AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್​

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಗ್ರಾಮದಲ್ಲಿ ಜನವರಿ 28 ರಂದು ಪಟಾಕಿ ಗೋಡೌನ್​ ಸ್ಪೋಟಗೊಂಡು ಮೂವರು ಮೃತಪಟ್ಟಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೆ ಮೂವರನ್ನು ಬಂಧಿಸಿದ್ದು, ಇದೀಗ ನಾಲ್ಕನೇ ಆರೋಪಿಯನ್ನು ಬಂಧಿಸಿದ್ದಾರೆ. ನಾಲ್ಕನೇ ಆರೋಪಿ ಹೆಚ್ಚಿನ ಪಟಾಕಿ ರಾಸಾಯನಿಕ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ವೇಣೂರು ಪಟಾಕಿ ಗೋದಾಮು ಸ್ಫೋಟ ಪ್ರಕರಣ: ಮತ್ತೋರ್ವ ಆರೋಪಿ ಅರೆಸ್ಟ್​
ಆರೋಪಿ ಅನಿಲ್​
TV9 Web
| Edited By: |

Updated on: Feb 06, 2024 | 9:33 AM

Share

ಮಂಗಳೂರು, ಫೆಬ್ರವರಿ 06: ವೇಣೂರು ಪಟಾಕಿ ಗೋದಾಮು (Firecrackers godown) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕನೇ ಆರೋಪಿಯನ್ನು ಧರ್ಮಸ್ಥಳ ಠಾಣೆ ಪೊಲೀಸರು (Dharmasthala Police) ಬಂಧಿಸಿದ್ದಾರೆ. ಬೆಂಗಳೂರು (Bengaluru) ಉತ್ತರ ದಿವಾನರ ಪಾಳ್ಯ ನಿವಾಸಿಯಾದ ಅನಿಲ್.ಎಂ ಡೇವಿಡ್ (49) ಬಂಧಿತ ಆರೋಪಿ. ಆರೋಪಿ ಅನಿಲ್ ​ಹೆಚ್ಚಿನ ಪಟಾಕಿ (Firecracker) ರಾಸಾಯನಿಕ ಸರಬರಾಜು ಮಾಡುತ್ತಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆ ವಿವರ

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರ ಸಂಜೆ 5.30 ಸುಮಾರಿಗೆ ಕುಕ್ಕೇಡಿ ಎಂಬಲ್ಲಿ ಪಟಾಕಿ ತಯಾರಿಕಾ ಘಟಕದಲ್ಲಿ ಭೀಕರ ಸ್ಪೋಟವಾಗಿತ್ತು. ಸ್ಪೋಟದ ಸದ್ದು ಕೇಳಿ ಅಕ್ಕ ಪಕ್ಕದವರು ಸ್ಥಳಕ್ಕೆ ಬಂದಾಗ ಅಲ್ಲಿ ಇಡೀ ಗೋಡಾನ್​ಗೆ ಬೆಂಕಿ ಆವರಿಸಿತ್ತು. ಒಂಬತ್ತು ಮಂದಿ ಕೂಲಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದರು. ಈ ಪೈಕಿ ಕೇರಳದ ವರ್ಗೀಸ್ (68), ಹಾಸನದ ಚೇತನ್(25) ಕೇರಳದ ಸ್ವಾಮಿ(60) ಮೃತಪಟ್ಟಿದ್ದರು. ಉಳಿದಂತೆ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ ಮತ್ತು ಕೇಶವ ಕೇರಳ ಗೋಡೌನ್​​ನಲ್ಲಿ ಕೆಲಸ ನಿರ್ವಹಿಸುತ್ತಿವರು. ಮೃತಪಟ್ಟ ಮೂವರು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಕುಚ್ಚೋಡಿ ನಿವಾಸಿ ಬಂಧಿತ ಆರೋಪಿ ಬಶೀರ್ ಎಂಬುವರು 2011-12 ರಲ್ಲಿ ಸ್ಟೋಟಕ ತಯಾರಿಕೆಗೆ ಲೈಸೆನ್ಸ್ ಪಡೆದುಕೊಂಡಿದ್ದರು.

ಇದನ್ನೂ ಓದಿ: ವೇಣೂರು ದುರಂತ: ನಿಯಮ ಮೀರಿ ಗನ್ ಪೌಡರ್ ದಾಸ್ತಾನು ಮಾಡಿದ್ದೇ ಭೀಕರ ಸ್ಫೋಟಕ್ಕೆ ಕಾರಣವಾಯ್ತ?

ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ವೃದ್ಧ ದಂಪತಿ

ಸ್ಪೋಟಗೊಂಡ ಗೋದಾಮಿನ ಪಕ್ಕದಲ್ಲಿ ಮನೆಯೊಂದು ಇದೆ. ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದರು. ರವಿವಾರ (ಜ.28) ಸ್ಪೋಟಗೊಂಡ ಸಮಯದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕೂತು ಚಹಾ ಕುಡಿಯುತ್ತಿದ್ದರು. ಈ ವೇಳೆ ಗೋದಾಮಿನಲ್ಲಿ ಸ್ಪೋಟ ಸಂಭವಿಸಿತ್ತು. ಸ್ಪೋಟದ ತೀರ್ವತೆಗೆ ವೃದ್ಧ ದಂಪತಿಯ ಮನೆ ಕೂಡ ಕುಸಿದು ಬಿದ್ದಿತ್ತು. ಅದೃಷ್ಟವಶಾತ್​​ ದಂಪತಿ ಹೊರಗಡೆ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದರು. ಇನ್ನು ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣವಾಗಿ ಕುಸಿದು ಬಿದ್ದಿದ್ದವು. ಛಾವಣಿಯ ಶೀಟ್​ಗಳು ತುಂಡು ತುಂಡಾಗಿ ಮುರಿದು ಕೆಳಗೆ ಬಿದ್ದಿದ್ದಿವು.

ಐದು ಬಾರಿ ಸ್ಫೋಟ

ಒಟ್ಟು ಐದು ಬಾರಿ ಸ್ಫೋಟ ಸಂಭವಿಸಿತು. ಸ್ಫೋಟ ಆಗುತ್ತಿದ್ದಂತೆಯೇ ಕಣ್ಣು ಮಂಜಾಯಿತು. ಮನೆಯ ಶೀಟ್​ಗಳು ಮುರಿದು ಕೆಳಗೆ ಬಿದ್ದವು. ಮನೆ ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಪರಿಹಾರ‌ ನೀಡಬೇಕು ಎಂದು ವೃದ್ಧ ದಂಪತಿ ಆಗ್ರಹಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ