AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ

ರವಿವಾರ (ಜ.28) ರಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಪಟಾಕಿ ಗೋದಾಮಿನಲ್ಲಿ ನಡೆದ ಸ್ಫೋಟದಲ್ಲಿ ಮೂವರು ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಆರೋಪಿ ಸಯ್ಯದ್​ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದೆ.

ಮಂಗಳೂರು: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ, ಆರೋಪಿ ಸಯ್ಯದ್ ಬಶೀರ್ ಬಂಧನ
ಆರೋಪಿ ಸಯ್ಯದ್ ಬಶೀರ್, ಬ್ಲಾಸ್ಟ್​ ಆದ ಸ್ಥಳ
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on:Jan 29, 2024 | 9:59 AM

Share

ಮಂಗಳೂರು, ಜನವರಿ 29: ಪಟಾಕಿ ಗೋದಾಮಿನಲ್ಲಿ (Firecracker Godown) ಸಂಭವಿಸಿದ ಸ್ಫೋಟದಿಂದ ಮೂವರು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸಯ್ಯದ್ ಬಶೀರ್​ನನ್ನು ಬೆಳ್ತಂಗಡಿ ಪೊಲೀಸರು (Belthangadi Police) ಬಂಧಿಸಿದ್ದಾರೆ. ವೇಣೂರಿನಿಂದ ಪರಾರಿಯಾಗುತ್ತಿದ್ದಾಗ ಸುಳ್ಯದಲ್ಲಿ ಬಶೀರ್​ನನ್ನು ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಪೊಲೀಸರು ಅಜ್ಞಾತಸ್ಥಳದಲ್ಲಿ ಬಶೀರ್ ವಿಚಾರಣೆ ನಡೆಸುತ್ತಿದ್ದಾರೆ. ಇನ್ನು ಸ್ಥಳಕ್ಕೆ ತಡರಾತ್ರಿ ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್ ಭೇಟಿ ನೀಡಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರೆದಿದೆ.

ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾದ ವೃದ್ಧ ದಂಪತಿ

ಸ್ಪೋಟಗೊಂಡ ಗೋದಾಮಿನ ಪಕ್ಕದಲ್ಲಿ ಮನೆಯೊಂದು ಇದೆ. ಈ ಮನೆಯಲ್ಲಿ ವೃದ್ಧ ದಂಪತಿ ವಾಸವಾಗಿದ್ದಾರೆ. ರವಿವಾರ (ಜ.28) ಸ್ಪೋಟಗೊಂಡ ಸಮಯದಲ್ಲಿ ವೃದ್ಧ ದಂಪತಿ ಮನೆಯ ಹೊರಗಡೆ ಕೂತು ಚಹಾ ಕುಡಿಯುತ್ತಿದ್ದರು. ಈ ವೇಳೆ ಗೋದಾಮಿನಲ್ಲಿ ಸ್ಪೋಟ ಸಂಭವಿಸಿದೆ. ಸ್ಪೋಟದ ತೀರ್ವತೆಗೆ ವೃದ್ಧ ದಂಪತಿಯ ಮನೆ ಕೂಡ ಕುಸಿದು ಬಿದ್ದಿದೆ. ಅದೃಷ್ಟವಶಾತ್​​ ದಂಪತಿ ಹೊರಗಡೆ ಇದ್ದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಸ್ಫೋಟದ ತೀರ್ವತೆಗೆ ಸುತ್ತಮುತ್ತಲಿನ ಮನೆಗಳಿಗೆ ಹಾನಿಯಾಗಿದ್ದು, ಸಂಪೂರ್ಣವಾಗಿ ಕುಸಿದು ಬಿದ್ದಿವೆ. ಛಾವಣಿಯ ಶೀಟ್​ಗಳು ತುಂಡು ತುಂಡಾಗಿ ಮುರಿದು ಕೆಳಗೆ ಬಿದ್ದಿವೆ.

ಇದನ್ನೂ ಓದಿ: ವೇಣೂರಿನಲ್ಲಿ ಪಟಾಕಿ ಸ್ಫೋಟ ಪ್ರಕರಣ: ಈ ಗೋಡಾನ್​ನಲ್ಲಿ ತಯಾರಾಗುತ್ತಿತ್ತಾ ಗ್ರೆನೇಡ್?

ಐದು ಬಾರಿ ಸ್ಫೋಟ

ಒಟ್ಟು ಐದು ಬಾರಿ ಸ್ಫೋಟ ಸಂಭವಿಸಿತು. ಸ್ಫೋಟ ಆಗುತ್ತಿದ್ದಂತೆಯೇ ಕಣ್ಣು ಮಂಜಾಯಿತು. ಮನೆಯ ಶೀಟ್​ಗಳು ಮುರಿದು ಕೆಳಗೆ ಬಿದ್ದವು. ಮನೆ ಜಖಂಗೊಂಡಿದೆ. ಈ ಹಿನ್ನೆಲೆಯಲ್ಲಿ ಸರಕಾರ ಪರಿಹಾರ‌ ನೀಡಬೇಕು ಎಂದು ವೃದ್ಧ ದಂಪತಿ ಆಗ್ರಹಿಸಿದ್ದಾರೆ.

ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ: ಸ್ಥಳೀಯರ ಅನುಮಾನ

ಕಳೆದ ಎರಡು ತಿಂಗಳ ಹಿಂದೆ 9 ಜನ ಕಾರ್ಮಿಕರು ಬಂದು ಕೆಲಸ ಮಾಡುತ್ತಿದ್ದರು. ಯಾರನ್ನೂ ಗೋದಾಮಿನ ಹತ್ತಿರ ಬಿಡದೆ, ರೋಡ್​ನಲ್ಲಿ ವಾಚ್ ಮಾಡುತ್ತಾ ಕೆಲಸ ಮಾಡುತ್ತಿದ್ದರು. ಇಲ್ಲಿ ಪಟಾಕಿ ತಯಾರಿಸುವುದಾಗಿ ಬಶೀರ್ ಲೈಸೆನ್ಸ್ ತೆಗೆದುಕೊಂಡಿದ್ದನು. ಅದರೆ ಇಲ್ಲಿ ಬಾಂಬ್ ತಯಾರು ಮಾಡುತ್ತಿದ್ದರು ಅಂತ ಸ್ಥಳೀಯರು ಅನುಮಾನ ವ್ಯಕ್ತ ಪಡಿಸಿದ್ದಾರೆ.

ಕಳೆದ ಎರಡು ತಿಂಗಳ ಹಿಂದೆ ಸರಿಯಾಗಿ ಕೆಲಸ ನಡೆಯುತ್ತಿತ್ತು. ಆದರೆ ಎರಡು ತಿಂಗಳಿಂದ ಬೇರೆ ಏನೋ ನಡೆಯುತ್ತಿದೆ. ಇಲ್ಲಿ ರವಿವಾರ ಯಾವುದೋ ಟ್ರಯಲ್ ಬ್ಲಾಸ್ಟ್ ನಡೆದಿದೆ. ಸುತ್ತಾಮುತ್ತಾ ಸಾಕಷ್ಟು ಮನೆಗಳಿಗೆ ಹಾನಿಯಾಗಿದೆ. ಮನೆಯಲ್ಲಿ ಮಕ್ಕಳು ಊಟ ಮಾಡುತ್ತಿಲ್ಲ. ಇನ್ಮುಂದೆ ಇಲ್ಲಿ ಪಟಾಕಿ ತಯಾರಿಕೆ ಮಾಡುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 9:54 am, Mon, 29 January 24

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್