AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನ ನ್ಯಾಯಾಲಯಕ್ಕೂ ತಟ್ಟಿದ ಜೈಲು ಜಾಮರ್​ ಪರಿಣಾಮ: ನೆಟ್ವರ್ಕ್​ ಸಿಗದೇ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು!

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟೋರಿಯಸ್​ ರೌಡಿಗಳು, ಉಗ್ರಗಾಮಿಗಳು ಖುಲ್ಲಂಖುಲ್ಲಾ ಮೊಬೈಲ್​ ಬಳಕೆ ಮಾಡುತ್ತಿದ್ದ ವಿಡಿಯೋ ವೈರಲ್​ ಆಗಿತ್ತು. ಆದರೆ ಮಂಗಳೂರಿನ ಕಾರಾಗೃಹದ ಕತೆ ಬೇರೆಯೇ ಆಗಿದೆ. ಇಲ್ಲಿ ಜೈಲಿನ ಹೊರಗೆ ಓಡಾಡುವವರೂ ಮೊಬೈಲ್​ ಫೋನ್​ ಬಳಕೆ ಮಾಡದಂತಹ ಪರಿಸ್ಥಿತಿ ಉಂಟಾಗಿದ್ದು ಈ ವಿಚಾರ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.

ಮಂಗಳೂರಿನ ನ್ಯಾಯಾಲಯಕ್ಕೂ ತಟ್ಟಿದ ಜೈಲು ಜಾಮರ್​ ಪರಿಣಾಮ: ನೆಟ್ವರ್ಕ್​ ಸಿಗದೇ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು!
ಮಂಗಳೂರಿನ ನ್ಯಾಯಾಲಯಕ್ಕೂ ತಟ್ಟಿದ ಜೈಲು ಜಾಮರ್​ ಪರಿಣಾಮ: ನೆಟ್ವರ್ಕ್​ ಸಿಗದೇ ಹೈಕೋರ್ಟ್ ಮೆಟ್ಟಿಲೇರಿದ ವಕೀಲರು!
ಅಶೋಕ್​ ಪೂಜಾರಿ, ಮಂಗಳೂರು
| Updated By: Ganapathi Sharma|

Updated on: Nov 12, 2025 | 2:12 PM

Share

ಮಂಗಳೂರು, ನವೆಂಬರ್ 12: ದಕ್ಷಿಣ ಕನ್ನಡ ಜಿಲ್ಲೆಯ (Dakshina Kannada)  ಮಂಗಳೂರಿನ (Mangaluru) ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ನೆಟ್‌ವರ್ಕ್ ಜಾಮರ್​ ಅಳವಡಿಕೆ ಮಾಡಲಾಗಿದೆ. ಆದರೆ ಈ ಜಾಮರ್​ನಿಂದಾಗಿ ಕಾರಾಗೃಹದ ಸುತ್ತಮುತ್ತಲ ಪ್ರದೇಶಗಳಲ್ಲಿಯೂ ನೆಟ್​ವರ್ಕ್ ಸಿಗದೇ ಜನರು ಪರದಾಡುವಂತಾಗಿದೆ. ಈ ಜಾಮರ್​ ನೆಟ್​ವರ್ಕ್​ ಸಮಸ್ಯೆಯ ಬಿಸಿ ಕಾರಾಗೃಹದಿಂದ ಸುಮಾರು 800 ಮೀಟರ್​ ದೂರದಲ್ಲೇ ಇರುವ ನ್ಯಾಯಾಲಯಕ್ಕೂ ತಟ್ಟಿದ್ದು, ವಕೀಲರಿಗೆ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಹೀಗಾಗಿ ಮಂಗಳೂರು ಕಾರಾಗೃಹದಲ್ಲಿ ಅಳವಡಿಸಲಾಗಿರುವ ಜಾಮರ್​ನಿಂದ ಸ್ಥಳೀಯರಿಗೆ ತೊಂದರೆಯಾಗದಂತೆ ಸರ್ಕಾರ ನೋಡಿಕೊಳ್ಳಬೇಕು ಎಂದು ವಕೀಲರು ಗಡುವು ನೀಡಿದ್ದಾರೆ. ಇಲ್ಲವಾದಲ್ಲಿ ಉಗ್ರ ಪ್ರತಿಭಟನೆಯ ಎಚ್ಚರಿಕೆಯನ್ನೂ ಮಂಗಳೂರು ವಕೀಲರ ಸಂಘ ಸರ್ಕಾರಕ್ಕೆ ರವಾನೆ ಮಾಡಿದೆ.

ಜೈಲಿನೊಳಗೆ ಕೈದಿಗಳಿಗೆ ಸಿಗುತ್ತಿದೆ ನೆಟ್ವರ್ಕ್, ಹೊರಗಡೆ ಇರೋ ಸಾರ್ವಜನಿಕರಿಗಿಲ್ಲ!

ಈ ಇಡೀ ಪ್ರಕರಣದಲ್ಲೇ ಒಂದು ವಿಪರ್ಯಾಸವಿದೆ. ಜೈಲಿನೊಳಗಿರುವ ಕೈದಿಗಳಿಗೆ ಸಿಗುವ ನೆಟ್ವರ್ಕ್, ಜೈಲಿನ ಸುತ್ತಮುತ್ತ ಇರುವ ಸಾರ್ವಜನಿಕರಿಗೆ ಸಿಗುತ್ತಿಲ್ಲ ಎಂಬ ಗಂಭೀರ ಆರೋಪವನ್ನು ವಕೀಲರು ಮಾಡಿದ್ದಾರೆ. ಕಾರಾಗೃಹದ ಒಳಗೆ ಕೈದಿಗಳು ಮೊಬೈಲ್​ ಬಳಕೆ ಮಾಡುತ್ತಿದ್ದಾರೆ. ಆದರೆ ಹೊರಗೆ ನಾವು ನೆಟ್​ವರ್ಕ್ ಸಮಸ್ಯೆ ಎದುರಿಸಬೇಕಾಗಿ ಬಂದಿದೆ. ಕೋರ್ಟ್​ನಲ್ಲಿ ಮೊಬೈಲ್​ ಫೋನ್​ ಮೂಲಕ ಕಕ್ಷಿದಾರರ ಜೊತೆ ಮಾತನಾಡಲೂ ಸಾಧ್ಯವಾಗುತ್ತಿಲ್ಲ. ಯಾರನ್ನು ಸಂಪರ್ಕಿಸುವುದಕ್ಕೂ ಸಾಧ್ಯ ಆಗ್ತಿಲ್ಲ. ಇದರಿಂದ ನಮ್ಮ ಕಾರ್ಯವೈಖರಿಗೆ ಬಹಳ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಹೈಕೋರ್ಟ್​ಗೆ ಮಂಗಳೂರು ವಕೀಲರು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

ಈ ಅರ್ಜಿಯನ್ನು ಪರಿಗಣಿಸಿರುವ ಹೈಕೋರ್ಟ್ ನ್ಯಾಯಪೀಠ ಜೈಲಿನಲ್ಲಿ ಅಳವಡಿಸಲಾಗಿರುವ ಜಾಮರ್​ನ ರೇಂಜ್ ಎಷ್ಟಿದೆ, ಯಾವ ರೀತಿ ಕಾರ್ಯ ನಿರ್ವಹಿಸುತ್ತಿದೆ ಎಂಬ ಬಗ್ಗೆ ವರದಿ ನೀಡುವಂತೆ ಹೇಳಿದೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ಮೋಜು ಮಸ್ತಿ: 4 ವಿಚಾರಣಾಧೀನ ಕೈದಿಗಳ ವಿರುದ್ಧ FIR

ಒಟ್ಟಿನಲ್ಲಿ ಖೈದಿಗಳು ಮೊಬೈಲ್ ಬಳಕೆ ಮಾಡದಂತೆ ನೋಡಿಕೊಳ್ಳಲು ಹಾಕಿರುವ ಜಾಮರ್ ಸಾರ್ವಜನಿಕರಿಗೆ ಸಂಕಷ್ಟ ತಂದೊಡ್ಡಿದೆ. ಸದ್ಯ ಜೈಲಿನ ಜಾಮರ್ ಸಮಸ್ಯೆ ವಿರುದ್ಧ ವಕೀಲರ ಸಂಘ ಗಂಭೀರ ಹೋರಾಟಕ್ಕೆ ಮುಂದಾಗಿದ್ದು ಈ ಪ್ರಕರಣ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ