರಣ; ಸ್ಥಳ ಮಹಜರು ಪ್ರಕ್ರಿಯೆ ನಡೆಸಿರುವ NIA ಅಧಿಕಾರಿಗಳು

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆಳಗಾವಿ ಜೈಲಿನಿಂದ ಜಯೇಶ್ ಪೂಜಾರಿ ಎಂಬಾತ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದನು. ಈ ಪ್ರಕರಣದಲ್ಲಿ ಅಫ್ಸರ್​ ಪಾಷಾನನ್ನು ಬೆಳಗಾವಿ ಜೈಲಿನಿಂದ ಜುಲೈ 14ರಂದು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ಕರೆದೊಯ್ದು ನಾಗಪುರ ಕೇಂದ್ರ ಕಾರಾಗೃಹದಲ್ಲಿ ವಿಚಾರಣೆ ನಡೆಸಿದರು. ಆ ವೇಳೆ ಈತನಿಗೆ ಮಂಗಳೂರು ಕುಕ್ಕರ್ ಬಾಂಬ್‌ ಜತೆಗೆ ನಂಟು ಇರುವ ಮಾಹಿತಿ ಪತ್ತೆಯಾಗಿದೆ. ಈ ಮಾಹಿತಿಯನ್ನು ಮಹಾರಾಷ್ಟ್ರ ಪೊಲೀಸರು ಸಮಗ್ರ ವರದಿ ತಯಾರಿಸಿ, ಕೇಂದ್ರ ಗುಪ್ತಚರ ದಳಕ್ಕೂ ಮಾಹಿತಿ ರವಾನಿಸಿದ್ದಾರೆ.

ಏನಿದು ಮಂಗಳೂರು ಕುಕ್ಕರ್​ ಬಾಂಬ್​ ಸ್ಪೋಟ

2022ರ ನ.19ರಂದು ಮಂಗಳೂರಿನಲ್ಲಿ, ಆಟೋವೊಂದರಲ್ಲಿ ​​ಕುಕ್ಕರ್‌ಗೆ ಡಿಟೋನೇಟಲ್, ವೈ‌ ಹಾಗೂ ಬ್ಯಾಟರಿಗಳನ್ನು ಅಳವಡಿಸಿದ್ದ ಕುಕ್ಕರ್​ ಬಾಂಬ್ ಅನ್ನು ಶಿವಮೊಗ್ಗ ಮೂಲದ ಮೊಹಮ್ಮದ್ ಶಾರಿಕ್ ತೆಗೆದುಕೊಂಡು ಹೋಗುತ್ತಿದ್ದನು. ಇದು ದಾರಿ ಮಧ್ಯೆ ಸ್ಪೋಟವಾಗಿತ್ತು. ​

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:07 am, Mon, 31 July 23

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ