Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ, ಹಳಿ ಸುತ್ತಮುತ್ತ ಸಾರ್ವಜನಿಕರಿಗೆ ನಿರ್ಬಂಧ

ರಸ್ತೆ, ಹೆದ್ದಾರಿಗಳಲ್ಲಿ ಟ್ಯಾಂಕರ್​ಗಳು ಸಂಚರಿಸುವಾಗ ಗ್ಯಾಸ್ ಸೋರಿಕೆಯಾದ ಪ್ರಕರಣಗಳು ಸಾಮಾನ್ಯವಾಗಿದೆ. ಆದರೆ ರೈಲಿನಲ್ಲಿ ಸಾಗುವ ಟ್ಯಾಂಕರ್​ಗಳಲ್ಲಿ ಸೋರಿಕೆಯಾದ ಪ್ರಕರಣ ಕೇಳಿದ್ದೀರಾ? ಇಂತಹ ಪ್ರಕರಣವೊಂದು ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರು: ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ, ಹಳಿ ಸುತ್ತಮುತ್ತ ಸಾರ್ವಜನಿಕರಿಗೆ ನಿರ್ಬಂಧ
ರೈಲಿನಲ್ಲಿ ಸಾಗಿಸುತ್ತಿದ್ದ ಟ್ಯಾಂಕರ್​ಗಳಲ್ಲಿ ಗ್ಯಾಸ್ ಸೋರಿಕೆ
Follow us
Rakesh Nayak Manchi
|

Updated on:Mar 10, 2023 | 8:27 PM

ಮಂಗಳೂರು: ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್​ನಿಂದ (HPCL) ಟ್ಯಾಂಕರ್​ಗಳಲ್ಲಿ ಗ್ಯಾಸ್ ತುಂಬಿಸಿ ರೈಲು ಮೂಲಕ ಕಳುಹಿಸಲಾಗಿತ್ತು. ಆದರೆ ಗ್ಯಾಸ್ ಸೋರಿಕೆ (Gas Leakage) ಶಂಕೆ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ 7 ಕಿ.ಮೀ ದೂರ ತೆರಳಿದ ರೈಲು ವಾಪಸ್ ಹೆಚ್​​ಪಿಸಿಎಲ್​ಗೆ ಆಗಮಿಸಿದೆ. ಮಂಗಳೂರಿನಿಂದ ಸರಕು ಸಾಗಣೆ ರೈಲಿನಲ್ಲಿ ಗ್ಯಾಸ್ ತುಂಬಿದ ಟ್ಯಾಂಕರ್​ಗಳನ್ನು ಸಾಗಿಸಲಾಗುತ್ತಿತ್ತು. ಆದರೆ ಕೆಲವೊಂದು ಟ್ಯಾಂಕರ್​ಗಳಲ್ಲಿ ದಾರಿ ಮಧ್ಯೆ ಗ್ಯಾಸ್ ಸೋರಿಕೆಯಾಗಿರುವ ಶಂಕೆ ವ್ಯಕ್ತವಾದ ಹಿನ್ನಲೆ ತಕ್ಷಣ ಹೆಚ್​ಪಿಸಿಎಲ್​ಗೆ ಹಿಂತಿರುಗಿಸಲಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ.

ಪ್ರಯಾಣಿಸಿದ 7 ಕಿಲೋ ಮೀಟರ್ ದಾರಿ ಮಧ್ಯೆ ಗ್ಯಾಸ್ ಸೋರಿಕೆಯಾದ ಹಿನ್ನಲೆ ಜೋಕಟ್ಟೆ ಬಳಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು, ಸುದ್ದಿ ತಿಳಿದ ಸ್ಥಳೀಯರು ಆತಂಕಗೊಂಡಿದ್ದಾರೆ. ಮುಂಜಾಗೃತಾ ಕ್ರಮವಾಗಿ ರೈಲ್ವೇ ಗೇಟ್ ಬಳಿ ಅಗ್ನಿಶಾಮಕ ವಾಹನ ನಿಯೋಜನೆ ಮಾಡಲಾಗಿದ್ದು, ರೈಲ್ವೆ ಹಳಿ ಸುತ್ತಮುತ್ತ ಸಾರ್ವಜನಿಕರು ಬಾರದಂತೆ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆ: ಪಶ್ಚಿಮಘಟ್ಟದಲ್ಲಿ ಭೂಕುಸಿತದ ಭೀತಿ, ಪ್ರಲ್ಹಾದ್ ಜೋಶಿ ಸ್ಪಷ್ಟನೆ

ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ನಡುರಸ್ತೆಯಲ್ಲೇ ಕಾರು ಹೊತ್ತಿ ಉರಿದ ಘಟನೆ ನಗರದ ನಾಯಂಡಹಳ್ಳಿ ಮೆಟ್ರೋ ರೈಲು ನಿಲ್ದಾಣದ ಬಳಿ ನಡೆದಿದೆ. ಸಂಚರಿಸುತ್ತಿದ್ದ ಕಾರಿನ ಇಂಜಿನ್​ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಎಚ್ಚೆತ್ತ ಚಾಲಕ ಕಾರು ನಿಲ್ಲಿಸಿ ಹೊರಬಂದಿದ್ದು ಘಟನೆಯಲ್ಲಿ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅರ್ಧ ಗಂಟೆಗಳ ಕಾಲ ಕಾರಿನ ಮುಂಭಾಗ ಸಂಪೂರ್ಣ ದಹಿಸಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Fri, 10 March 23

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ