AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂಗಳೂರಿನಲ್ಲಿ ಪ್ರೇತ ಉಚ್ಚಾಟನೆಗಾಗಿ ರಸ್ತೆ ಸಂಚಾರ ಬಂದ್: ಕಾರಣವೇನು?

ಮಂಗಳೂರಿನ ಕೊಟ್ಟಾರದಲ್ಲಿ ಬ್ರಹ್ಮರಾಕ್ಷಸ ಮತ್ತು ಇತರ ಪ್ರೇತಗಳ ಉಚ್ಚಾಟನಾ ಕಾರ್ಯಕ್ರಮದಿಂದಾಗಿ ರಾತ್ರಿ 10 ರಿಂದ ಬೆಳಿಗ್ಗೆ 3 ರವರೆಗೆ ರಸ್ತೆ ಸಂಚಾರವನ್ನು ಬಂದ್​ ಮಾಡಲಾಗಿದೆ. ದೈವಸ್ಥಾನದ ಜೀರ್ಣೋದ್ಧಾರಕ್ಕೂ ಮುಂಚೆ ಈ ಅಗತ್ಯ ಕಂಡುಬಂದಿದೆ ಎಂದು ಆಯೋಜಕರು ಹೇಳಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಂಗಳೂರಿನಲ್ಲಿ ಪ್ರೇತ ಉಚ್ಚಾಟನೆಗಾಗಿ ರಸ್ತೆ ಸಂಚಾರ ಬಂದ್: ಕಾರಣವೇನು?
ಮಂಗಳೂರಿನಲ್ಲಿ ಪ್ರೇತ ಉಚ್ಚಾಟನೆಗಾಗಿ ರಸ್ತೆ ಸಂಚಾರ ಬಂದ್: ಕಾರಣವೇನು?
ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jan 29, 2025 | 8:09 PM

Share

ಮಂಗಳೂರು, ಜನವರಿ 29: ನಗರದಲ್ಲಿ ಪ್ರೇತ (Ghost) ಉಚ್ಚಾಟನೆ ಹಿನ್ನೆಲೆ ರಸ್ತೆ ಸಂಚಾರ ಬಂದ್​ ಮಾಡಿರುವಂತಹ ಘಟನೆ ನಡೆದಿದೆ. ಕೊಟ್ಟಾರದ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ, ರಣಕಾಳಿ ಹಾಗೂ ಬ್ರಹ್ಮರಾಕ್ಷಸ ಅನ್ಯಪ್ರೇತ ಉಚ್ಚಾಟನೆ ಹಿನ್ನೆಲೆ ಕೊಟ್ಟಾರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮಾಡದಂತೆ ಬ್ಯಾನರ್ ಅಳವಡಿಸಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 3 ಗಂಟೆಯವರೆಗೆ ಜನರು ಓಡಾಡದಂತೆ ಮನವಿ ಮಾಡಲಾಗಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೈವ ಆರಾಧಕ ಪ್ರಜ್ವಲ್ ಹೇಳಿದ್ದಿಷ್ಟು

ಈ ಬಗ್ಗೆ ದೈವ ಆರಾಧಕರಾದ ಪ್ರಜ್ವಲ್ ಟಿವಿ9 ಗೆ ಹೇಳಿಕೆ ನೀಡಿದ್ದು, ದೈವಸ್ಥಾನ ಜೀರ್ಣೋದ್ಧಾರ ಮಾಡಲು ತಾಂಬೂಲ ಪ್ರಶ್ನೆ ಕೇಳಲಾಯಿತು. ಆಗ ಇಲ್ಲಿ ಬ್ರಹ್ಮರಾಕ್ಷಸ, ಪ್ರೇತಾತ್ಮಗಳಿರುವುದು ಕಂಡು ಬಂದಿತ್ತು. ಜೀರ್ಣೋದ್ಧಾರಕ್ಕೂ ಮೊದಲು ಉಚ್ಚಾಟನೆ ಆಗಬೇಕು ಅಂತಾ ಬಂದಿತ್ತು ಎಂದಿದ್ದಾರೆ.

ಇದನ್ನೂ ಓದಿ: ದಕ್ಷಿಣಕನ್ನಡ ಜಿಲ್ಲೆ ಕುಂಪಲ ಗ್ರಾಮದಲ್ಲಿ ಸರಣಿ ಆತ್ಮಹತ್ಯೆ, ಅಪಘಾತಗಳಲ್ಲಿ ಸಾವು: ದೈವದ ಮುನಿಸೇ ಕಾರಣವಾಯ್ತಾ?

ಇಂದು ಅಮವಾಸ್ಯೆ ರಾತ್ರಿ 12 ಗಂಟೆ ವೇಳೆಗೆ ಪ್ರೇತಾತ್ಮ ಉಚ್ಚಾಟಣೆ ನಡೆಯಲಿದೆ. ಆಗ ಸುತ್ತಮುತ್ತ ಉಚ್ಚಾಟನೆ ವಿಧಿ ವಿಧಾನ ನಡೆಯುತ್ತೆ. ಹಾಗಾಗಿ ಈ ರೀತಿ ಮನವಿ ಮಾಡಿ ಬ್ಯಾನರ್ ಹಾಕಲಾಗಿದೆ ಎಂದು ಹೇಳಿದ್ದಾರೆ.

ಮಂಗಳೂರು ನಗರದ ಕೊಟ್ಟಾರ ಬಳಿ ಬ್ಯಾನರ್ ಅಳವಡಿಸಿದ್ದು, ಪೂಜಾ ವಿಧಿ ನೋಡಲು ರಾತ್ರಿ ಹತ್ತು ಗಂಟೆಯ ಒಳಗೆ ದೈವಸ್ಥಾನ ಪ್ರವೇಶ ಮಾಡಲು ಮನವಿ ಮಾಡಲಾಗಿದೆ. ಪ್ರೇತ ಉಚ್ಚಾಟನೆ ವೇಳೆ ಜನ ಸಂಚಾರವಾದರೆ ತೊಂದರೆಯಾಗುವ ಸಾಧ್ಯತೆ ಇದೆ ಎನ್ನುತ್ತಾರೆ ಆಯೋಜಕರು.

ಇದನ್ನೂ ಓದಿ: ಮಂಗಳೂರು: ರಥೋತ್ಸವದ ವೇಳೆ ವಿಟ್ಲ ಪಂಚಲಿಂಗೇಶ್ವರ ದೇವರ ಮೂರ್ತಿ, ಅರ್ಚಕರಿಗೆ ಬಡಿದ ಡ್ರೋನ್​

ಮಂಗಳೂರು ಪೊಲೀಸ್ ಇಲಾಖೆಗೂ ಆಯೋಜಕರು ಮನವಿ ಮಾಡಿದ್ದಾರೆ. ಸುಮಾರು 3-4 ಕಿಮೀ ರಸ್ತೆಯಲ್ಲಿ ವಾಹನ ಹಾಗೂ ಜನ ಸಂಚಾರವನ್ನು ನಿಷೇಧಿಸಿದ್ದು, ಅಂದರೆ ಸುಮಾರು ಐದು ಗಂಟೆಗಳ ಕಾಲ ಮಂಗಳೂರಿನ ಪ್ರಮುಖ ರಸ್ತೆ ಕೊಟ್ಟಾರ ಬಂದ್ ಆಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Pruthviraj
Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?