AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ಹೌತಿ ಬಂಡುಕೋರರ ದಾಳಿ: ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ಪೆಟ್ಟು

ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ಹೌತಿ ಬಂಡುಕೋರರ ದಾಳಿ ಹಿನ್ನೆಲೆ ಕರಾವಳಿ ಗೋಡಂಬಿ ಉದ್ಯಮದ ಮೇಲೆ ಪರಿಣಾಮ ಬೀರಿದೆ. ಆಮದು, ರಫ್ತನ್ನು ನಂಬಿಕೊಂಡ ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ಸದ್ಯ ಪೆಟ್ಟು ಬಿದ್ದಿದೆ. ಹಡಗಿನ ಸಂಚಾರದಲ್ಲಿ ವ್ಯತ್ಯಯ ಆಗಿ ಆಫ್ರಿಕಾದಿಂದ ಕಚ್ಚಾ ಗೋಡಂಬಿ ಬಾರದೆ ತೊಂದರೆ ಉಂಟಾಗಿದೆ. ಹೀಗಾಗಿ ಕಚ್ಚಾ ಗೋಡಂಬಿ ಪೂರೈಕೆಯಾಗದೆ ಫ್ಯಾಕ್ಟರಿಗಳು ಬಂದ್ ಆಗುವ ಆತಂಕ ಎದುರಾಗಿದೆ.

ಕೆಂಪು ಸಮುದ್ರದಲ್ಲಿ ಹಡಗುಗಳ ಮೇಲೆ ಹೌತಿ ಬಂಡುಕೋರರ ದಾಳಿ: ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ಪೆಟ್ಟು
ಗೋಡಂಬಿ
ಅಶೋಕ್​ ಪೂಜಾರಿ, ಮಂಗಳೂರು
| Edited By: |

Updated on: Jan 24, 2024 | 8:07 PM

Share

ಮಂಗಳೂರು, ಜನವರಿ 24: ಇಸ್ರೇಲ್ ಹಮಾಸ್ (Hamas) ಉಗ್ರರ ಮೇಲೆ ತನ್ನ ದಾಳಿಯನ್ನು ಮುಂದುವರಿಸಿದೆ. ಇದಕ್ಕೆ ಪ್ರತಿಯಾಗಿ ಯೆಮನ್ ದೇಶದ ಹೌತಿ ಬಂಡುಕೋರರು ಇಸ್ರೇಲ್ ಪರ ನಿಂತಿರುವ ಹಡಗುಗಳನ್ನು ಟಾರ್ಗೆಟ್ ಮಾಡಿ ದಾಳಿ ಮಾಡುತ್ತಿದ್ದಾರೆ. ಇದರ ನೇರ ಪರಿಣಾಮ ಆಮದು ಮತ್ತು ರಫ್ತಿನ ಮೇಲಾಗುತ್ತಿದ್ದು ರಾಜ್ಯ ಕರಾವಳಿಯ ಗೋಡಂಬಿ ಉದ್ಯಮವು ತೂಗುಗತ್ತಿಯಲ್ಲಿದೆ. ಕೆಂಪು ಸಮುದ್ರ ಹಾಗೂ ಸೂಯೆಜ್ ಕಾಲುವೆಯಲ್ಲಿ ಹೌತಿ ಬಂಡುಕೋರರು ಹಡಗುಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಇಸ್ರೇಲ್ ಪರವಾಗಿ ನಿಂತ ದೇಶದ ಸರಕು ಸಾಗಾಣೆ ಹಡಗುಗಳು ಸಾಗುವಾಗ ದಾಳಿ ಮಾಡ್ತಿದ್ದಾರೆ. ಇದರಿಂದ ಆಮದು ಮತ್ತು ರಫ್ತನ್ನು ನಂಬಿಕೊಂಡ ಮಂಗಳೂರಿನ ಗೋಡಂಬಿ ಉದ್ಯಮಕ್ಕೆ ದೊಡ್ಡ ಮಟ್ಟಿನ ಹೊಡೆತ ಬೀಳುತ್ತಿದೆ.

ರಾಜ್ಯದಲ್ಲಿ ಸುಮಾರು 400ಕ್ಕೂ ಹೆಚ್ಚು ಗೇರುಬೀಜ ಸಂಸ್ಕರಣಾ ಘಟಕಗಳಿವೆ. ಅದರಲ್ಲಿ 320ಕ್ಕೂ ಹೆಚ್ಚು ಫ್ಯಾಕ್ಟರಿಗಳು ಕರಾವಳಿಯಲ್ಲಿದೆ. ಈ ಫಾಕ್ಟರಿಗಳಿಗೆ ಹೆಚ್ಚಾಗಿ ಕಚ್ಚಾ ಗೇರುಬೀಜ ಬರುವುದು ಆಫ್ರಿಕಾ ಖಂಡದಿಂದ. ಆದರೆ ಇದೀಗ ಹೌತಿ ಬಂಡುಕೋರರ ದಾಳಿಯಿಂದ ಹಡಗಿನ ಸಂಚಾರದಲ್ಲಿ ವ್ಯತ್ಯಯ ಆಗಿ ಆಫ್ರಿಕಾದಿಂದ ಕಚ್ಚಾ ಗೋಡಂಬಿ ಬಾರದೆ ತೊಂದರೆಯಾಗುತ್ತಿದೆ.

ಗೇರು ಉದ್ಯಮಕ್ಕೆ ತಲೆನೋವಾದ ದರ ಏರಿಕೆ

ಸುತ್ತು ಬಳಸಿ ಹೆಚ್ಚುವರಿ 6,300 ನಾಟಿಕಲ್‌ ಮೈಲುಗಳ ಸಂಚಾರ ಮಾಡಿ ಬಂದರೆ 15 ಹೆಚ್ಚುವರಿ ದಿನಗಳ ಪ್ರಯಾಣ ಮಾಡಬೇಕಾಗಿದೆ. ಇದರ ಜೊತೆ ಪ್ರತಿ ಕಂಟೇನರ್‌ ಸಾಗಾಟ ದರ 2,000 ಡಾಲರ್‌ಗಿಂತ ಹೆಚ್ಚಾಗಿದ್ದು, ಈ ಏರಿಕೆ ಗೇರು ಉದ್ಯಮಕ್ಕೆ ತಲೆನೋವಾಗಿದೆ.

ಇದನ್ನೂ ಓದಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹಾಲಿನ ಕೊರತೆ: ದಿನವೊಂದಕ್ಕೆ ಒಂದೂವರೆ ಲಕ್ಷ ಲೀಟರ್ ಅಭಾವ

ಆಮದು ಮಾಡಿದ ಗೇರುಬೀಜಗಳನ್ನು ಫಾಕ್ಟರಿಯಲ್ಲಿ ವಿವಿಧ ಹಂತಗಳ ಮೂಲಕ ಸಂಸ್ಕರಿಸಲಾಗುತ್ತದೆ. ಸಂಸ್ಕರಿಸಿದ ಗೋಡಂಬಿಯನ್ನು ಯುರೋಪ್, ಅಮೇರಿಕಾ ಸೇರಿದಂತೆ ಬೇರೆ ಬೇರೆ ದೇಶಗಳಿಗೆ ಹಡಗಿನ ಮೂಲಕವೇ ರಫ್ತು ಮಾಡಲಾಗುತ್ತದೆ. ಆದರೆ ಇದೀಗ ಆಮದಿನ ಜೊತೆ ರಫ್ತು ಮಾಡುವುದಕ್ಕೂ ಕಷ್ಟ ಸಾಧ್ಯವಾಗುತ್ತಿದೆ.

ರಾಜ್ಯದಲ್ಲಿ 3 ಲಕ್ಷ ಟನ್‌ ಗೇರುಬೀಜಕ್ಕೆ ಬೇಡಿಕೆ

ಗೋಡಂಬಿ ಕೃಷಿ ಉತ್ಪನ್ನ ಆಗಿರುವುದರಿಂದ ನಿಗದಿತ ಜಾಗ ತಲುಪಲು ವಿಳಂಬಗೊಂಡು ನಷ್ಟ ಅನುಭವಿಸುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಸದ್ಯ ಭಾರತ ಈಗ 13 ಲಕ್ಷ ರೂ. ಮೆಟ್ರಿಕ್‌ ಟನ್‌ ಗೇರು ಆಮದಿನ ಮೇಲೆ ಅವಲಂಬಿತವಾಗಿದೆ. ರಾಜ್ಯದಲ್ಲಿ 3 ಲಕ್ಷ ಟನ್‌ ಗೇರುಬೀಜಕ್ಕೆ ಬೇಡಿಕೆಯಿದ್ದು ಇದರಲ್ಲಿ ಸುಮಾರು 50 ಸಾವಿರ ಟನ್‌ ಗೇರುಬೀಜ ಮಾತ್ರ ರಾಜ್ಯದಲ್ಲಿ ಉತ್ಪಾದನೆಯಾಗುತ್ತಿದೆ. ಉಳಿದ ಸುಮಾರು 2.50 ಲಕ್ಷ ಟನ್‌ ಗೇರುಬೀಜವನ್ನು ಆಫ್ರಿಕಾ ಸಹಿತ ಬೇರೆ ದೇಶದಿಂದ ಆಮದು ಮಾಡಲಾಗುತ್ತಿದೆ. ಆದರೆ ಇದೀಗ ಕಚ್ಚಾ ಗೋಡಂಬಿ ಸಕಾಲದಲ್ಲಿ ಪೂರೈಕೆಯಾಗದೇ ಇದ್ದರೆ ಫ್ಯಾಕ್ಟರಿಯಲ್ಲಿ ಕಾರ್ಮಿಕರಿಗೆ ಕೆಲಸ ಇಲ್ಲದಂತಹ ಪರಿಸ್ಥಿತಿ ಸನ್ನಿಹಿತವಾಗಲಿದೆ.

ಕರಾವಳಿಯಲ್ಲಿರುವ ಕೆಲವೇ ಕೆಲವು ಸಾಂಪ್ರದಾಯಿಕ ಉದ್ಯಮಗಳಲ್ಲಿ ಈ ಗೇರು ಉದ್ಯಮವು ಒಂದು. ಆದರೆ ಕೋವಿಡ್ ಬಳಿಕ ಒಂದೊಂದು ಕಾರಣದಿಂದ ಉದ್ಯಮ ನಡೆಸುವುದೇ ಸವಲಾಗುತ್ತಿದ್ದು ರಾಜ್ಯ, ಕೇಂದ್ರ ಸರ್ಕಾರ ನೆರವಿಗೆ ಬರುವಂತೆ ಗೇರು ಉದ್ಯಮಿಗಳು ಒತ್ತಾಯಿಸಿದ್ದಾರೆ. ಸದ್ಯ ಬಂಡುಕೋರರ ದಾಳಿಯಿಂದಲು ಗೇರು ಉದ್ಯಮ ಬಡವಾಗುತ್ತಿದ್ದು ಮುಂದೇನಾಗುತ್ತೆ ಎಂದು ಕಾದುನೋಡಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
VIDEO: ಗ್ಲೆನ್ ಫಿಲಿಪ್ಸ್ ಇದ್ದಾರೆ ಎಚ್ಚರಿಕೆ..!
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಬಂಗಾಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ 7ನೇ ವೇತನ ಆಯೋಗ ಜಾರಿ: ಮೋದಿ
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಮತದಾನ ಮಾಡಲು ಗೋವಾದಿಂದ ಎರಡು ಬಸ್‌ಗಳಲ್ಲಿ ಬಂದ 80 ಮತದಾರರು!
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಯೋಗೇಶ್ ಗೌಡ ಕೊಲೆ ಪ್ರಕರಣ: ಏ. 15ಕ್ಕೆ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ಕಾಂಗ್ರೆಸ್‌ನವರು ನಿನ್ನೆ ರಾತ್ರಿ ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಬೈಕ್​ನಲ್ಲಿ ಬಂದು ಮತ ಚಲಾಯಿಸಿದ ಪುದುಚೇರಿ ಸಿಎಂ ರಂಗಸ್ವಾಮಿ! ವಿಡಿಯೋ ವೈರಲ್
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಪುದುಚೇರಿಯಲ್ಲಿ ಸೀರೆಯುಟ್ಟು ಮತದಾರರನ್ನು ಸ್ವಾಗತಿಸಿದ ರೋಬೋಟ್ ನೀಲಾ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ಹಂಪಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ: ತಪ್ಪಿದ ಭಾರಿ ಅನಾಹುತ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ
ವಿಜಯಪುರದಲ್ಲಿ ಮತ್ತೆ ಭೂಕಂಪನ ಅನುಭವ: ಆತಂಕಕ್ಕೊಳಗಾದ ಜನ