ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ

ರವಿವಾರ (ಜ.28) ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್​ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದೆ.

ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ
ಆರೋಪಿ ಸಯ್ಯದ್ ಬಶೀರ್, ಬ್ಲಾಸ್ಟ್​ ಆದ ಸ್ಥಳ
Follow us
| Updated By: ವಿವೇಕ ಬಿರಾದಾರ

Updated on:Jan 29, 2024 | 9:59 AM

ಮಂಗಳೂರು, ಜನವರಿ 29: ಪಟಾಕಿ ಗೋದಾಮಿನಲ್ಲಿ (Firecracker Godown) ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು (Belthangadi Police) ಬಂಧಿಸಿದ್ದಾರೆ. ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್​ನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪೊಲೀಸರು ಅಜ್ಞಾತಸ್ಥಳದಲ್ಲಿ ಬಶೀರ್ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ತಡರಾತ್ರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆದಿದೆ.

ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ವೃದ್ಧ ದಂಪತಿ

ಸ್ಪೋಟಗೊಂಡ ಗೋದಾಮಿನ ಪಕ್ಕದಲ್ಲಿ ಮನೆಯೊಂದು ಇದೆ. ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದಾರೆ. ರವಿವಾರ (ಜ.28) ಸ್ಪೋಟಗೊಂಡ ಸಮಯದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕೂತು ಚಹಾ ಕುಡಿಯುತ್ತಿದ್ದರು. ಈ ವೇಳೆ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀರ್ವತೆಗೆ ವೃದ್ಧ ದಂಪತಿಯ ಮನೆ ಕೂಡ ಕುಸಿದು ಬಿದ್ದಿದೆ. ಅದೃಷ್ಟವಶಾತ್​​ ದಂಪತಿ ಹೊರಗಡೆ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಛಾವಣಿಯ ಶೀಟ್​ಗಳು ತುಂಡು ತುಂಡಾಗಿ ಮುರಿದು ಕೆಳಗೆ ಬಿದ್ದಿವೆ.

ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?

ಐದು ಬಾರಿ ಸ್ಫೋಟ

ಒಟ್ಟು ಐದು ಬಾರಿ ಸ್ಫೋಟ ಸಂಭವಿಸಿತು. ಸ್ಫೋಟ ಆಗುತ್ತಿದ್ದಂತೆಯೇ ಕಣ್ಣು ಮಂಜಾಯಿತು. ಮನೆಯ ಶೀಟ್​ಗಳು ಮುರಿದು ಕೆಳಗೆ ಬಿದ್ದವು. ಮನೆ ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಪರಿಹಾರ‌ ನೀಡಬೇಕು ಎಂದು ವೃದ್ಧ ದಂಪತಿ ಆಗ್ರಹಿಸಿದ್ದಾರೆ.

ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ: ಸ್ಥಳೀಯರ ಅನುಮಾನ

ಕಳೆದ ಎರಡು ತಿಂಗಳ ಹಿಂದೆ 9 ಜನ ಕಾರ್ಮಿಕರು ಬಂದು ಕೆಲಸ ಮಾಡುತ್ತಿದ್ದರು. ಯಾರನ್ನೂ ಗೋದಾಮಿನ ಹತ್ತಿರ ಬಿಡದೆ, ರೋಡ್​ನಲ್ಲಿ ವಾಚ್ ಮಾಡುತ್ತಾ ಕೆಲಸ ಮಾಡುತ್ತಿದ್ದರು. ಇಲ್ಲಿ ಪಟಾಕಿ ತಯಾರಿಸುವುದಾಗಿ ಬಶೀರ್ ಲೈಸೆನ್ಸ್ ತೆಗೆದುಕೊಂಡಿದ್ದನು. ಅದರೆ ಇಲ್ಲಿ ಬಾಂಬ್ ತಯಾರು ಮಾಡುತ್ತಿದ್ದರು ಅಂತ ಸ್ಥಳೀಯರು ಅನುಮಾನ ವ್ಯಕ್ತ ಪಡಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಸರಿಯಾಗಿ ಕೆಲಸ ನಡೆಯುತ್ತಿತ್ತು. ಆದರೆ ಎರಡು ತಿಂಗಳಿಂದ ಬೇರೆ ಏನೋ ನಡೆಯುತ್ತಿದೆ. ಇಲ್ಲಿ ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ. ಸುತ್ತಾಮುತ್ತಾ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಮಕ್ಕಳು ಊಟ ಮಾಡುತ್ತಿಲ್ಲ. ಇನ್ಮುಂದೆ ಇಲ್ಲಿ ಪಟಾಕಿ ತಯಾರಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Mon, 29 January 24

ತಾಜಾ ಸುದ್ದಿ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ