ಕೋಟೆಕಾರು ಬ್ಯಾಂಕ್​ ದರೋಡೆ: ಪುಣ್ಯಕ್ಕೆ 6 ಕೋಟಿ ಚಿನ್ನ ಬಿಟ್ಟು ಹೋದ ಖದೀಮರು, ಟೋಲ್​ನಲ್ಲಿ ಕಾರು ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲದ ಕೋಟೆಕಾರು ಬ್ಯಾಂಕ್​ ಕೆ.ಸಿ.ರೋಡ್ ಶಾಖೆಯಲ್ಲಿ ಭಾರೀ ದರೋಡೆ ನಡೆದಿದೆ. ಬೀದರ್ ದರೋಡೆ ಬೆನ್ನಲ್ಲೇ ಇದೀಗ ಮಂಗಳೂರಿನಲ್ಲೂ ಬ್ಯಾಂಕ್ ಕಳ್ಳತನ ನಡೆದಿದ್ದು, ಈಗ ಕರ್ನಾಟಕದಲ್ಲಿ ದೊಡ್ಡ ಸುದ್ದಿಯುಂಟಾಗಿದೆ. ಮಾರಾಕಾಸ್ತ್ರ ತೋರಿಸಿದ ತಂಡ ದರೋಡೆ ನಡೆಸಿದೆ. ಹಾಡಹಗಲೇ ಐದು ಮಂದಿ ಆಗಂತುಕರ ತಂಡದಿಂದ ಈ ಕೃತ್ಯ ನಡೆದಿದ್ದು, ಫಿಯೇಟ್ ಕಾರಿನಲ್ಲಿ ಬಂದ ಐದು ಮಂದಿ ಆಗಂತುಕರ ತಂಡ, ಕೈಗೆ ಸಿಕ್ಕಷ್ಟು ಚಿನ್ನ ಹಾಗೂ ನಗದು ಹಣವನ್ನು ದೋಚಿಕೊಂಡು ಹೋಗಿದೆ. ಇನ್ನು ಈ ಪ್ರಕರಣದ ಲೆಟೆಸ್ಟ್ ಅಪ್ಡೇಟ್ಸ್​ ಇಲ್ಲಿದೆ ನೋಡಿ.

ಕೋಟೆಕಾರು ಬ್ಯಾಂಕ್​ ದರೋಡೆ: ಪುಣ್ಯಕ್ಕೆ 6 ಕೋಟಿ ಚಿನ್ನ ಬಿಟ್ಟು ಹೋದ ಖದೀಮರು, ಟೋಲ್​ನಲ್ಲಿ ಕಾರು ಪತ್ತೆ!
Kotekar Bank Robbery
Edited By:

Updated on: Jan 17, 2025 | 7:15 PM

ಮಂಗಳೂರು, (ಜನವರಿ 17): ಉಳ್ಳಾಲದ ಕೋಟೆಕಾರು ಸೇವಾ ಸಹಕಾರ ಬ್ಯಾಂಕ್​ನಲ್ಲಿ ದರೋಡೆಯಾಗಿದ್ದು, ಚಿನ್ನ ಹಾಗೂ ನಗದು ಹಣ ಸೇರಿದಂತೆ ಸುಮಾರು 10ರಿಂದ 12 ಕೋಟಿಯಷ್ಟು ದೋಚಿಕೊಂಡು ಪರಾರಿಯಾಗಿದ್ದಾರೆ. ಕಿರಾತಕರು ಮುಸುಕುದಾರಿಗಳಾಗಿ ಬಂದು ಕೃತ್ಯ ನಡೆಸಿದ್ದಾರೆ. ಸದ್ಯ ಪ್ರಕರಣದಲ್ಲಿ ಒಂದು ಪ್ರಮುಖ ಬೆಳವಣಿಗೆಯಾಗಿದ್ದು ತಲಪಾಡಿ ಟೋಲ್ ಗೇಟ್​ನಲ್ಲಿ 150 ರೂಪಾಇ ಹಣ ಕೊಟ್ಟು ರಶೀದಿಯನ್ನು ದರೋಡೆಕೋರರು ಪಡೆದ್ದು, ಈ ಬಗ್ಗೆ ಪೊಲೀಸರು ಮಾಹಿತಿಯನ್ನು ಕಲೆ ಹಾಕಿದ್ದಾರೆ. ಇನ್ನು ನಂಬರ್ ಪ್ಲೇಟ್ ಫೇಕ್ ಆಗಿದ್ದರಿಂದ ಕಾರಿಗೆ ಫಾಸ್ಟಾಗ್​ ಇರಲಿಲ್ಲ ಎಂದು ತಿಳಿದು ಬಂದಿದೆ.

ಫೇಕ್ ನಂಬರ್ ಪ್ಲೇಟ್ ಅಳವಡಿಕೆ

ದರೋಡೆಕೋರರು ಕಾರಿಗೆ KA04 MQ9923 ಎಂಬ ನಕಲಿ ನಂಬರ್ ಪ್ಲೇಟ್ ಹಾಕಿಕೊಂಡಿದ್ದಾರೆ. ಈ ನಂಬರ್ ಪ್ಲೇಟ್​ ಡಿಟೇಲ್ ತೆಗೆದು ನೋಡಿದ ಪೊಲೀಸರಿಗೆ ಶಾಕ್​ ಆಗಿದೆ. KA04 MQ9923 ನಂಬರ್ ನ ಅಸಲಿ ಮಾಲೀಕನಿಗೆ ಪೊಲೀಸರು ಕರೆ ಮಾಡಿದಾಗ ಶಾಕ್​ಗೆ ಒಳಗಾಗಿದ್ದಾನೆ. ಈ ಮೂಲಕ ಖದೀಮರು ಫೇಕ್ ನಂಬರ್ ಪ್ಲೇಟ್ ಹಾಕಿರುವುದು ಖಚಿತವಾಗಿದೆ. ತಲಪಾಡಿ ಟೋಲ್ ಗೇಟ್ ಮೂಲಕ ದರೋಡೆಕೋರರು ಕೇರಳದತ್ತ ಪರಾರಿಯಾಗಿದ್ದಾರೆ.  ಹೀಗಾಗಿ ದರೋಡೆಕೋರರ ಜಾಡು ಹಿಡಿದು 2 ಪೊಲೀಸರ ತಂಡ ಕೇರಳದ ಕಾಸರಗೋಡು ಕಡೆ ಹೋಗಿದೆ.

ಇದನ್ನೂ ಓದಿ: ಕೋಟೆಕಾರು ಬ್ಯಾಂಕಿನಲ್ಲಿ 10ರಿಂದ 12 ಕೋಟಿ​ ದರೋಡೆ ಆಗಿದ್ಹೇಗೆ? ಖದೀಮರ ಪಕ್ಕಾ ಪ್ಲ್ಯಾನ್ ಹೇಗಿತ್ತು ಗೊತ್ತಾ?

12ಕೆಜಿಯಷ್ಟು ಚಿನ್ನ ಬಿಟ್ಟು ಹೋದ ದರೋಡೆಕೋರರು

ಇನ್ನು ದರೋಡೆಕೋರರರು 6 ನಿಮಿಷದಲ್ಲೇ 12 ಕೋಟಿಯಷ್ಟು ಚಿನ್ನ, ನಗದು ಹಣವನ್ನು ನಾಲ್ಕೈದು ಚೀಲದಲ್ಲಿ ತುಂಬಿಕೊಂಡು ಹೋಗಿದ್ದಾರೆ. ಆ ಆರು ನಿಮಿಷರಲ್ಲಿ ಎಷ್ಟು ಸಾಧ್ಯವೋ ಅಷ್ಟು ಬೇಗ ಎಲ್ಲವನ್ನು ದೋಚಿ ಓಡಿಹೋಗುವ ಪ್ಲ್ಯಾನ್​ನಲ್ಲಿದ್ದರು. ಇದೇ ಆತುರದಲ್ಲಿ ಸುಮಾರು 6 ಕೋಟಿ ರೂಪಾಯಿ ಮೌಲ್ಯದಷ್ಟು ಚಿನ್ನವನ್ನು ಬಿಟ್ಟು ಹೋಗಿದ್ದಾರೆ. ಸುಮಾರು 12ಕೆಜಿಯಷ್ಟು ಚಿನ್ನವನ್ನು ಬ್ಯಾಂಕ್​ನಲ್ಲಿಯೇ ಉಳಿಸಿದ್ದು, ಆ ಸಮಯದಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನೂ ದೋಚಿಕೊಂಡು ಹೋಗಿದ್ದಾರೆ. ಎಲ್ಲಾ ಹೊತ್ತುಕೊಂಡು ಹೋಗುವಷ್ಟರಲ್ಲಿ ಒಂದು ಪೊಲೀಸರಿಗೆ ಸಮಯ ಕೊಟ್ಟ ಹಾಗೆ ಆಗುತ್ತೆ. ಇನ್ನೊಂದು ಎತ್ತುಕೊಂಡು ಹೋಗಲು ಭಾರವಾಗುತ್ತೆ ಎಂಬ ಕಾರಣದಿಂದ ಬಿಟ್ಟು ಹೋಗಿರುವ ಶಂಕೆಯಿದೆ.

ಗ್ರಾಹಕರಿಗೆ ಅವರ ಮೊತ್ತ ಸಿಗಲಿದೆ

ಇನ್ನು ಈ ಪ್ರಕರಣವಾದ ಬಳಿಕ ಬ್ಯಾಂಕ್​ನಲ್ಲಿ ಠೇವಣಿ ಇಟ್ಟವರು ಹಾಗೂ ಚಿನ್ನ ಅಡವಿಟ್ಟವರು ಆತಂಕಗೊಂಡಿದ್ದಾರೆ. ನಮ್ಮ ಠೇವಣಿ ಹಣ ವಾಪಸ್ ಬರುತ್ತೋ ಇಲ್ಲೋ ಎನ್ನುವ ಆತಂಕದಲ್ಲಿದ್ದರೆ, ಇನ್ನು ಚಿನ್ನ ಗಿರಿವಿ ಇಟ್ಟ ಮಾಲೀಕರು ಸಹ ಚಿಂತೆ ಮಾಡುತ್ತಿದ್ದಾರೆ. ಇನ್ನು ಇದೀಗ ಗ್ರಾಹಕರ ಬಗ್ಗೆ ಕೋಟೆಕಾರು ಸೇವಾ ಸಹಕಾರ ಬ್ಯಾಂಕ್ ಅಧ್ಯಕ್ಷ ಪ್ರತಿಕ್ರಿಯಿಸಿದ್ದು, 19 ಕೋಟಿಯಷ್ಟು ಇನ್ಯೂರೆನ್ಸ್‌ ಇದೆ, ಗ್ರಾಹಕರು ಗಾಬರಿ ಆಗಬೇಕಿಲ್ಲ. ಇನ್ಯೂರೆನ್ಸ್‌ ಸಂಸ್ಥೆಯವರು ಎಲ್ಲಾ ಸರಿ ಮಾಡೋಣವೆಂದು ಹೇಳಿ ಹೋಗಿದ್ದಾರೆ. ಗ್ರಾಹಕರಿಗೆ ಅವರ ಮೊತ್ತ ಸಿಗಲಿದೆ ಎಂದು ಸ್ಪಷ್ಟಪಡಿಸಿದರು.

Pruthviraj

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More
Follow Us