ಮಂಗಳೂರು-ಕಾಸರಗೋಡಿನ ನಡುವೆ ಒಂದು ವಾರ ಬಸ್ ಸಂಚಾರ ಸ್ಥಗಿತ

| Updated By: guruganesh bhat

Updated on: Jul 31, 2021 | 9:01 PM

Kerala Covid 19: ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ನಾಳೆಯಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.

ಮಂಗಳೂರು-ಕಾಸರಗೋಡಿನ ನಡುವೆ ಒಂದು ವಾರ ಬಸ್ ಸಂಚಾರ ಸ್ಥಗಿತ
ಸಾಂಕೇತಿಕ ಚಿತ್ರ
Follow us on

ಮಂಗಳೂರು: ಕೇರಳದಲ್ಲಿ ಕೊವಿಡ್ ಪ್ರಕರಣಗಳು ತೀವ್ರಗತಿಯಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಮಂಗಳೂರು-ಕಾಸರಗೋಡು (Mangaluru-Kasaragod) ಮಧ್ಯೆ ಒಂದು ವಾರಗಳ ಕಾಲ ಬಸ್ ಸಂಚಾರ ಸ್ಥಗಿತಕ್ಕೆ ನಿರ್ಧರಿಸಲಾಗಿದೆ. ಕೊವಿಡ್-19 (Covid 19) ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು, ಈ ಕುರಿತು ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ. ನಾಳೆಯಿಂದ ಒಂದು ವಾರಗಳ ಕಾಲ ಕಾಸರಗೋಡಿಗೆ ಬಸ್ ಸಂಚಾರ ಬಂದ್ ಆಗಲಿದ್ದು, ಸರ್ಕಾರಿ ಮತ್ತು ಖಾಸಗಿ ಬಸ್ ಸೇರಿ ಯಾವುದೇ ಬಸ್ ಸಂಚಾರ ಲಭ್ಯವಿರುವುದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಕ್ರಮಗಳನ್ನ ನಡೆಸುವಂತಿಲ್ಲ. ಸಭೆ-ಸಮಾರಂಭಗಳು, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳನ್ನು ಆಗಸ್ಟ್ 10ರವರೆಗೆ ನಡೆಸದಂತೆ ಕ್ರಮ ಕೈಗೊಳ್ಳಲಾಗುವುದು. ಮದುವೆ ಕಾರ್ಯಕ್ರಮಗಳಿಗೆ 50 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ನಿಯಮ ಉಲ್ಲಂಘಿಸಿದರೆ ಮಾಲೀಕರ ಮೇಲೆ ಎಫ್‌ಐಆರ್‌ ದಾಖಲಿಸಲಾಗುವುದು ಎಂದು ತೀರ್ಮಾನಿಸಲಾಗಿದೆ.

ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ನೆಗೆಟಿವ್ ವರದಿ ಕಡ್ಡಾಯವಾಗಿದೆ. ಅಲ್ಲದೇ ವಿದ್ಯಾರ್ಥಿ ನಿಲಯಗಳಲ್ಲಿಯೇ 1 ವಾರ ಕ್ವಾರಂಟೈನ್‍ ಮಾಡಬೇಕಿದೆ. ಕುಟುಂಬದಲ್ಲಿ ಇಬ್ಬರಿಗಿಂತ ಹೆಚ್ಚಿನವರಿಗೆ ಸೋಂಕು ಕಂಡುಬಂದರೆ ಅಂತಹ ಮನೆಯನ್ನು ಮೈಕ್ರೋ ಕಂಟೈನ್‍ಮೆಂಟ್ ಜೋನ್ ಎಂದು ಘೋಷಿಸಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಇದನ್ನೂ ಓದಿ: 

ಕೊರೊನಾ 3ನೇ ಅಲೆ ಆತಂಕ: ಕೊವಿಡ್ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ವೈದ್ಯಕೀಯ ಸೌಲಭ್ಯ ಹೆಚ್ಚಳಕ್ಕೆ ಬಸವರಾಜ ಬೊಮ್ಮಾಯಿ ಸೂಚನೆ

ಕೊವಿಡ್ ಮತ್ತು ಅಪರಾಧ ಚಟುವಟಿಕೆಗಳ ಹೆಚ್ಚಳದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಕಳವಳ 

(Mangaluru Kasaragod Buses stopped by One week due to covid cases increase)

Published On - 8:42 pm, Sat, 31 July 21