Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಒಂದೇ ಕುಟುಂಬದ ಐದು ತಲೆಮಾರು

ಇತ್ತೀಚಿನ ದಿನಗಳಲ್ಲಿ ನಾಲ್ಕು ತಲೆಮಾರು ಕಾಣುವಂತದ್ದೇ ವಿಶೇಷವಾಗಿದ್ದರೇ, ಮಂಗಳೂರು ಮೂಲದ ಅವಿಭಕ್ತ ಕುಟುಂಬವು ಐದು ತಲೆಮಾರು ಕಂಡಿದೆ. ಹೌದು ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ.

ಮಂಗಳೂರು: ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಒಂದೇ ಕುಟುಂಬದ ಐದು ತಲೆಮಾರು
ಐದು ತಲೆಮಾರಿನ ಕುಟುಂಬ
Follow us
ವಿವೇಕ ಬಿರಾದಾರ
|

Updated on: Aug 08, 2023 | 10:19 AM

ಮಂಗಳೂರು: ಇತ್ತೀಚಿನ ದಿನಗಳಲ್ಲಿ ನಾಲ್ಕು ತಲೆಮಾರು ಕಾಣುವಂತದ್ದೇ ವಿಶೇಷವಾಗಿದ್ದರೇ, ಮಂಗಳೂರು (Mangaluru) ಮೂಲದ ಅವಿಭಕ್ತ ಕುಟುಂಬವು (Joint Family) ಐದು ತಲೆಮಾರು ಕಂಡಿದೆ. ಹೌದು ಈ ಕುಟುಂಬದ ಮುತ್ತಜ್ಜಿಯ ವಯಸ್ಸು 103, ಅವರ ಮರಿಮೊಮ್ಮಗಳಿಗೆ ಮೂರು ವರ್ಷ. ಇದೀಗ ಈ ಪುಟ್ಟ ಬಾಲಕಿ ಸೇರಿಂದತೆ ಐದು ತಲೆಮಾರು ಮಹಿಳೆಯರು ಇತ್ತೀಚಿಗೆ ಅಂಚೆ ಕಚೇರಿಯಲ್ಲಿ ಮಹಿಳಾ ಸಮ್ಮಾನ್ (MSSC) ಅಡಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ.

ಆಗಸ್ಟ್ 3 ರಂದು ಮಂಗಳೂರು ಸಮೀಪದ ಕಿನ್ನಿಗೋಳಿ ಉಪ ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ತೆರೆದ ಭಾರತದ ಏಕೈಕ ಐದು ತಲೆಮಾರಿನ ಕುಟುಂಬ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕುಪ್ಪೆಪದವು ನಿವಾಸಿ ಸೀತಾ ಪೂಜಾರ್ತಿ (103), ಕೈಕಂಬದಲ್ಲಿ ವಾಸವಾಗಿರುವ ಅವರ ಪುತ್ರಿ ಸುಂದರಿ ಪೂಜಾರ್ತಿ (72), ಉಲ್ಲೈ ಬೇತು ನಿವಾಸಿಯಾಗಿರುವ ಯಮುನಾ ಪೂರ್ಜಾರ್ತಿ (50) ಸೀತಾ ಪೂಜಾರ್ತಿ ಅವರ ಮೊಮ್ಮಗಳು. ಸೀತಾ ಪೂಜಾರ್ತಿ ಅವರ ಮರಿ ಮೊಮ್ಮಗಳು ಪವಿತ್ರಾ ವಿ ಅಮೀನ್ (33) ಮತ್ತು ಅವರ ಗಿರಿ ಮೊಮ್ಮಗಳು ದಿತ್ಯಾ ವಿ ಅಮೀನ್ (3). ಇವರು ಆರ್ಥಿಕ ಸಬಲೀಕರಣದ ಉದ್ದೇಶದಿಂದ ಎಮ್​ಎಸ್​ಎಸ್​ಸಿ ಅಡಿಯಲ್ಲಿ ಉಳಿತಾಯ ಖಾತೆಗಳನ್ನು ತೆರೆದಿದ್ದಾರೆ.

ಈ ಬಗ್ಗೆ ಅಂಚೆ ಕಛೇರಿ ಸಿಬ್ಬಂದಿ ಕೆ ರಘುನಾಥ್ ಕಾಮತ್ ಮಾತನಾಡಿ ಮನೆ ಮನೆಗೆ ತೆರಳಿ ನಾನು ಈ ಯೋಜನೆ ಬಗ್ಗೆ ತಿಳಿಸುತ್ತಿದ್ದೇನೆ. ಪವಿತ್ರಾ ಅವರ ಮನೆಗೆ ಕೂಡ ಹೋಗಿ ಯೋಜನೆಯ ಪ್ರಯೋಜನಗಳ ಬಗ್ಗೆ ತಿಳಿಸಿದೆ. ಆಗ ಅವರು ಖಾತೆ ತೆರೆಯಲು ನಿರ್ಧರಿಸಿದರು. ಅಲ್ಲದೇ ತಮ್ಮ ಕುಟುಂಬದ ಇತರ ಮಹಿಳೆಯರ ಬಗ್ಗೆಯೂ ತಿಳಿಸಿ ಮತ್ತು ಅವರ ಎಲ್ಲ ವಿವರಗಳನ್ನು ನನಗೆ ಕೊಟ್ಟರು. ಇದೀಗ ಇವರ ಖಾತೆಗಳನ್ನು ತೆರೆದಿದ್ದೇನೆ ಎಂದು ತಿಳಿಸಿದರು.

ಇದನ್ನೂ ಓದಿ: ಮಂಗಳೂರು: ಪಕ್ಕದ ಮನೆಯ ಬಾತ್​ರೂಮ್​ನಲ್ಲಿ ಮೊಬೈಲ್​ ಇಟ್ಟು ಯುವತಿಯ ಅಣ್ಣನ ಕೈ ಸಿಕ್ಕಿಬಿದ್ದ ಯುವಕ

ಹೆಚ್ಚಿನ ಬಡ್ಡಿದರ ಮತ್ತು ಉಳಿತಾಯದ ಬಗ್ಗೆ ನಾನು ಕೇಳಿದ ನಂತರ, ನನ್ನ ಕುಟುಂಬದ ಎಲ್ಲ ಮಹಿಳೆಯರು ಯೋಜನೆಯ ಲಾಭ ಪಡೆಯಬೇಕೆಂದು ನಾನು ಬಯಸಿದೆ. ಅಂಚೆ ನೌಕರರು 40 ಕಿಮೀ ದೂರದಲ್ಲಿರುವ ನನ್ನ ಮುತ್ತಜ್ಜಿಯನ್ನು ಅಂಚೆ ಕಚೇರಿಗೆ ಕರೆತರಲು ನಮಗೆ ಸಹಾಯ ಮಾಡಿದರು. ಎಂದು ಪವಿತ್ರಾ ಹೇಳಿದರು.

ಮಂಗಳೂರು ವಿಭಾಗದ ಹಿರಿಯ ಅಂಚೆ ಅಧೀಕ್ಷಕ ಸುಧಾಕರ ಮಲ್ಯ ಮಾತನಾಡಿ, ಎಂಎಸ್‌ಎಸ್‌ಸಿ ಮೂಲಕ ಭಾರತ ಅಂಚೆ ಒಂದೇ ಬಾರಿಗೆ ಐದು ತಲೆಮಾರುಗಳನ್ನು ತಲುಪಿದೆ. ಉಳಿತಾಯ ಖಾತೆ ತೆರೆಯುವಂತೆ ಮನವೊಲಿಸಿದ ರಘುನಾಥ್ ಕಾಮತ್ ಅವರಿಗೆ ಇದರ ಶ್ರೇಯ ಸಲ್ಲುತ್ತದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
ಟಿವಿ9 ನೆಟ್​ವರ್ಕ್ ಜಾಗತಿಕ ಪ್ರೇಕ್ಷಕರನ್ನು ಸೃಷ್ಟಿಸುತ್ತಿದೆ; ಪಿಎಂ ಮೋದಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಯುವಕರು, ಮಹಿಳೆಯರು, ಭಾರತೀಯ ವಲಸಿಗರ ಮೇಲೆ ಮೋದಿ ಗಮನ; ಬರುಣ್ ದಾಸ್
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ
ಚೆನ್ನೈನಲ್ಲೂ ಕೊಹ್ಲಿ ಫ್ಯಾನ್ಸ್​ದೇ ಹವಾ; ವಿಡಿಯೋ ನೋಡಿ