AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಕಿಗೆ ಕಗ್ಗಂಟಾದ ಮಂಗಳೂರು ಜುವೆಲ್ಲರಿ ಮರ್ಡರ್ ಕೇಸ್, ಆರೋಪಿ ಜಾಡು ಹಿಡಿದು ಉತ್ತರ ಕರ್ನಾಟಕದಲ್ಲಿ ಮೊಕ್ಕಾಂ ಹೂಡಿದ ಖಾಕಿ

ಮಂಗಳೂರಿನಲ್ಲಿ ಹಾಡಹಗಲೇ ಜುವೆಲ್ಲರಿಗೆ ನುಗ್ಗಿ ಕೊಲೆ ಮಾಡಲಾಗಿದ್ದು, ಆಗಿ ವಾರ ಕಳೆಯುತ್ತಾ ಬಂತು. ಆದ್ರೆ ಆರೋಪಿಯ ಜಾಡು ಮಾತ್ರ ಇನ್ನು ಕೂಡ ಸಿಗೊ ಲಕ್ಷಣ ಕಾಣುತ್ತಿಲ್ಲ. 2013 ರ ಬೆಂಗಳೂರಿನ ಎಟಿಎಂ ಹಲ್ಲೆ ಪ್ರಕರಣವನ್ನು ಇದು ನೆನಪಿಸಿದೆ. ಅಸಲಿಗೆ ಜನರು ಕೂಡ ಈ ಕೇಸ್ ಮೇಲೆ ತಲೆಕೆಡೆಸಿಕೊಂಡಿದ್ದು, ಆರೋಪಿಯ ರೇಖಾ ಚಿತ್ರಣವನ್ನು ಬಿಡಿಸಿ ತಾವೇ ಶೇರ್​ ಮಾಡಿಕೊಳ್ಳುತ್ತಿದ್ದಾರೆ.

ಖಾಕಿಗೆ ಕಗ್ಗಂಟಾದ ಮಂಗಳೂರು ಜುವೆಲ್ಲರಿ ಮರ್ಡರ್ ಕೇಸ್, ಆರೋಪಿ ಜಾಡು ಹಿಡಿದು ಉತ್ತರ ಕರ್ನಾಟಕದಲ್ಲಿ ಮೊಕ್ಕಾಂ ಹೂಡಿದ ಖಾಕಿ
ಮಂಗಳೂರು ಜುವೆಲ್ಲರಿ ಶಾಪ್​ ಹತ್ಯೆ ಪ್ರಕರಣ ತಲೆಕೆಡಿಸಿಕೊಂಡ ಪೊಲೀಸರು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 11, 2023 | 5:58 PM

Share

ಮಂಗಳೂರು: ನಗರದ ಹೃದಯ ಭಾಗ ಹಂಪನಕಟ್ಟೆ ಬಳಿಯಿರುವ ಮಂಗಳೂರು ಜುವೆಲ್ಲರಿಯಲ್ಲಿ ಫೆ.03 ರಂದು ಹಾಡಹಗಲೆ ಕೊಲೆಯಾಗಿತ್ತು. ಅಂಗಡಿ ಕೆಲಸಗಾರ ರಾಘವೇಂದ್ರ ಆಚಾರ್​ನನ್ನು ಚೂರಿ ಇರಿದು ಕೊಲೆ ಮಾಡಲಾಗಿತ್ತು. ಕೊಲೆಯಾಗಿ ವಾರ ಕಳೆದರು ಪೊಲೀಸರಿಗೆ ಹಂತಕನ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಕೊಲೆ ಮಾಡಿದ ಬಳಿಕ ಹಂತಕ ಅಲ್ಲಿಂದ ಒಂದು ಆಟೋ ಹಿಡಿದು ರಾಷ್ಟ್ರೀಯ ಹೆದ್ದಾರಿ 66 ಕ್ಕೆ ಹೋಗಿದ್ದಾನೆ. ಅಲ್ಲಿಂದ ಒಂದು ವಾಹನ ಹಿಡಿದು ಉತ್ತರ ಕರ್ನಾಟಕದ ಕಡೆ ಹೋಗಿದ್ದಾನೆ ಎನ್ನುವ ಮಾಹಿತಿ ಪೂಲೀಸರಿಗೆ ಸಿಕ್ಕಿದೆ. ಆದರೆ ಅಲ್ಲಿಂದ ಎಲ್ಲಿಗೆ ಹೋದ ಎಂಬ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ. ಸದ್ಯ ಪೊಲೀಸರು ಆತನ ಜಾಡು ಹಿಡಿಯಲು ತಿಣುಕಾಡುತ್ತಿದ್ದಾರೆ. ಆತನ ಚಲನ ವಲನ ದಾಖಲಾದ ಸಿಸಿಟಿವಿ ಚಿತ್ರಗಳನ್ನು ಸಾರ್ವಜನಿಕವಾಗಿ ಹಂಚಿದ್ದಾರೆ. ಆದ್ರೆ ಆತನ ಮುಖ ಎಲ್ಲೂ ಕಾಣದ ಕಾರಣ ಪೊಲೀಸರಿಗೆ ಆರೋಪಿಯ ಗುರುತು ಪತ್ತೆ ಕಷ್ಟವಾಗುತ್ತಿದೆ.

ಇನ್ನು 2103 ರಲ್ಲಿ ಬೆಂಗಳೂರಿನಲ್ಲಿ ಎಟಿಎಂ ನಲ್ಲಿದ್ದ ಜ್ಯೋತಿ ಉದಯ್ ಮೇಲೆ ಮಧುಕರ್ ರೆಡ್ಡಿ ಎಂಬಾತ ಹಲ್ಲೆ ಮಾಡಿ ಪರಾರಿಯಾಗಿದ್ದ. ಆತನ ಮುಖ ಸಿಸಿಟಿವಿ ಕ್ಯಾಮೆರಾದಲ್ಲಿ ಚನ್ನಾಗಿ ಕಂಡಿದ್ರು ಕೂಡ ಆತನನ್ನು ಹಿಡಿಯುಲು ಮೂರು ವರ್ಷ ಬೇಕಾಯ್ತು. ನಂತರ ಬಂಧಿತನಾದ ಆತನಿಗೆ 12 ವರ್ಷ ಶಿಕ್ಷೆ ಪ್ರಕಟಗೊಂಡಿತ್ತು. ಸದ್ಯ ಈ ಪ್ರಕರಣ ಕೂಡ ಅದರಂತೆ ಆಗುತ್ತಾ ಅನ್ನೊ ಮಾತು ಪೊಲೀಸ್ ವಲಯದಲ್ಲೇ ಕೇಳಿ ಬರುತ್ತಿದೆ. ಯಾಕಂದ್ರೆ ಅದೇ ರೀತಿ ಇದು ಕೂಡ ಕ್ಲೂ ಲೆಸ್ ಕೇಸ್ ಆಗುವಂತೆ ಕಾಣುತ್ತಿದೆ. ಎಟಿಎಂ ಪ್ರಕರಣದ ಸಂತ್ರಸ್ಥೆ ಜ್ಯೋತಿ ಉದಯ್ ಪ್ರಕರಣದಲ್ಲಿ ಆರೋಪಿಯ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಲಾಗಿತ್ತು. ಆದ್ರೆ ಜನರು ಅಷ್ಟೊಂದು ತಲೆ ಕೆಡಿಸಿಕೊಂಡರಲಿಲ್ಲ.

ಇದನ್ನೂ ಓದಿ:ಮಲಯಾಳಿಗಳ ಕಾಟ! ಮಂಗಳೂರು ಏರ್‌ಪೋರ್ಟ್‌ಗೆ ಬರ್ತಿದೆ ಕೋಟ್ಯಂತರ ಮೌಲ್ಯದ ಚಿನ್ನ, ಸಾಥ್​ ನೀಡ್ತಿದಾರೆ ಕೇರಳ ಯುವಕರು! ಏನಿದರ ಒಳಸುಳಿ?

ಆದ್ರೆ ಈ ಪ್ರಕರಣದಲ್ಲಿ ಪೊಲೀಸರು ಸಾರ್ವಜನಿಕರ ಮೊರೆ ಹೋಗಿದ್ದಾರೆ. ಆತನ ಚಿತ್ರಗಳನ್ನು ಶೇರ್ ಮಾಡಿ ಮಾಹಿತಿ ನೀಡಲು ಕೋರಿದ್ದಾರೆ. ಆದ್ರೆ ಜನರು ಒಂದು ಕೈ ಮುಂದೆ ಹೋಗಿ ಆತ ಹೇಗಿರಬಹುದು ಎನ್ನುವ ರೇಖಾ ಚಿತ್ರ ಬರೆದು ಅದನ್ನು ತಾವೇ ಶೇರ್ ಮಾಡಿಕೊಳ್ಳುತ್ತಿದ್ದಾರೆ. ಆದ್ರೆ ಈ ರೇಖಾ ಚಿತ್ರದ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ಸದ್ಯ ಈ ಪ್ರಕರಣವನ್ನು ಬೇಧಿಸಲು ಪೊಲೀಸರ ತಂಡ ಹರಸಾಹಸ ಮಾಡುತ್ತಿದೆ. ಆರೋಪಿಗಾಗಿ ಒಂದು ತಂಡ ಉತ್ತರ ಕರ್ನಾಟಕದಲ್ಲೇ ಬೀಡುಬಿಟ್ಟಿದೆ. ಇನ್ನು ಆತನನ್ನು ಹಿಡಿದ್ರೆ ಮಾತ್ರ ಕರಾವಳಿ ಜನರು ನಿಟ್ಟುಸಿರು ಬಿಡುತ್ತಾರೆ.

ವರದಿ: ಪೃಥ್ವಿರಾಜ್ ಬೊಮ್ಮನಕೆರೆ ಟಿವಿ9 ಮಂಗಳೂರು

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್