AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mangaluru Jaleel Murder Case: ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ

ಮಂಗಳೂರಿನ ಸುರತ್ಕಲ್ ಬಳಿಯ ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ನಡೆದ ಜಲೀಲ್ ಕೊಲೆ ಪ್ರಕರಣದ ನಂತರ ಸುರತ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಅಘೋಷಿತ ಬಂದ್​​ ವಾತಾವರಣ ನಿರ್ಮಾಣವಾಗಿದೆ.

Mangaluru Jaleel Murder Case: ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ
ಕಾಟಿಪಳ್ಳಕ್ಕೆ ಜಲೀಲ್ ಮೃತದೇಹ ರವಾನೆ; ಸುರತ್ಕಲ್ ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ
TV9 Web
| Edited By: Rakesh Nayak Manchi|

Updated on:Dec 25, 2022 | 11:29 AM

Share

ಮಂಗಳೂರು: ಕಾಟಿಪಳ್ಳದಲ್ಲಿ ಚಾಕು ಇರಿದು ಅಬ್ದುಲ್​ ಜಲೀಲ್ ಹತ್ಯೆ ಪ್ರಕರಣ (Abdul Jaleel Murder Case)ದ ನಂತರ ಮಂಗಳೂರು ನಗರ ಹೊರವಲಯದ ಸುರತ್ಕಲ್ (Surathkal) ಸುತ್ತಮುತ್ತ ಅಘೋಷಿತ ಬಂದ್​​ ವಾತಾವರಣ ನಿರ್ಮಾಣವಾಗಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಿವೆ. ಮಂಗಳೂರಿನ ಸುರತ್ಕಲ್ ಪೇಟೆಯಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ (Police Security) ಕೈಗೊಳ್ಳಲಾಗಿದ್ದು. ಸುರತ್ಕಲ್ ಜಂಕ್ಷನ್​ನಲ್ಲಿ 3 ಕೆಎಸ್​ಆರ್​ಪಿ (KSRP) ತುಕಡಿ ನಿಯೋಜನೆ ಮಾಡಲಾಗಿದೆ. ಅಲ್ಲದೆ, ಸುರತ್ಕಲ್ ಪೇಟೆ-ಕಾಟಿಪಳ್ಳ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದ್ದು, ನಗರದ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚುವರಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಮಾತ್ರವಲ್ಲದೆ ಮುನ್ನೆಚ್ಚರಿಕಾ ಕ್ರಮವಾಗಿ ಸುರತ್ಕಲ್​, ಬಜ್ಪೆ, ಕಾವೂರು, ಪಣಂಬೂರಲ್ಲಿ ನಿಷೇಧಾಜ್ಞೆ ಜಾರಿ (144 Section) ಮಾಡಲಾಗಿದೆ.

ಕೊಲೆಯಾದ ಜಲೀಲ್ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದೆ. ಅದರಂತೆ ಪೊಲೀಸರು ಜಲೀಲ್ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಿದ್ದಾರೆ. ಮೃತದೇಹವನ್ನು ಸುರತ್ಕಲ್ ಮೂಲಕ ಬಿಗಿ ಪೊಲೀಸ್ ಭದ್ರತೆ ಮೂಲಕ ಕಾಟಿಪಳ್ಳಕ್ಕೆ ರವಾನಿಸಲಾಗಿದ್ದು, ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಸಹಿತ ಹಿರಿಯ ಪೊಲೀಸ್ ಅಧಿಕಾರಿಗಳು ಭದ್ರತೆ ನೋಡಿಕೊಳ್ಳುತ್ತಿದ್ದಾರೆ. ಸುರತ್ಕಲ್​ನಿಂದ ಕಾಟಿಪಳ್ಳಕ್ಕೆ ಯಾವುದೇ ಅನ್ಯ ವಾಹನಗಳು ತೆರಳದಂತೆ ನಿರ್ಬಂಧ ವಿಧಿಸಲಾಗಿದೆ.

ಇದನ್ನೂ ಓದಿ: ಸುರತ್ಕಲ್​ ಜಲೀಲ್ ಹತ್ಯೆ ಪ್ರಕರಣ: ಪೊಲೀಸರು ಸರಿಯಾದ ಕ್ರಮ ಕೈಗೊಂಡಿಲ್ಲವೆಂದು ಯು.ಟಿ.ಖಾದರ್ ಆಕ್ರೋಶ

ಮಂಗಳೂರು (Mangalore) ಹೊರವಲಯದ ಸುರತ್ಕಲ್​​ನ (Surathkal) ಕಾಟಿಪಳ್ಳ ನಾಲ್ಕನೇ ಬ್ಲಾಕ್​ನಲ್ಲಿ ಜಲೀಲ್ (45) ಎಂಬುವರಿಗೆ  ದುಷ್ಕರ್ಮಿಗಳು ಇಂದು (ಡಿ. 24) ಚಾಕು ಇರಿದಿದ್ದಾರೆ. ಜಲೀಲ್  ಕಾಟಿಪಳ್ಳದ ನೈತಂಗಡಿ ರಸ್ತೆಯಲ್ಲಿರುವ ಲತೀಫಾ ಸ್ಟೋರ್ ಮಾಲಿಕರಾಗಿದ್ದರು. ಸ್ಟೋರ್​ನಲ್ಲಿದ್ದ ಜಲೀಲ್​ಗೆ ದುಷ್ಕರ್ಮಿಗಳ ಗುಂಪು ಚಾಕು ಇರಿದು ಪರಾರಿಯಾಗಿದ್ದರು. ಇದರಿಂದ ತೀರ್ವ ಗಯಗೊಂಡಿದ್ದ ಜಲೀಲ್​ರನ್ನು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ  ಚಿಕಿತ್ಸೆ ಫಲಕಾರಿಯಾಗದೆ ಜಲೀಲ್​ ಸಾವನ್ನಪ್ಪಿದ್ದಾರೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:59 am, Sun, 25 December 22

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?