AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್

ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಸಚಿವ ಆನಂದ್ ಸಿಂಗ್ ಸಮಜಾಯಸಿ ನೀಡಿದ್ದಾರೆ.

ಪ್ರತ್ಯೇಕ ರಾಜ್ಯ ಹೇಳಿಕೆ: ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿ ಉಲ್ಟಾ ಹೊಡೆದ ಸಚಿವ ಆನಂದ್ ಸಿಂಗ್
ಸಚಿವ ಆನಂದ್ ಸಿಂಗ್
TV9 Web
| Updated By: Rakesh Nayak Manchi|

Updated on:Dec 17, 2022 | 10:34 AM

Share

ಮಂಗಳೂರು: ಉತ್ತರ ಕರ್ನಾಟಕ ರಾಜ್ಯ ಆಗುತ್ತೆ, ವಿಜಯನಗರ ರಾಜಧಾನಿ ಆಗುತ್ತೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅಂತ ಹೇಳಿರುವುದಾಗಿ ತಮ್ಮ ಹೇಳಿಕೆಗೆ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ (Anand Singh) ಸಮಜಾಯಸಿ ನೀಡಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ (Dharmasthala)ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಹೇಳಿಕೆ ಬಗ್ಗೆ ಉಲ್ಟಾ ಹೊಡೆದ ಅವರು, ಮಾಧ್ಯಮ ಸ್ನೇಹಿತರು ನನ್ನ ಹೇಳಿಕೆಯನ್ನ ಸರಿಪಡಿಸಿಕೊಳ್ಳಬೇಕು. ಉತ್ತರ ಕರ್ನಾಟಕ (North Karnataka) ರಾಜ್ಯ ಆಗುತ್ತದೆ, ವಿಜಯನಗರ (Vijayanagara) ರಾಜಧಾನಿ ಆಗುತ್ತದೆ ಅಂತ ಹೇಳಿಲ್ಲ. ಉತ್ತರ ಕರ್ನಾಟಕದಲ್ಲಿ ಬಿಜೆಪಿ‌ ಪಕ್ಷಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಎಂದರು.

ಮುಂದುವರೆದು ಮಾತನಾಡಿದ ಅವರು, ಉತ್ತರ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ವಿಜಯನಗರ ರಾಜಧಾನಿಯಾದರೆ, ಜಿಲ್ಲಾ ಕೇಂದ್ರ ಯಾವುದಾಗುತ್ತದೆ ಅಂದರೆ ರಾಯಚೂರು, ಬೀದರ್, ಗುಲ್ಬರ್ಗಾ, ಹೊಸಪೇಟೆ, ಬಳ್ಳಾರಿ. ಉತ್ತರ ಕರ್ನಾಟಕ ಅಂದರೆ ನಮ್ಮದು ಕಲ್ಯಾಣ ಕರ್ನಾಟಕ. ಕಲ್ಯಾಣ ಕರ್ನಾಟಕಕ್ಕೆ ವಿಜಯನಗರ ರಾಜಧಾನಿ ಆಗುತ್ತದೆ ಅನ್ನೋ ಅರ್ಥದಲ್ಲಿ ಹೇಳಿದ್ದು. ಪ್ರತ್ಯೇಕ ರಾಜ್ಯ ಆಗುತ್ತದೆ ಅನ್ನೋದನ್ನ ಮಾಧ್ಯಮದವರು ಸರಿ ಪಡಿಸಬೇಕು ಎಂದರು.

ಇದನ್ನೂ ಓದಿ: ತುಂಗಭದ್ರಾ ನದಿ ಆಂಧ್ರದಲ್ಲಿದ್ಯಾ? ಶಿಕ್ಷಣ ಇಲಾಖೆಯಿಂದ ಮತ್ತೊಂದು ಯಡವಟ್ಟು, ವಿವಾದದ ಸುಳಿಯಲ್ಲಿ CBSE ಪಠ್ಯ..!

ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭಟ್ಟರಳ್ಳಿ ಗ್ರಾಮದ ಆಂಜನೇಯ ದೇಗುಲದ ಬಳಿ ಡಿ.15ರಂದು ಬಿಜೆಪಿ ಕಚೇರಿ ಶಂಕುಸ್ಥಾಪನೆ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಆನಂದ್ ಸಿಂಗ್, ಜಿಲ್ಲಾ ಕೇಂದ್ರದಲ್ಲಿ ಅರ್ಧ ಎಕರೆ ಪ್ರದೇಶದಲ್ಲಿ ಜಿಲ್ಲಾ ಕಚೇರಿ ಕಾಮಗಾರಿ ಆರಂಭವಾಗಿದೆ. ವಿಜಯನಗರ ಸಾಮ್ರಾಜ್ಯ ನೆಲದ ಗುಣವೇ ವಿಶೇಷ. ಆದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾದರೆ ನೂತನ ವಿಜಯನಗರ ಜಿಲ್ಲೆ ರಾಜಧಾನಿಯಾಗುವ ಸಾಧ್ಯತೆ ಇದೆ ಎಂದು ಮಾತಿನ ಭರದಲ್ಲಿ ಹೇಳಿಕೆ ನೀಡಿದ್ದರು. ಈ ಹಿಂದೆ ಉಮೇಶ್ ಕತ್ತಿ ಅವರು ಕೂಡ ಆಗಾಗ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗಿನ ಬಗ್ಗೆ ಹೇಳುತ್ತಿದ್ದರು.

ವಿಜಯನಗರವನ್ನು ಕರ್ನಾಟಕದ 31ನೇ ಜಿಲ್ಲೆಯಾಗಿಸಿದ ಕೀರ್ತಿ ಸಚಿವ ಆನಂದ್ ಸಿಂಗ್‌ ಅವರಿಗೆ ಸಲ್ಲುತ್ತದೆ. ಹೀಗಾಗಿ ಅವರ ಈ ಹೇಳಿಕೆ ಮಹತ್ವ ಪಡೆದಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಬಹುದಾ ಎಂಬ ಚರ್ಚೆಗಳು ನಡೆಯುತ್ತಿವೆ. 2020ರಲ್ಲಿ ಅವಿಭಜಿತ ಬಳ್ಳಾರಿ ಜಿಲ್ಲೆಯಿಂದ ಬೇರ್ಪಡಿಸಿ 2021ರ ಫೆಬ್ರವರಿ 8ರಂದು ಕರ್ನಾಟಕದಲ್ಲಿ 31ನೇ ಜಿಲ್ಲೆಯನ್ನಾಗಿ ವಿಜಯನಗರ ಜಿಲ್ಲೆಯನ್ನು ರಚಿಸಲಾಯಿತು. ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ದ ಬಿಎಸ್‌ ಯಡಿಯೂರಪ್ಪ ನೇತೃತ್ವದ ಸರ್ಕಾರವು 2020ರ ನವೆಂಬರ್‌ 18ರಂದು ಜಿಲ್ಲೆಯ ರಚನೆಗೆ ಅನುಮೋದನೆ ನೀಡಿ ಅಧಿಸೂಚನೆ ಹೊರಡಿಸಿದ್ದರು.

ತುಳು ನಾಡಿನ ದೈವಗಳ ಬಗ್ಗೆ ಹೆಚ್ಚಿದ ನಂಬಿಕೆ

ತುಳು ನಾಡಿನ ದೈವಗಳ ಬಗ್ಗೆ ಇದೀಗ ಹೊರ ಜಿಲ್ಲೆ, ರಾಜ್ಯ ಹಾಗೂ ವಿದೇಶಿಗರಲ್ಲಿ ನಂಬಿಕೆ ಹೆಚ್ಚಾಗಿದೆ. ಬೇರೆಬೇರೆ ಕಡೆಗಳಿಂದ ಬರುವ ಜನರು, ಸೆಲೆಬ್ರಿಟಿಗಳು, ರಾಜಕೀಯ ವ್ಯಕ್ತಿಗಳು, ಪ್ರವಾಸಿಗರು ದೈವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ನಟ ಶಿವರಾಜ್ ಕುಮಾರ್ ಅವರು ಕೊರಗಜ್ಜನ ಸ್ಥಾನಕ್ಕೆ ಭೇಟಿ ನೀಡಿದ್ದರು. ಇದೀಗ ದೈವಾರಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಅಳದಂಗಡಿ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆನಂದ್ ಸಿಂಗ್ ಭೇಟಿ ನೀಡಿದ್ದಾರೆ. ಇಲ್ಲಿ ಕಲ್ಲುರ್ಟಿ ದೈವದ ಕೋಲ ಸೇವೆಯಲ್ಲಿ ಪಾಲ್ಗೊಂಡು ದೈವದ ಗಂಧ ಪ್ರಸಾದ ಸ್ವೀಕರಿಸಿದರು. ಇದಕ್ಕೂ ಮುನ್ನ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯ ಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿದರು.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:30 am, Sat, 17 December 22

ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಜಿಮ್​ನಲ್ಲಿ ವರ್ಕೌಟ್​ ಮಾಡುತ್ತಿರುವಾಗಲೇ ಹೃದಯಾಘಾತದಿಂದ ವ್ಯಕ್ತಿ ಸಾವು
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಪ್ರಯತ್ನಗಳಿಗಿಂತ ಪ್ರಾರ್ಥನೆ ಫಲ ನೀಡುತ್ತದೆ ಎಂದು ನಂಬಿದ್ದೇನೆ: ಶಿವಕುಮಾರ್
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ಹೊತ್ತಿ ಉರಿದ ಮೈಸೂರು-ಉದಯ್​ಪುರ ಪ್ಯಾಲೇಸ್ ಕ್ವೀನ್ ಎಕ್ಸ್​ಪ್ರೆಸ್​ ರೈಲು
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಂದೀಪ್ ಸುರ್ಜೇವಾಲಾ ಭೇಟಿಯ ನಂತರ ಕೊಂಚ ಖಿನ್ನರಾಗಿರುವ ಡಿಸಿಎಂ
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ರಾಯಚೂರು: ಕಾಂಗ್ರೆಸ್ ನಾಯಕಿ ಮನೆ ರಸ್ತೆಗೇ ಇಲ್ಲ ಕಾಂಕ್ರೀಟ್ ಭಾಗ್ಯ!
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಆತ್ಮಹತ್ಯೆಗೆ ಯತ್ನ: ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ ಯುವತಿ ರಕ್ಷಣೆ
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಕಳೆದ ಶುಕ್ರವಾರ ಹಲವಾರು ಸಮಸ್ಯೆಗಳನ್ನು ಭಕ್ತರು ಟಿವಿ9 ಗಮನಕ್ಕೆ ತಂದಿದ್ದರು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಮೋದಿ ಸ್ವಾಗತಕ್ಕೆಂದು ಏರ್​​ಪೋರ್ಟ್​ಗೆ ಈ ದೇಶದ ಸಚಿವ ಸಂಪುಟವೇ ಬಂದಿತ್ತು
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಪೋರ್ಟ್​ ಆಫ್​ ಸ್ಪೇನ್​​ನಲ್ಲಿ ಭೋಜ್ಪುರಿ ಗೀತೆಯೊಂದಿಗೆ ಮೋದಿಗೆ ಸ್ವಾಗತ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ
ಆಷಾಢ ಶುಕ್ರವಾರ: ಮೈಸೂರು ಚಾಮುಂಡೇಶ್ವರಿ ದರ್ಶನಕ್ಕೆ ಬರುವ ಭಕ್ತರೇ ಗಮನಿಸಿ