ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್: ವಾಂತಿ-ಭೇದಿ, ಓರ್ವನ ಸ್ಥಿತಿ ಗಂಭೀರ

ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ಫುಡ್ ಪಾಯಿಸನ್​ನಿಂದ 15 ಕ್ಕೂ ಹೆಚ್ಚು ಕೈದಿಗಳು ಅಸ್ವಸ್ಥರಾಗಿದ್ದಾರೆ. ತೀವ್ರ ಹೊಟ್ಟೆ ನೋವು ಮತ್ತು ವಾಂತಿಯಿಂದ ಬಳಲುತ್ತಿರುವ ಕೈದಿಗಳನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈಲಿನ ಆಹಾರದಲ್ಲಿ ಸಮಸ್ಯೆಯಿರುವ ಬಗ್ಗೆ ಕೈದಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆಯ ತನಿಖೆ ನಡೆಯುತ್ತಿದೆ.

ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್: ವಾಂತಿ-ಭೇದಿ, ಓರ್ವನ ಸ್ಥಿತಿ ಗಂಭೀರ
ಮಂಗಳೂರು ಜೈಲಿನಲ್ಲಿ 40ಕ್ಕೂ ಹೆಚ್ಚು ಕೈದಿಗಳಿಗೆ ಫುಡ್ ಪಾಯಿಸನ್: ವಾಂತಿ-ಭೇದಿ, ಓರ್ವನ ಸ್ಥಿತಿ ಗಂಭೀರ
Edited By:

Updated on: Mar 05, 2025 | 7:47 PM

ಮಂಗಳೂರು, ಮಾರ್ಚ್​ 05: ಫುಡ್ ಪಾಯಿಸನ್ (food poison)​​ ಆಗಿ ಹೊಟ್ಟೆ ನೋವಿನಿಂದ 15 ಕೈದಿಗಳು ನರಳಾಡಿರುವಂತಹ ಘಟನೆ ಮಂಗಳೂರು ಜಿಲ್ಲಾ ಕಾರಾಗೃಹದಲ್ಲಿ ನಡೆದಿದೆ. ಏಕಾಏಕಿ ವಾಂತಿ ಮಾಡುತ್ತಾ ಹೊಟ್ಟೆ ನೋವಿನಿಂದ ಕೈದಿಗಳು ನರಳಾಡಿದ್ದಾರೆ. ಬಳಿಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಕೈದಿಗಳನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಅಸ್ವಸ್ಥ ಕೈದಿಗಳನ್ನ ಸಹ ಕೈದಿಗಳು ತಾವೇ ಹೊತ್ತುತಂದಿದ್ದಾರೆ. ಈ ವೇಳೆ ನಾವು ಆಸ್ಪತ್ರೆಗೆ ಹೋಗುತ್ತೇವೆ ಎಂದು ಕೈದಿಗಳು ಪಟ್ಟು‌ ಹಿಡಿದಿದ್ದರು. ಆಕ್ರೋಶಗೊಂಡಿದ್ದ ಕೈದಿಗಳನ್ನ ವಾಹನದಿಂದ ಕೆಳಗಿಳಿಸಿದ ಪೊಲೀಸರು, ಅಸ್ವಸ್ಥ ಕೈದಿಗಳನ್ನ ವೆನ್ಲಾಕ್​ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಘಟನೆ ಬಳಿಕ ಜೈಲಿನಲ್ಲಿ ಪೊಲೀಸರ ವಿರುದ್ಧ ಕೈದಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಹೇಳಿದ್ದಿಷ್ಟು

ಮಂಗಳೂರು ಕಮಿಷನರ್ ಅನುಪಮ್ ಅಗರ್ವಾಲ್ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಇಂದು ಮಧ್ಯಾಹ್ನ ಉಪಹಾರ ಸೇವಿಸಿದ ಬಳಿಕ ಕೆಲವರು ಹೊಟ್ಟೆ ನೋವು ಎಂದು ಕೈದಿಗಳು ದೂರು ನೀಡಿದ್ದಾರೆ. ಸಂಜೆ 4-30ರ ಬಳಿಕ 40ಕ್ಕೂ ಅಧಿಕ ಕೈದಿಗಳಿಗೆ ಹೊಟ್ಟೆ ನೋವು ಸೇರಿದಂತೆ ವಾಂತಿ ಭೇದಿ ಶುರುವಾಗಿದೆ. ನಮ್ಮ ಪೊಲೀಸ್ ವ್ಯಾನ್ ಮೂಲಕ ಎಲ್ಲಾ ಕೈದಿಗಳನ್ನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. 45 ಜನರನ್ನ ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿದೆ ಎಂದರು.

ಇದನ್ನೂ ಓದಿ
ಹಾಲು ಉತ್ಪಾದಕರ 656 ಕೋಟಿ ರೂ. ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ
ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ
ಬೆಂಗಳೂರಿನ ಹಲವೆಡೆ ಇನ್ನೂ ನಿಂತಿಲ್ಲ ಇಡ್ಲಿ ತಯಾರಿಗೆ ಪ್ಲಾಸ್ಟಿಕ್ ಬಳಕೆ
ಟ್ಯಾಟೂನಿಂದ ಬರುತ್ತೆ ಹೆಚ್​ಐವಿ, ಕ್ಯಾನ್ಸರ್​: ಆರೋಗ್ಯ ಇಲಾಖೆ ಅಲರ್ಟ್

ಇದನ್ನೂ ಓದಿ: ದೇವರ ಪ್ರಸಾದ ಸೇವಿಸಿದ್ದ ಒಂದೇ ಗ್ರಾಮದ 50ಕ್ಕೂ ಹೆಚ್ಚು ಜನ ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ಪಡೆದು ಜೈಲಿಗೆ ಭೇಟಿ ನೀಡಿದ್ದಾರೆ. ನೀರಿನ ಸ್ಯಾಂಪಲ್ ಹಾಗೂ ಆಹಾರವನ್ನ ಪರಿಶೀಲನೆ ಮಾಡಿದ್ದಾರೆ. ಒಬ್ಬ ಕೈದಿ ತುಂಬಾ ಗಂಭೀರ ಸ್ಥಿತಿಯಲ್ಲಿದ್ದು, ಐಸಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದವರು 44 ಜನ ಸಹಜ ಸ್ಥಿತಿಗೆ ಮರಳುತ್ತಿದ್ದಾರೆ. ಬೆಳಗ್ಗಿನ ಆಹಾರದಲ್ಲಿ ಫುಡ್ ಕಂಟಾಮಿನೇಷನ್ ಆಗಿರುವ ಮಾಹಿತಿ ಇದೆ. ಜೈಲಿನ ಮುಖ್ಯ ಅಧೀಕ್ಷಕ ಕೈದಿಗಳಿಗೆ ಅವಲಕ್ಕಿ, ಸಾಂಬಾರ್, ಅನ್ನ ನೀಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಆ ಆಹಾರದಿಂದ ಸಮಸ್ಯೆ ಎಂದು ಹೇಳುತ್ತಿದ್ದಾರೆ. ವಿವಿಧ ವಾರ್ಡ್​ನ ಸುಮಾರು 350 ಕೈದಿಗಳ ಪೈಕಿ 45 ಜನಕ್ಕೆ ಸಮಸ್ಯೆ ಎದುರಾಗಿದೆ. ಈ ಬಗ್ಗೆ ತನಿಖೆ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

ಹಾಸ್ಟೆಲ್​​ನಲ್ಲಿ ತಿಂಡಿ ಸೇವಿಸಿದ್ದ ಮಕ್ಕಳು ಅಸ್ವಸ್ಥ

ಬೆಳಗಿನ ತಿಂಡಿ ಸೇವಿಸಿದ ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಇತ್ತೀಚೆಗೆ ಕೋಲಾರದಲ್ಲಿ ನಡೆದಿತ್ತು. ಕೋಲಾರ ತಾಲ್ಲೂಕು ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮದ ಅಂಬೇಡ್ಕರ್ ಹಾಸ್ಟೆಲ್​​ ದೋಸೆ ಚಟ್ನಿ ತಿಂದಿದ್ದ 20 ಮಕ್ಕಳು ಅಸ್ವಸ್ಥರಾಗಿದ್ದರು. ಅಸ್ವಸ್ಥ ಮಕ್ಕಳನ್ನು ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಯಾವುದೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದರು.

ಇದನ್ನೂ ಓದಿ: ಜೇವರ್ಗಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 17 ವಿದ್ಯಾರ್ಥಿನಿಯರು ಅಸ್ವಸ್ಥ

ಬೆಳಗಿನ ಉಪಹಾರಕ್ಕೆ ದೋಸೆ ಚೆಟ್ನಿ ತಿಂಡಿ ತಿಂದ ನಂತರ ಮಕ್ಕಳಲ್ಲಿ ವಾಂತಿ ಭೇದಿ ಹಾಗೂ ಸುಸ್ತು ಕಾಣಿಸಿಕೊಂಡಿತ್ತು. ಹಾಗಾಗಿ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಮೊದಲಿಗೆ ಅಸ್ವಸ್ಥ ಮಕ್ಕಳನ್ನ ಹಾಸ್ಟೆಲ್ ಸಿಬ್ಬಂದಿ ಮತ್ತು ಪೋಷಕರು ಅಮ್ಮನಲ್ಲೂರು ಆಸ್ಪತ್ರೆಗೆ ಸೇರಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಚಿಂತಾಮಣಿ ನಗರದ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಗಳನ್ನು ರವಾನಿಸಿ ಚಿಕಿತ್ಸೆ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:40 pm, Wed, 5 March 25

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us