AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್

ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಸಚಿವ ಆನಂದ್ ಸಿಂಗ್ ಸಮಜಾಯಸಿ ನೀಡಿದ್ದಾರೆ.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್
TV9 Web
| Edited By: Rakesh Nayak Manchi|

Updated on:Dec 17, 2022 | 10:34 AM

Share

ಮಂಗಳೂರು: ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸಮಜಾಯಸಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಹೇಳಿಕೆ ಬಗ್ಗೆ ಉಲ್ಟಾ ಹೊಡೆದ ಅವರು, ಮಾಧ್ಯಮ ಸ್ನೇಹಿತರು ನನ್ನ ಹೇಳಿಕೆಯನ್ನ ಸರಿಪಡಿಸಿಕೊಳ್ಳಬೇಕು. ಉತ್ತರ ಕರ್ನಾಟಕ (North Karnataka) ರಾಜ್ಯ ಆಗುತ್ತದೆ, ವಿಜಯನಗರ (Vijayanagara) ರಾಜಧಾನಿ ಆಗುತ್ತದೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂದರು.

ಮುಂದುವರೆದು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ವಿಜಯನಗರ ರಾಜಧಾನಿಯಾದರೆ, ಜಿಲ್ಲಾ ಕೇಂದ್ರ ಯಾವುದಾಗುತ್ತದೆ ಅಂದರೆ ರಾಯಚೂರು, ಬೀದರ್, ಗುಲ್ಬರ್ಗಾ, ಹೊಸಪೇಟೆ, ಬಳ್ಳಾರಿ. ಉತ್ತರ ಕರ್ನಾಟಕ ಅಂದರೆ ನಮ್ಮದು ಕಲ್ಯಾಣ ಕರ್ನಾಟಕ. ಕಲ್ಯಾಣ ಕರ್ನಾಟಕಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅನ್ನೋ ಅರ್ಥದಲ್ಲಿ ಹೇಳಿದ್ದು. ಪ್ರತ್ಯೇಕ ರಾಜ್ಯ ಆಗುತ್ತದೆ ಅನ್ನೋದನ್ನ ಮಾಧ್ಯಮದವರು ಸರಿ ಪಡಿಸಬೇಕು ಎಂದರು.

ಇದನ್ನೂ ಓದಿ: ತುಂಗಭದ್ರಾ ನದಿ ಆಂಧ್ರದಲ್ಲಿದ್ಯಾ? ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು, ವಿವಾದದ ಸುಳಿಯಲ್ಲಿ CBSE ಪಠ್ಯ..!

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ಡಿ.15ರಂದು ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಆನಂದ್ ಸಿಂಗ್, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಮಾತಿನ ಭರದಲ್ಲಿ ಹೇಳಿಕೆ ನೀಡಿದ್ದರು. ಈ ಹಿಂದೆ ಉಮೇಶ್ ಕತ್ತಿ ಅವರು ಕೂಡ ಆಗಾಗ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಹೇಳುತ್ತಿದ್ದರು.

ವಿಜಯನಗರವನ್ನು ಕರ್ನಾಟಕದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್‌ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬಹುದಾ ಎಂಬ ಚರ್ಚೆಗಳು ನಡೆಯುತ್ತಿವೆ. 2020ರಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ 2021ರ ಫೆಬ್ರವರಿ 8ರಂದು ಕರ್ನಾಟಕದಲ್ಲಿ 31ನೇ ಜಿಲ್ಲೆಯನ್ನಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರವು 2020ರ ನವೆಂಬರ್‌ 18ರಂದು ಜಿಲ್ಲೆಯ ರಚನೆಗೆ ಅನುಮೋದನೆ ನೀಡಿ ಅಧಿಸೂಚನೆ ಹೊರಡಿಸಿದ್ದರು.

ತುಳು ನಾಡಿನ ದೈವಗಳ ಬಗ್ಗೆ ಹೆಚ್ಚಿದ ನಂಬಿಕೆ

ತುಳು ನಾಡಿನ ದೈವಗಳ ಬಗ್ಗೆ ಇದೀಗ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಿಗರಲ್ಲಿ ನಂಬಿಕೆ ಹೆಚ್ಚಾಗಿದೆ. ಬೇರೆಬೇರೆ ಕಡೆಗಳಿಂದ ಬರುವ ಜನರು, ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಪ್ರವಾಸಿಗರು ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಟ ಶಿವರಾಜ್ ಕುಮಾರ್ ಅವರು ಕೊರಗಜ್ಜನ ಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿ ಕಲ್ಲುರ್ಟಿ ದೈವದ ಕೋಲ ಸೇವೆಯಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಇದಕ್ಕೂ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Sat, 17 December 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ